ಸರಿ ದಾರಿಗೆ ಬಂದ ಈಶಾನ್ಯ ಸಾರಿಗೆ

ಎಲ್ಲ ಬಸ್‌ಗಳು ನಿಗದಿತ ಮಾರ್ಗಗಳಿಗೆ ತೆರಳುವ ಫ್ಲಾಟ್‌ ಫಾರಂಗಳ ಮೇಲೆ ಸಾಲಾಗಿ ನಿಂತಿದ್ದವು.

Team Udayavani, Apr 22, 2021, 6:14 PM IST

Bus

ಕಲಬುರಗಿ: ಆರನೇ ವೇತನ ಆಯೋಗ ಅನ್ವಯ ಸಂಬಳ ಜಾರಿ ಮಾಡಬೇಕೆಂಬ ಬೇಡಿಕೆ ಮುಂದಿಟ್ಟು ಕೊಂಡು ಸಾರಿಗೆ ನೌಕರರು ಮುಷ್ಕರ ಕೈಗೊಂಡಿದ್ದರಿಂದ ಕಳೆದ 15 ದಿನಗಳಿಂದ ಹಳಿ ತಪ್ಪಿದ್ದ ಸರ್ಕಾರಿ ಬಸ್‌ ಗಳು ಬುಧವಾರದಿಂದ ಮತ್ತೆ ಹಳಿಗೆ ಬಂದಿವೆ. ಬಹುಪಾಲು ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಿ ಮೊದಲಿನಂತೆ ಬಸ್‌ಗಳ ಕಾರ್ಯಾಚರಣೆ ನಡೆಸಿದರು.

ವೇತನ ಹೆಚ್ಚಿಸಬೇಕೆಂಬ ಏಕೈಕ ಬೇಡಿಕೆ ಈಡೇರಿಕೆ ಗಾಗಿ ಏ.7ರಿಂದ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದರು. ಆದರೆ, ಮಂಗಳವಾರ ಕೊರೊನಾ ಸಂದರ್ಭದಲ್ಲಿ ಮುಷ್ಕರ ಸರಿಯಲ್ಲ ಎಂದು ಹೈಕೋರ್ಟ್‌ ಹೇಳಿತ್ತು. ನ್ಯಾಯಾಲಯದ ಹೇಳಿಕೆಗೆ ಮನ್ನಣೆ ನೀಡಿ ನೌಕರರು ಬುಧವಾರ ಬೆಳಗ್ಗೆಯೇ ಸ್ವಯಂ ಪ್ರೇರಿತರಾಗಿ ಕರ್ತವ್ಯಕ್ಕೆ ಹಾಜರಾದರು. ಬುಧವಾರ 7500 ಜನ ನೌಕರರು ಕಾರ್ಯ ನಿರ್ವಹಿಸಿದರು.

ಕಲಬುರಗಿ ವಿಭಾಗ -1 ಮತ್ತು ವಿಭಾಗ 2ರ ಸಾರಿಗೆ ಬಸ್‌ಗಳು ಕೇಂದ್ರ ಬಸ್‌ ನಿಲ್ದಾಣದಿಂದ ಸಂಚರಿಸಿದವು. ಸಾರಿಗೆ ನೌಕರರು ತಮ್ಮ-ತಮ್ಮ ಡಿಪೋಗಳಿಗೆ ತೆರಳಿ ಬಸ್‌ಗಳನ್ನು ಬಸ್‌ ನಿಲ್ದಾಣಕ್ಕೆ ತಂದರು. ಇದರಿಂದ 15ದಿನಗಳಿಂದ ನಿಂತಲ್ಲೇ ನಿಂತಿದ್ದ ಅನೇಕ ಬಸ್‌ಗಳು ರಸ್ತೆಗಿಳಿದವು. ಜಿಲ್ಲೆಯ ಬಹುತೇಕ ಭಾಗಗಳು ಮತ್ತು ಹೊರ ಜಿಲ್ಲೆ, ಹೊರ ರಾಜ್ಯಗಳಿಗೆ ಬಸ್‌ಗಳು ಸಂಚರಿಸಿದವು.

