ವೈಯಕ್ತಿಕ ಖಾತ್ರಿ ಕಾಮಗಾರಿಗೆ ಹೆಚ್ಚಿನ ಆದ್ಯತೆ
80ಕ್ಕೂ ಹೆಚ್ಚು ಗ್ರಾಪಂಗಳ ವ್ಯಾಪ್ತಿಯಲ್ಲಿ ಕಾಮಗಾರಿ ಕಾರ್ಮಿಕರಿಗೆ 275 ಪ್ರತಿದಿನ ಕೂಲಿ ಪಾವತಿ
Team Udayavani, Apr 23, 2020, 12:22 PM IST
ಯಾದಗಿರಿ: ಉದ್ಯೋಗ ಖಾತ್ರಿ ಕಾಮಗಾರಿಯನ್ನು ಜಿಪಂ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ ಪರಿಶೀಲಿಸಿದರು.
ಯಾದಗಿರಿ: ಗಡಿ ಜಿಲ್ಲೆ ಯಾದಗಿರಿ ಕಳೆದ ಸಾಲಿನಂತೆ ಮಹತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಉತ್ತಮ ಸಾಧನೆ ಮಾಡಿ ರಾಜ್ಯದ ಗಮನ ಸೆಳೆದಿದ್ದು, ಸದ್ಯದ ಸಂಕಷ್ಟದ ಸಮಯದಲ್ಲಿ ಕೂಲಿ ಕಾರ್ಮಿಕರ ಜೀವನಕ್ಕೆ ಆಸರೆ ನೀಡಬೇಕಿದೆ. ವಿಶ್ವವೇ ಕೊರೊನಾದಿಂದ ತತ್ತರಿಸಿ ಹೋಗಿದ್ದು, ಜಿಲ್ಲೆಯಿಂದ ಮಹಾನಗರಗಳಿಗೆ ದುಡಿಮೆಗೆ ತೆರಳಿದ್ದ ಸಾವಿರಾರು ಜನರು ಕೆಲಸ ಕಳೆದುಕೊಂಡು ಜಿಲ್ಲೆಗೆ ಹಿಂತಿರುಗಿದ್ದು, ಇದೀಗ ಕೈಯಲ್ಲಿ ಕೆಲಸವಿಲ್ಲದೇ ಚಿಂತಿಗೀಡಾಗಿದ್ದಾರೆ.
ಪ್ರಸ್ತುತ ಜಿಲ್ಲೆಯಲ್ಲಿ 84, 577 ಕುಟುಂಬಗಳು 1,73, 487 ಉದ್ಯೋಗ ಚೀಟಿ ಹೊಂದಿದ್ದು, 1,27, 231 ಕಾರ್ಮಿಕರಿದ್ದಾರೆ. ಕಾಮಗಾರಿ ಈಗಷ್ಟೇ ವರ್ಷಾರಂಭವಾಗಿದ್ದು, ಕಾಮಗಾರಿಗಳು ಹಂತ ಹಂತವಾಗಿ ಆರಂಭಗೊಳ್ಳುತ್ತಿರುವ ಮಧ್ಯೆಯೇ ಕೊರೊನಾ ಕಾರ್ಮಿಕರ ಜೀವನಕ್ಕೆ ಹೊಡೆತ ಕೊಟ್ಟಿದೆ. ಜಿಲ್ಲೆಯಲ್ಲಿ 123 ಗ್ರಾಪಂಗಳಲ್ಲಿ 80ಕ್ಕೂ ಹೆಚ್ಚು ಗ್ರಾಪಂಗಳ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಕಾಮಗಾರಿ ನಡೆಯುತ್ತಿದೆ. ವೈಯಕ್ತಿಕ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಸಾಮೂಹಿಕ ಕಾಮಗಾರಿ ನಿರ್ವಹಣೆ ವೇಳೆಯೂ ಅಗತ್ಯ ಎಚ್ಚರಿಕೆಗಳನ್ನು ವಹಿಸಲಾಗುತ್ತಿದೆ.
