ಕಲ್ಯಾಣ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿಪಡಿಸಿ: ಡಾ| ಅಪ್ಪ

ಬಸವೇಶ್ವರರು ಮಾನವಕುಲಕ್ಕೆ ನಿಸ್ವಾರ್ಥ ಸೇವೆ ಮತ್ತು "ದಾಸೋಹ' ತತ್ವಶಾಸ್ತ್ರಕ್ಕೆ ಹೊಸ ನಿರ್ದೇಶನ ನೀಡಿದವರು.

Team Udayavani, Apr 7, 2021, 6:29 PM IST

Appa

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಪ್ರವಾಸೋದ್ಯಮ ಕ್ಷೇತ್ರವನ್ನು ಮುಂದಿನ ದಿನಗಳಲ್ಲಿ ಪರಿಣಾಮಕಾರಿ ನಿಟ್ಟಿನಲ್ಲಿ ಅಭಿವೃದ್ಧಿಪಡಿಸುವ ಮೂಲಕ ಈ ಪ್ರದೇಶದ ಶ್ರೀಮಂತ ಪ್ರವಾಸೋದ್ಯಮವನ್ನು ಎತ್ತರಕ್ಕೆ ಬೆಳೆಸಬೇಕೆಂದು ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾ ಧಿಪತಿ ಪೂಜ್ಯ ಡಾ| ಶರಣಬಸವಪ್ಪ ಅಪ್ಪ ರಾಜ್ಯ ಸರ್ಕಾರಕ್ಕೆ ಕೋರಿಕೆ ಸಲ್ಲಿಸಿದರು.

18ನೇ ಶತಮಾನದ ಸಂತ ಶ್ರೀ ಶರಣಬಸವೇಶ್ವರ ಕತೃì ಗದ್ದುಗೆ ದರ್ಶನ ಪಡೆಯಲು ಮಂಗಳವಾರ ಆಗಮಿಸಿದ್ದ, ಪ್ರವಾಸೋದ್ಯಮ, ಪರಿಸರ ವಿಜ್ಞಾನ ಮತ್ತು ಪರಿಸರ ಸಚಿವ ಸಿ.ಪಿ. ಯೋಗೇಶ್ವರ ಅವರಿಗೆ ಜ್ಞಾಪಕ ಪತ್ರ ಸಲ್ಲಿಸಿದರು. ಕಲಬುರಗಿ, ಬೀದರ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಸೇರಿದಂತೆ ಈ ಪ್ರದೇಶದ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರವಾಸೋದ್ಯಮ ಸಾಮರ್ಥ್ಯ ಮತ್ತು ಶ್ರೀಮಂತ ಐತಿಹಾಸಿಕ ಸ್ಮಾರಕಗಳಿವೆ. ಆದರೆ ಸರ್ಕಾರಗಳ ಅಸಕರಾತ್ಮಕ ಮನೋಭಾವದಿಂದಾಗಿ ಈ ಭಾಗದ ಉತ್ಕೃಷ್ಟ ಪ್ರವಾಸೋದ್ಯಮ ಯಾವುದೇ ರೀತಿಯಲ್ಲಿ ಬಳಕೆಯಾಗದೆ ಉಳಿದಿದೆ ಎಂದರು.

ಮುಖ್ಯವಾಗಿ 18 ನೇ ಶತಮಾನದ ಶರಣಬಸವೇಶ್ವರ ದೇಗುಲ ರಾಜ್ಯದ ಪ್ರಮುಖ ಯಾತ್ರಾ ಸ್ಥಳಗಳಲ್ಲಿ ಒಂದಾಗಿದೆ. ರಾಜ್ಯ ಮತ್ತು ರಾಷ್ಟ್ರದ ದೂರದ ಪ್ರದೇಶಗಳಿಂದ ಭಕ್ತರು ದೇಗುಲಕ್ಕೆ ಆಗಮಿಸಿ ದರ್ಶನ ಪಡೆಯುತ್ತಾರೆ. ಶರಣಬಸವೇಶ್ವರರು ಮಾನವಕುಲಕ್ಕೆ ನಿಸ್ವಾರ್ಥ ಸೇವೆ ಮತ್ತು “ದಾಸೋಹ’ ತತ್ವಶಾಸ್ತ್ರಕ್ಕೆ ಹೊಸ ನಿರ್ದೇಶನ ನೀಡಿದವರು.

ದೇವಸ್ಥಾನಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ನಾಗರಿಕ ಸೌಲಭ್ಯಗಳು ಮತ್ತು ಹೆಚ್ಚಿನ ಸಂಖ್ಯೆಯ ಪ್ರವಾಸಿಗರನ್ನು ಆಕರ್ಷಿಸುವುದು ಸೇರಿದಂತೆ ಹೆಚ್ಚಿನ ಸೌಲಭ್ಯಗಳು ಈ ದೇವಾಲಯಕ್ಕೆ ಅಗತ್ಯವಿದೆ ಎಂದು ಹೇಳಿದರು. ಪ್ರತಿವರ್ಷ ಲಕ್ಷಾಂತರ ಯಾತ್ರಾರ್ಥಿಗಳು ಮತ್ತು ಪ್ರವಾಸಿಗರು ದೇವಾಲಯಕ್ಕೆ ಭೇಟಿ ನೀಡುತ್ತಾರೆ. 2017-18 ಮತ್ತು 2018-19ರ ಅವ ಧಿಯಲ್ಲಿ 20 ಲಕ್ಷ ಮತ್ತು 24 ಲಕ್ಷ ಯಾತ್ರಾರ್ಥಿಗಳು ಈ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ಒಂದು ಕೋಟಿ ರೂ. ವೆಚ್ಚದಲ್ಲಿ ವಸತಿ ನಿಲಯ ನಿರ್ಮಿಸುವುದು, 50 ಲಕ್ಷ ರೂ. ವೆಚ್ಚದಲ್ಲಿ ದೇವಾಲಯದ ಆವರಣದ ತೋಟಗಾರಿಕೆ ಸೇರಿದಂತೆ ನಾಗರಿಕ ಸೌಲಭ್ಯಗಳ ಅಭಿವೃದ್ಧಿಗೆ 2.25 ಕೋಟಿ ರೂ. ಮೊತ್ತವನ್ನು ಮಂಜೂರು ಮಾಡುವಂತೆ ಡಾ| ಅಪ್ಪ ಸಚಿವರಿಗೆ ಮನವಿ ಮಾಡಿದರು. 25 ಲಕ್ಷ ರೂ. ವೆಚ್ಚದಲ್ಲಿ ಆರ್‌ಒ ವಾಟರ್‌ ಪ್ಯೂರಿಫೈಯರ್‌ಗಳನ್ನು ಅಳವಡಿಸಲಾಗುತ್ತಿದೆ. ಪಾಕಿಂìಗ್‌ ಸೌಲಭ್ಯ ಸುಧಾರಿಸಲು 25 ಲಕ್ಷ ರೂ. ಮತ್ತು 25 ಲಕ್ಷ ರೂ. ವೆಚ್ಚದಲ್ಲಿ ಶೌಚಾಲಯಗಳ ನಿರ್ಮಾಣ ಮತ್ತು ನೈರ್ಮಲ್ಯ ಸೌಲಭ್ಯ ನೀಡಲಾಗಿದೆ ಎಂದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.