ಬೆಳಗ್ಗೆಯಿಂದಲೇ ಬೀದರ್‌, ಯಾದಗಿರಿ, ರಾಯಚೂರು, ವಿಜಯಪುರ, ಬಳ್ಳಾರಿ, ಹೊಸಪೇಟೆ, ಬೆಂಗಳೂರು, ಮಂಗಳೂರು, ಶಿವಮೊಗ್ಗ ಸೇರಿದಂತೆ ಅನೇಕ ಕಡೆಗಳಲ್ಲಿ ಸಾರಿಗೆ ಬಸ್‌ಗಳು ಸೇವೆ ಪುನಾರಂಭಿಸಿದವು. ಮಧ್ಯಾಹ್ನದ ವೇಳೆಗೆ ಕಲಬುರಗಿ 1 ಮತ್ತು 2 ವಿಭಾಗಗಳಿಂದ 120 ಬಸ್‌ಗಳು ಕಾರ್ಯಾಚರಣೆ ನಡೆದಿದ್ದವು. ಅಲ್ಲದೇ, 33 ಬೇರೆ ವಿಭಾಗಗಳ ಸಾರಿಗೆ ಬಸ್‌ಗಳು ಸೇವೆ ನೀಡಿದ್ದವು. ಸಂಜೆ 5ರ ಹೊತ್ತಿಗೆ ಒಟ್ಟಾರೆ ಕಲಬುರಗಿ ವಿಭಾಗ-1ರಿಂದ 140 ಬಸ್‌ಗಳು ಮತ್ತು ವಿಭಾಗ-2ರಿಂದ 124 ಬಸ್‌ ಗಳು ಸಂಚರಿಸಿದ್ದವು.

ಆರನೇ ವೇತನ ಆಯೋಗ ಅನ್ವಯ ಸಂಬಳ ನೀಡಬೇಕೆಂದು ರಾಜ್ಯ ಮಟ್ಟದಲ್ಲಿ ಮುಷ್ಕರ ಕೈಗೊಂಡ ಕಾರಣ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ. ಇಷ್ಟು ದಿನವಾದರೂ ನಮ್ಮ ಬೇಡಿಕೆಗೆ ಸರ್ಕಾರ ಸ್ಪಂದಿಸಿಲ್ಲ. ಆದರೂ, ನ್ಯಾಯಾಲಯದ ಅಭಿಪ್ರಾಯಕ್ಕೆ ಮನ್ನಣೆ ನೀಡಿ, ಮುಂದೆ ನ್ಯಾಯಾಲಯವೇ ನಮಗೆ ನ್ಯಾಯ ಒದಗಿಸುವ ಏಕೈಕ ಭರವಸೆಯೊಂದಿಗೆ ಕರ್ತವ್ಯಕ್ಕೆ ಮರಳಿದ್ದೇನೆ ಎಂದು ಸಾರಿಗೆ ಬಸ್‌ ಚಾಲಕರೊಬ್ಬರು ಹೇಳಿದರು.

ಖಾಸಗಿ ಬಸ್‌ಗಳು ವಾಪಸ್‌: ಸಾರಿಗೆ ನೌಕರರ ಮುಷ್ಕರಕ್ಕೆ ಸೆಡ್ಡು ಹೊಡೆಯುವ ನಿಟ್ಟಿನಲ್ಲಿ ಸರ್ಕಾರ ಖಾಸಗಿ ಬಸ್‌ಗಳು ಮತ್ತು ವಾಹನಗಳಿಗೆ ವಿಶೇಷ ಪರವಾನಗಿ ನೀಡಿ ಸಾರಿಗೆ ಬಸ್‌ ನಿಲ್ದಾಣಗಳಿಂದಲೇ ಸಂಚರಿಸಲು ಅವಕಾಶ ಕಲ್ಪಿಸಿತ್ತು. ಹೀಗಾಗಿ ಕಳೆದ ಎರಡು ವಾರಗಳಿಂದ ಬಸ್‌ ನಿಲ್ದಾಣ ದಲ್ಲಿ ಖಾಸಗಿಯವರ ದರ್ಬಾರ್‌ ಕಾಣಿಸಿತ್ತು. ಬುಧವಾರ ಸಾರಿಗೆ ಬಸ್‌ಗಳು ಬಸ್‌ ನಿಲ್ದಾಣಕ್ಕೆ ಬರುತ್ತಿದ್ದಂತೆ ಖಾಸಗಿ ಬಸ್‌ಗಳು ಮತ್ತು ವಾಹನಗಳ ಮಾಲೀಕರು ತಮ್ಮ ಸೇವೆಯನ್ನು ವಾಪಸ್‌ ಪಡೆದರು.

ಕೇಂದ್ರ ಬಸ್‌ ನಿಲ್ದಾಣದಲ್ಲಿ ಮಧ್ಯಾಹ್ನದ ವೇಳೆಗೆ ಎಲ್ಲ ಖಾಸಗಿ ವಾಹನಗಳು ತೆರವಾಗಿದ್ದವು. ಎಲ್ಲೆಡೆ ಸರ್ಕಾರಿ “ಕೆಂಪು’ ಬಸ್‌ಗಳೇ ಕಾಣಿಸುತ್ತಿದ್ದವು. ಸಾರಿಗೆ ಬಸ್‌ಗಳ ಸಂಖ್ಯೆ ಹೆಚ್ಚಾದಂತೆ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆಯೂ ಅಧಿಕವಾಗಿ ಕಂಡು ಬಂತು.

