ಮಹಿಳೆಯರ ಆಶಾಕಿರಣ ಫುಲೆ: ಮಾಡ್ಯಾಳೆ
Team Udayavani, Jan 10, 2022, 12:32 PM IST
ಆಳಂದ: ಶತಮಾನಗಳಿಂದ ಶೋಷ ಣೆಗೆ ಒಳಗಾಗಿ, ನಾಲ್ಕು ಗೋಡೆಗೆ ಸೀಮಿತವಾಗಿದ್ದ ಮಹಿಳೆಯರಿಗೆ ಅಕ್ಷರ ಕಲಿಸಿ, ಆತ್ಮಾಭಿಮಾನ ಮೂಡಿಸಿ ಪುರುಷರಿಗೆ ಸರಿಸಮನಾಗಿ ನಿಲ್ಲುವಂತೆ ಮಾಡಿರುವ ಸಾವಿತ್ರಿಬಾಯಿ ಫುಲೆ ಮಹಿಳೆಯರ ಬಾಳಿನ ಆಶಾಕಿರಣ ವಾಗಿದ್ದಾರೆ ಎಂದು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಶ್ರೀಶೈಲ ಮಾಡ್ಯಾಳೆ ಹೇಳಿದರು.
ತಾಲೂಕಿನ ಕೊರಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದ ದೇಶದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಯಾಗಿ ಮಾತನಾಡಿ, ಪತಿಯ ಸಹಕಾರದಿಂದ ಸಮಾಜದ ಎಲ್ಲ ಸ್ತರದ ಮಹಿಳೆಯರ ಏಳ್ಗೆಗಾಗಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದರು. ಅನಿಷ್ಟ ಪದ್ಧತಿಗಳ ನಿರ್ಮೂಲನೆಗೆ ಶ್ರಮಿಸಿದರು. ವಿದ್ಯಾರ್ಥಿನಿಯರು ಸಾವಿತ್ರಿಬಾಯಿ ಬದುಕು ಆದರ್ಶವಾಗಿ ಇಟ್ಟುಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಪ್ರಭಾರಿ ಪ್ರಾಂಶುಪಾಲ ಡಾ| ರಾಜಶೇಖರ ಮಾಂಗ್ ಮಾತನಾಡಿ, ಮಹಿಳೆಯರು ಅದರಲ್ಲೂ ಶೋಷಿತ ವರ್ಗದ ಮಹಿಳೆಯರು ಘನತೆ, ಗೌರವದಿಂದ ಜೀವನ ನಡೆಸುತ್ತಿರುವುದು ಫುಲೆ ದಂಪತಿಗಳ ಹೋರಾಟ ಹಾಗೂ ಬಾಬಾ ಸಾಹೇಬ್ ಡಾ| ಬಿ.ಅರ್. ಅಂಬೇಡ್ಕರ್ ತ್ಯಾಗ, ಪರಿಶ್ರಮ ಸದಾ ಸ್ಮರಿಸಬೇಕು ಎಂದು ಹೇಳಿದರು.
ಶಾಲಾ ಸಂಸತ್ತಿನ ಉಪ ಪ್ರಧಾನಿ ವರ್ಷಾ, ನಿಲಯ ಪಾಲಕಿ ನಾಗಮ್ಮ ಆವಟೆ ಹಾಜರಿದ್ದರು. ಚೈತನ್ಯ ವಚನ ಹಾಡಿದರು. ಸಿಂಧೂ ಸ್ವಾಗತಿಸಿದರು. ಸೌಂದರ್ಯ ನಿರೂಪಿಸಿದರು, ಕಾವೇರಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