ನೀರಾವರಿ ಸಲಹಾ ಸಮಿತಿ ಸಭೆ ಯಾವಾಗ?


Team Udayavani, Nov 16, 2021, 12:25 PM IST

10niravani

ಹುಣಸಗಿ: ಕೃಷ್ಣಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಹಿಂಗಾರು ಹಂಗಾಮಿನ ಭತ್ತ ಬೆಳೆಯಲು ನೀರಿನ ಚಿಂತೆ ಆರಂಭಿಸಿದರೆ, ಅತ್ತ ಅಧಿಕಾರಿಗಳು ನೀಡುವ ಮಾಹಿತಿ ಪ್ರಕಾರ ಹಿಂಗಾರು ಹಂಗಾಮಿಗೆ ನೀರು ಹರಿಸುವುದು ಬಹುತೇಕ ಅನುಮಾನ ಎನ್ನಲಾಗಿದೆ.

ಕಳೆದ ವರ್ಷ ಆಲಮಟ್ಟಿ ಜಲಾಶಯದಿಂದ ನವೆಂಬರ್‌ ತಿಂಗಳವರೆಗೂ ಒಳ ಹರಿವಿತ್ತು. ಆದರೆ, 2021 ಅಕ್ಟೋಬರ್‌ ಮೊದಲ ವಾರದಲ್ಲಿಯೇ ಆಲಮಟ್ಟಿ ಜಲಾಶಯದಿಂದ ಒಳ ಹರಿವು ಸ್ಥಗಿತಗೊಂಡಿದೆ. ಹೀಗಾಗಿ ನೀರಿನ ಸಂಗ್ರಹ ಲಭ್ಯತೆ ಇಲ್ಲ. ಎಲ್ಲದಕ್ಕೂ ಸಲಹಾ ಸಮಿತಿ ಕೈಗೊಳ್ಳುವ ನಿರ್ಣಯವೇ ಅಂತಿಮ ಎಂದು ಕೆಬಿಜೆಎನ್ನೆಲ್‌ ಮೂಲಗಳಿಂದ ತಿಳಿದು ಬಂದಿದೆ.

ಈಗಾಗಲೇ ಬಸವಸಾಗರ ಹಾಗೂ ಆಲಮಟ್ಟಿ ಜಲಾಶಯ ಸೇರಿ 80 ಟಿಎಂಸಿ ಅಡಿ ನೀರಿನ ಸಂಗ್ರಹ ಇದೆ. ಇದರಲ್ಲಿ 20 ಟಿಎಂಸಿ ಅಡಿ ಕುಡಿವ ನೀರಿಗೆ ಹಾಗೂ ಉಳಿದ 40 ಟಿಎಂಸಿ ಅಡಿ ನೀರಿನಲ್ಲಿ ಜಲಚರ ಬೆಡ್‌ ಸ್ಟೋರೇಜ್‌ 20 ಟಿಎಂಸಿ ಅಡಿ ನೀರು ಸಂಗ್ರಹ ಬೇಕು. ಇದೆಲ್ಲವೂ ಲೆಕ್ಕಿಸಿದಾಗ ವಾರಾಬಂಧಿ ಪದ್ಧತಿ ಅನುಸರಿಸಿದರೆ ಮಾ.15ರವರೆಗೆ ನೀರು ಹರಿಸಬಹುದು ಎನ್ನುತ್ತಾರೆ ಮುಖ್ಯ ಕಾರ್ಯನಿರ್ವಾಹಕ ಅಭಿಯಂತರ ಶಂಕರ ನಾಡಿ.

ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಭತ್ತ, ಕಬ್ಬು ನಿಷೇಧಿತ ಬೆಳೆಯಾಗಿವೆ. ಹೀಗಾಗಿ ಕಡಿಮೆ ಅವಧಿಯಲ್ಲಿ ಅಂದರೆ ಮೂರು ತಿಂಗಳಲ್ಲಿಯೇ ಕೈಗೆ ಬರುವ ಬೆಳೆ ಬೆಳೆಯಲು ಈಗಾಗಲೇ ರೈತರಿಗೆ ಮಾಹಿತಿ ನೀಡಲಾಗಿದೆ. ಪ್ರತಿ ವರ್ಷ ರೈತರಿಗೆ ಇದೇ ರೀತಿ ಹೇಳಿಕೊಂಡು ಬರಲಾಗಿದೆ ಎಂಬುದು ಅಧಿಕಾರಿಗಳ ಮಾತು.