ಸಾರಿಗೆ ಶಿಸ್ತು-ಬದ್ಧತೆ: ಮುಷ್ಕರದಿಂದ ಬಸ್‌ ನಿಲ್ದಾಣಕ್ಕೆ ಎಂಟ್ರಿ ಪಡೆದಿದ್ದ ಖಾಸಗಿಯವರು ಎಲ್ಲೆಂದರಲ್ಲಿ ಬಸ್‌, ವಾಹನಗಳನ್ನು ನಿಲ್ಲಿಸಿದ್ದರು. ಯಾವ ಶಿಸ್ತು ಕಂಡುಬರುತ್ತಿರಲಿಲ್ಲ. ಬಸ್‌ ನಿಲ್ದಾಣದೊಳಗೆ ಹೋದರೆ ಎಲ್ಲವೂ ಅಯೋಮಯ ವಾದಂತೆ ಭಾಸವಾಗುತ್ತಿತ್ತು. ಆದರೆ, ಸಾರಿಗೆ ಬಸ್‌ಗಳು ನಿಲ್ದಾಣದಲ್ಲಿ ತಮ್ಮ ಎಂದಿನ ಶಿಸ್ತು ಬದ್ಧತೆ ಪ್ರದರ್ಶಿಸಿದವು. ಎಲ್ಲ ಬಸ್‌ಗಳು ನಿಗದಿತ ಮಾರ್ಗಗಳಿಗೆ ತೆರಳುವ ಫ್ಲಾಟ್‌ ಫಾರಂಗಳ ಮೇಲೆ ಸಾಲಾಗಿ ನಿಂತಿದ್ದವು. ಪ್ರಯಾಣಿಕರು ಸಲಭವಾಗಿ ಸಾರಿಗೆ ಬಸ್‌ ಹತ್ತಿ ಹೋದರು.

ಅತಂತ್ರ ಸ್ಥಿತಿಯಲ್ಲಿ ನೌಕರರು ಈಶಾನ್ಯ ಸಾರಿಗೆ ವ್ಯಾಪ್ತಿಯಲ್ಲಿ ಸಾರಿಗೆ ಮುಷ್ಕರದಲ್ಲಿ ಪಾಲ್ಗೊಂಡ 77 ನೌಕರರ ವಜಾ ಮತ್ತು 46 ಸಿಬ್ಬಂದಿ ಸೇವೆಯಿಂದ ಅಮಾನತುಗೊಂಡಿದ್ದು, ಇವರೆಲ್ಲರೂ ಈಗ ಅತಂತ್ರ ಸ್ಥಿತಿಗೆ ಸಿಲುಕಿದಂತೆ ಆಗಿದೆ. ಅಲ್ಲದೇ, ಬಸ್‌ಗಳಿಗೆ ಹಾನಿ, ಕರ್ತವ್ಯಕ್ಕೆ ಅಡ್ಡಿ, ಪ್ರಚೋದನೆ ಸಂಬಂಧ ಮತ್ತು ಕೆಸ್ಮಾ ಕಾಯೆx ಅಡಿ 62 ಜನರ ವಿರುದ್ಧ ಒಟ್ಟಾರೆ 33 ಪ್ರಕರಣ ದಾಖಲಾಗಿದೆ. ಬಸ್‌ಗಳಿಗೆ ಹಾನಿ ಮಾಡಿದ ಪ್ರಕರಣದಲ್ಲಿ 15 ಜನರ ಪೈಕಿ 9 ಸಿಬ್ಬಂದಿ ಬಂಧನಕ್ಕೆ ಒಳಗಾಗಿದ್ದಾರೆ.

ಮುಷ್ಕರದ ಸಂದರ್ಭದಲ್ಲಿ ಸೇವೆಯಿಂದ ವಜಾಗೊಂಡವರವನ್ನು ಮತ್ತೆ ಸೇವೆಗೆ ಸೇರಿಸಿಕೊಳ್ಳುವ ಚಿಂತನೆ ಸಂಸ್ಥೆ ಮುಂದೆ ಇಲ್ಲ. ನೌಕರರ ಮುಷ್ಕರದಿಂದ ಈಶಾನ್ಯ ಸಾರಿಗೆ ಸಂಸ್ಥೆಗೆ ಏ.7ರಿಂದ 21ರ ವರೆಗೆ 72.50 ಕೋಟಿ ರೂ. ಆದಾಯ ಖೋತಾ ಆಗಿದೆ.
ಎಂ. ಕೂರ್ಮಾರಾವ್‌, ವ್ಯವಸ್ಥಾಪಕ
ನಿರ್ದೇಶಕ, ಎನ್‌ಇಕೆಆರ್‌ಟಿಸಿ

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.