ಕೊರೊನಾ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಪಾಡುವುದು, ಕೈಶುಚಿ, ಮಾಸ್ಕ್ಗಳನ್ನು ಕೂಡ ಕಾರ್ಮಿಕರಿಗೆ ವಿತರಿಸಲಾಗುತ್ತಿದೆ. ಕಾರ್ಮಿಕರ ಆರೋಗ್ಯದತ್ತವೂ ಕಾಳಜಿವಹಿಸಿರುವ ಜಿಲ್ಲಾಡಳಿತ ಶುದ್ಧ ಕುಡಿಯುವ ನೀರು ಮತ್ತು ಪ್ರಥಮ ಚಿಕಿತ್ಸಾ ವ್ಯವಸ್ಥೆಯನ್ನೂ ಮಾಡಿದೆ. ಕಾರ್ಮಿಕರಿಗೆ ಕೂಲಿಯೂ 275 ಪ್ರತಿದಿನಕ್ಕೆ ವಿತರಿಸಲಾಗುತ್ತಿದ್ದು, ಯಾದಗಿರಿ, ಶಹಾಪುರ ಹಾಗೂ ಸುರಪುರ ಸೇರಿ 3638 ಕುಟುಂಬಗಳ 5098 ಜನರು ಮಾತ್ರ ಕೆಲಸ ನಿರ್ವಹಿಸುತ್ತಿದ್ದು, ಯಾದಗಿರಿ ತಾಲೂಕಿನ 26 ಗ್ರಾಪಂ, ಸುರಪುರ 29 ಹಾಗೂ ಶಹಾಪುರ 28 ಗ್ರಾಪಂಗಳಲ್ಲಿ 438 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಜಿಪಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಿಂದ ಮರಳಿದವರಿಗೆ ಕೂಲಿ
ಸದ್ಯ ಜಿಲ್ಲೆಯ ವಡಗೇರಾ ವ್ಯಾಪ್ತಿಯಲ್ಲಿ 27 ಕಾರ್ಮಿಕರು ಹಿಂತಿರುಗಿದ್ದು, ಎಲ್ಲರಿಗೂ ಉದ್ಯೋಗ ಕಾರ್ಡ್ ಮಾಡಿಸಲಾಗಿದೆ. ಕೆಲಸಕ್ಕೆ ಅರ್ಜಿ ಹಾಕಿರುವ ಜನರಿಗೆ ಕೆಲಸ ನೀಡಿ ಸಂಕಷ್ಟದ ಸಮಯಕ್ಕೆ ಖಾತ್ರಿ ನೆರವಾದಂತಾಗಿದೆ.
ಕೂಲಿ ಕೆಲಸವನ್ನೇ ನಂಬಿದೆ ಬಾಣತಿಹಾಳ
ಜಿಲ್ಲೆಯ ಶಹಾಪುರ ತಾಲೂಕಿನ ನಾಗನಟಗಿ ಗ್ರಾಪಂ ವ್ಯಾಪ್ತಿಯ ಬಾಣತಿಹಾಳ ಗ್ರಾಮಸ್ಥರು ಉದ್ಯೋಗ ಖಾತ್ರಿಯನ್ನೇ ಅವಲಂಭಿಸಿದ್ದಾರೆ. ಗ್ರಾಮದ ಜನರಿಗೆ ಒಟ್ಟು 100 ಎಕರೆ ಮಾತ್ರ ಕೃಷಿ ಭೂಮಿಯಿದ್ದು, ಗ್ರಾಮೀಣ ಉದ್ಯೋಗ ಖಾತ್ರಿಯೇ ಇವರ ಜೀವನಕ್ಕೆ ಆಸರೆಯಾಗಿದೆ.
ಮುನ್ನೆಚ್ಚರಿಕೆ ಕ್ರಮ ಪರಿಶೀಲನೆ
ಉದ್ಯೋಗ ಖಾತ್ರಿಗೂ ಕೊರೊನಾ ಆತಂಕ ಸೃಷ್ಟಿಯಾಗಿದೆ. ಸಂಕಷ್ಟದ ಪರಿಸ್ಥಿತಿಯಲ್ಲಿ ಕಾರ್ಮಿಕರ ಜೀವನೋಪಾಯಕ್ಕೆ ತೊಂದರೆಯಾಗದಂತೆ ಕೆಲಸಗಳನ್ನು ಆರಂಭಿಸಲಾಗಿದೆ. ಕಾರ್ಮಿಕರ ಆರೋಗ್ಯದ ಕಾಳಜಿವಹಿಸಿ ನೋಡಲ್ ಅಧಿಕಾರಿಯಾಗಿರುವ ಜಿಪಂ ಉಪಕಾರ್ಯದರ್ಶಿ ಸ್ವತಃ ಕಾಮಗಾರಿ ಸ್ಥಳಗಳಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಪರಿಶೀಲಿಸಿ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ.
ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಕೂಲಿ ಕಾರ್ಮಿಕರಿಗೆ ಲಾಭವಾಗಲೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಕಾಳಜಿ ವಹಿಸಬೇಕು. ಕೂಲಿ
ಕಾರ್ಮಿಕರು ಸಂಕಷ್ಟ ಎದುರಿಸುತ್ತಿರುವ ಪ್ರಸ್ತುತ ದಿನಗಳಲ್ಲಿ ಕನಿಷ್ಠ 2-3 ತಿಂಗಳಾದರೂ ಕೆಲಸ ನೀಡಿ ಅನುಕೂಲ ಕಲ್ಪಿಸಬೇಕು.
ಶರಣಗೌಡ ಗೋಗಲ್,
ರೈತ ಕೃಷಿ ಕಾರ್ಮಿಕ
ಸಂಘದ ಜಿಲ್ಲಾಧ್ಯಕ್ಷ
ಅನೀಲ ಬಸೂದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