ವರ್ಷ ಕಳೆದರೂ ದುರಸ್ತಿ ಭಾಗ್ಯ ಕಾಣದ ಕೆರೆಗಳು
Team Udayavani, Dec 3, 2021, 1:29 PM IST
ಚಿಂಚೋಳಿ: ಕಳೆದ ವರ್ಷದ ಸುರಿದ ಭಾರೀ ಮಳೆಗೆ ಹೂಡದಳ್ಳಿ, ನಾಗಾಇದಲಾಯಿ ಸಣ್ಣ ನೀರಾವರಿ ಕೆರೆಗಳ ಒಡ್ಡು ಒಡೆದು ಒಂದು ವರ್ಷ ಕಳೆದರೂ ಸಹ ಇನ್ನು ಸರಕಾರದಿಂದ ಯಾವುದು ದುರಸ್ತಿ ಕಾರ್ಯ ನಡೆಸದೇ ಇರುವುದರಿಂದ ಸಣ್ಣ ನೀರಾವರಿ ಕೆರೆಯ ನೀರಿನ ಮೇಲೆ ಅವಲಂಬಿತವಾಗಿರುವ ರೈತರಿಗೆ ಆತಂಕ ತಂದಿದೆ.
ತಾಲೂಕಿನಲ್ಲಿ ಕಳೆದ ವರ್ಷ ಸತತವಾಗಿ ಮುಂಗಾರು ಹಂಗಾಮಿನಲ್ಲಿ ಭಾರಿ ಮಳೆಯಿಂದಾಗಿ ಕಳೆದ ಅ.13ರಂದು ರಾತ್ರಿ ಹೂಡದಳ್ಳಿ, ನಾಗಾಇದಲಾಯಿ ಸಣ್ಣ ನೀರಾವರಿ ಕೆರೆಗಳಿಗೆ ಅ ಧಿಕ ಪ್ರಮಾಣದಲ್ಲಿ ನೀರು ಹರಿದು ಬಂದ ಪ್ರಯುಕ್ತ 1966ರಲ್ಲಿ ನಿರ್ಮಿಸಿದ ಸಣ್ಣ ನೀರಾವರಿ ಕೆರೆಯ ಒಡ್ಡು ಒಡೆದು ಹೋಗಿತ್ತು. ಸಣ್ಣ ನೀರಾವರಿ ಸಚಿವ ಜೆ.ಸಿಮಾಧುಸ್ವಾಮಿ ಅ.6ರಂದು ನಾಗಾಇದಲಾಯಿ ಸಣ್ಣ ನೀರಾವರಿ ಕೆರೆಗೆ ಭೇಟಿ ನೀಡಿ ಸರಕಾರದಿಂದ ಕೆರೆ ದುರಸ್ತಿಗೆ 4 ಕೋಟಿ ರೂ. ನೀಡಿರುವುದರಿಂದ ನಾಲಾ ದುರಸ್ತಿ ಕೆಲಸ ಕೈಕೊಳ್ಳಲಾಗಿದೆ. ಆದರೆ ಕೆರೆಗೆ ಒಡ್ಡು ದುರಸ್ತಿ ಕಾರ್ಯ ನಡೆಸದೇ ಇರುವುದರಿಂದ ಕೆರೆಯ ನೀರಿನ ಮೇಲೆ ಅವಲಂಬಿತ ರೈತರು ಜೋಳ, ತೊಗರಿ, ಕಡಲೆ, ಉಳ್ಳಾಗಡ್ಡಿ, ಮೆಣಸಿನಕಾಯಿ ಬೆಳೆಗಳಿಗೆ ನೀರಿನ ಕೊರತೆ ಉಂಟಾಗುವುದರಿಂದ ರೈತರು ಆತಂಕ ಪಡುವಂತಾಗಿದೆ.
ಮಾಜಿ ಮುಖ್ಯಮಂತ್ರಿ ದಿ| ವೀರೇಂದ್ರ ಪಾಟೀಲರು ಜನ್ಮಸ್ಥಳವಾದ ಹೂಡದಳ್ಳಿ ಗ್ರಾಮದಲ್ಲಿ 1966ರಲ್ಲಿ ಸಣ್ಣ ನೀರಾವರಿ ಕೆರೆಯನ್ನು ನಿರ್ಮಿಸಿದ್ದರು. ಆದರೆ ಮಳೆ ನೀರಿನ ರಭಸಕ್ಕೆ ಕೆರೆ ಒಡ್ಡು ಒಡೆದು ಹೋಗಿದ್ದರಿಂದ ಅದರ ದುರಸ್ತಿ ಕಾರ್ಯಕ್ಕೆ ಸರಕಾರದಿಂದ ಕಳೆದ ಒಂದು ವರ್ಷಗಳಿಂದ ಯಾವುದೇ ಅನುದಾನ ಮಂಜೂರಿಯಾಗದೇ ಇರುವುದರಿಂದ ದುರಸ್ತಿ ಕಾರ್ಯ ನಡೆದಿಲ್ಲ. ಕೆರೆಯ ನೀರಿನ ಮೇಲೆ ಅವಲಂಬಿತರಾಗಿದ್ದ ಹಿಂಗಾರು ಬೆಳೆಗಳಿಗೆ ರೈತರು ನೀರಿನ ಸಮಸ್ಯೆ ಎದುರಿಸಬೇಕಾಗಿದೆ.
ಮಳೆ ಅಭಾವದಿಂದಾಗಿ ತೊಗರಿ ಹೊಲಗಳಲ್ಲಿ ತೇವಾಂಶ ಕೊರತೆಯಿಂದ ಬೆಳೆಗಳು ಹಾನಿಯಾಗುತ್ತಿವೆ. ಜೋಳ, ಕಡಲೆ ಬೆಳೆಗಳಿಗೆ ನೀರಿನ ಅವಶ್ಯಕತೆ ಇರುವುದರಿಂದ ರೈತರಿಗೆ ತೋಚದಂತಾಗಿದೆ. ಕೆರೆ ದುರಸ್ತಿ ಕಾಮಗಾರಿ ನಡೆಸದೇ ಇರುವುದರಿಂದ ಬೆಳೆಗಳು ಬಾಡುತ್ತಿರುವುದರಿಂದ ರೈತರ ಮೊಗದಲ್ಲಿ ನಿರಾಶೆ ಉಂಟುಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಧಾನಸಭಾ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದೆಡೆ ಕಾಂಗ್ರೆಸ್ ಗೆದ್ದಿದೆ: ಡಾ. ಶರಣಪ್ರಕಾಶ
HKE ಚುನಾವಣೆ: ಅಧ್ಯಕ್ಷರಾಗಿ ಶಶೀಲ್ ಜಿ. ನಮೋಶಿ ಆಯ್ಕೆ
PM ಮೋದಿ ಸಮನಾದ ನಾಯಕ ಕಾಂಗ್ರೆಸ್ನಲ್ಲಿಲ್ಲ: ಬಿಎಸ್ವೈ
Kalaburagi; ಅರ್ಧ ಗಂಟೆ ಭಾಷಣದಲ್ಲಿ ಖರ್ಗೆ ಹೆಸರನ್ನೇ ಉಲ್ಲೇಖಿಸದ ಮೋದಿ
Kalaburagi; ಕರ್ನಾಟಕದ ಜನತೆ ಕೋಪಗೊಂಡಿದ್ದಾರೆ, ಎಚ್ಚೆತ್ತುಕೊಂಡಿದ್ದಾರೆ:ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