ಇದನ್ನೂ ಓದಿ:ಹಲವು ವಿಶೇಷತೆಗಳನ್ನು ಹೊಂದಿದೆ ಇಂದು ಉದ್ಘಾಟನೆಯಾಗಲಿರುವ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ

ಈಗಾಗಲೇ ಮುಂಗಾರು ಭತ್ತ ಕಟಾವು ನಡೆದಿವೆ. ಹಿಂದಿನ ವರ್ಷದಂತೆ ನೀರು ಹರಿಸುತ್ತಾರೆಂಬ ನಂಬಿಕೆಯಿಂದ ಕೆಲ ರೈತರು ಹಿಂಗಾರು ಭತ್ತ ನಾಟಿಗಾಗಿ ಸಸಿ ಹಾಕಿದ್ದಾರೆ. ಜಲಾಶಯದಲ್ಲಿ ರೈತರಿಗೆ ಬೇಕಾದಷ್ಟು ನೀರು ಸಂಗ್ರಹ ಇದ್ದಾಗಲೂ ಕೃಷ್ಣಾ ನದಿಗೆ ಅನಗತ್ಯ ನೀರು ಹರಿಸಲಾಗಿದೆ ಎನ್ನುವುದು ರೈತರ ಆಕ್ರೋಶ.

ಅ.28, 2016ರಂದು ಹಿಂಗಾರು ಹಂಗಾಮಿಗೆ ನೀರು ಹರಿಸುವ ಕುರಿತು ನೀರಾವರಿ ಸಲಹಾ ಸಮಿತಿ ಸಭೆ ಕರೆದು ಮಾಹಿತಿ ನೀಡಿತ್ತು. ಕಳೆದ ವರ್ಷವೂ ನ.18, 2019ರಂದು ಸಭೆ ನಡೆಸಿತ್ತು. ಆದರೆ ಇದೆಲ್ಲವೂ ನೋಡಿದಾಗ ವರ್ಷ ಗತಿಸಿದಂತೆ ಸಲಹಾ ಸಮಿತಿ ಸಭೆ ಮುಂದೂಡಿಕೊಂಡು ಬರುತ್ತಿರುವುದು ಆಶ್ಚರ್ಯ ಮೂಡಿಸಿದೆ. ಆದಾಗ್ಯೂ ಮುಂಚಿತವಾಗಿಯೇ ಪ್ರತಿ ವರ್ಷ ಅಕ್ಟೋಬರ್‌ ತಿಂಗಳಲ್ಲಿಯೇ ನೀರು ಹರಿಸುವ ಮಾಹಿತಿ ರೈತರಿಗೆ ನೀಡಬೇಕಿತ್ತು. ಆದರೂ ರೈತರ ದುರ್ದೈವವೋ ಏನೋ? ಸಭೆ ನಡೆಸಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಹೀಗಾಗಿ ಈ ಬಾರಿ ಹಿಂಗಾರು ಹಂಗಾಮಿಗೆ ನೀರು ಹರಿಸುವ ಕುರಿತು ನಡೆಸುವ ಸಲಹಾ ಸಮಿತಿ ಸಭೆ ರೈತರಿಗೆ ವರವಾಗಲಿದೆಯೋ? ಇಲ್ಲವೋ ಶಾಪವಾಗಲಿದೆಯೋ? ಎನ್ನುವುದನ್ನು ಕಾದುನೋಡಬೇಕು.

ಸಾಕಷ್ಟು ನೀರಿದ್ದಾಗ ರೈತರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುತ್ತಿದ್ದಾರೆ. ಜಲಾಶಯ ಭರ್ತಿಗೊಂಡಾಗ ನದಿಗೆ ಹರಿಸಿದ್ದು ಏಕೆ?. ಇದೊಂದು ಹುನ್ನಾರ. ರೈತರಿಗೆ ಸಮರ್ಪಕ ನೀರು ಹರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರ ಭಾರೀ ನಷ್ಟ ಅನುಭವಿಸಬೇಕಾಗುತ್ತದೆ. -ಮಲ್ಲಿಕಾರ್ಜುನ ಸತ್ಯಂಪೇಟಿ, ಕ.ರಾ.ರೈ. ಸಂಘ, ರಾಜ್ಯ ಉಪಾಧ್ಯಕ್ಷ

ಈ ಬಾರಿ ಜಲಾಶಯದಲ್ಲಿ ನೀರಿನ ಪ್ರಮಾಣ ಕಡಿಮೆ ಇದೆ. ಕಳೆದ ವರ್ಷ ಒಳಹರಿವು ಇತ್ತು. ಅಕ್ಟೋಬರ್‌ ತಿಂಗಳಿಂದ ಈವರೆಗೂ ಸ್ಥಗಿತಗೊಂಡಿದೆ. ಕಡಿಮೆ ಅವಧಿ ಬೆಳೆ ಬೆಳೆದರೆ ಮಾತ್ರ ರೈತರಿಗೆ ವರದಾನ ಆಗಲಿದೆ. ನ.15ರಿಂದ 22ರೊಳಗಾಗಿ ಸಲಹಾ ಸಮಿತಿ ಸಭೆ ನಡೆಸಬಹುದು. -ಶಂಕರ ನಾಯ್ಕೋಡಿ, ಮುಖ್ಯ ಕಾರ್ಯನಿರ್ವಾಹಕ ಎಂಜಿನಿಯರ್‌, ನಾರಾಯಣಪುರ

-ಬಾಲಪ್ಪ.ಎಂ. ಕುಪ್ಪಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.