ವರ್ಷ ಕಳೆದರೂ ದುರಸ್ತಿ ಭಾಗ್ಯ ಕಾಣದ ಕೆರೆಗಳು
Team Udayavani, Dec 3, 2021, 1:29 PM IST
ಚಿಂಚೋಳಿ: ಕಳೆದ ವರ್ಷದ ಸುರಿದ ಭಾರೀ ಮಳೆಗೆ ಹೂಡದಳ್ಳಿ, ನಾಗಾಇದಲಾಯಿ ಸಣ್ಣ ನೀರಾವರಿ ಕೆರೆಗಳ ಒಡ್ಡು ಒಡೆದು ಒಂದು ವರ್ಷ ಕಳೆದರೂ ಸಹ ಇನ್ನು ಸರಕಾರದಿಂದ ಯಾವುದು ದುರಸ್ತಿ ಕಾರ್ಯ ನಡೆಸದೇ ಇರುವುದರಿಂದ ಸಣ್ಣ ನೀರಾವರಿ ಕೆರೆಯ ನೀರಿನ ಮೇಲೆ ಅವಲಂಬಿತವಾಗಿರುವ ರೈತರಿಗೆ ಆತಂಕ ತಂದಿದೆ.
ತಾಲೂಕಿನಲ್ಲಿ ಕಳೆದ ವರ್ಷ ಸತತವಾಗಿ ಮುಂಗಾರು ಹಂಗಾಮಿನಲ್ಲಿ ಭಾರಿ ಮಳೆಯಿಂದಾಗಿ ಕಳೆದ ಅ.13ರಂದು ರಾತ್ರಿ ಹೂಡದಳ್ಳಿ, ನಾಗಾಇದಲಾಯಿ ಸಣ್ಣ ನೀರಾವರಿ ಕೆರೆಗಳಿಗೆ ಅ ಧಿಕ ಪ್ರಮಾಣದಲ್ಲಿ ನೀರು ಹರಿದು ಬಂದ ಪ್ರಯುಕ್ತ 1966ರಲ್ಲಿ ನಿರ್ಮಿಸಿದ ಸಣ್ಣ ನೀರಾವರಿ ಕೆರೆಯ ಒಡ್ಡು ಒಡೆದು ಹೋಗಿತ್ತು. ಸಣ್ಣ ನೀರಾವರಿ ಸಚಿವ ಜೆ.ಸಿಮಾಧುಸ್ವಾಮಿ ಅ.6ರಂದು ನಾಗಾಇದಲಾಯಿ ಸಣ್ಣ ನೀರಾವರಿ ಕೆರೆಗೆ ಭೇಟಿ ನೀಡಿ ಸರಕಾರದಿಂದ ಕೆರೆ ದುರಸ್ತಿಗೆ 4 ಕೋಟಿ ರೂ. ನೀಡಿರುವುದರಿಂದ ನಾಲಾ ದುರಸ್ತಿ ಕೆಲಸ ಕೈಕೊಳ್ಳಲಾಗಿದೆ. ಆದರೆ ಕೆರೆಗೆ ಒಡ್ಡು ದುರಸ್ತಿ ಕಾರ್ಯ ನಡೆಸದೇ ಇರುವುದರಿಂದ ಕೆರೆಯ ನೀರಿನ ಮೇಲೆ ಅವಲಂಬಿತ ರೈತರು ಜೋಳ, ತೊಗರಿ, ಕಡಲೆ, ಉಳ್ಳಾಗಡ್ಡಿ, ಮೆಣಸಿನಕಾಯಿ ಬೆಳೆಗಳಿಗೆ ನೀರಿನ ಕೊರತೆ ಉಂಟಾಗುವುದರಿಂದ ರೈತರು ಆತಂಕ ಪಡುವಂತಾಗಿದೆ.
ಮಾಜಿ ಮುಖ್ಯಮಂತ್ರಿ ದಿ| ವೀರೇಂದ್ರ ಪಾಟೀಲರು ಜನ್ಮಸ್ಥಳವಾದ ಹೂಡದಳ್ಳಿ ಗ್ರಾಮದಲ್ಲಿ 1966ರಲ್ಲಿ ಸಣ್ಣ ನೀರಾವರಿ ಕೆರೆಯನ್ನು ನಿರ್ಮಿಸಿದ್ದರು. ಆದರೆ ಮಳೆ ನೀರಿನ ರಭಸಕ್ಕೆ ಕೆರೆ ಒಡ್ಡು ಒಡೆದು ಹೋಗಿದ್ದರಿಂದ ಅದರ ದುರಸ್ತಿ ಕಾರ್ಯಕ್ಕೆ ಸರಕಾರದಿಂದ ಕಳೆದ ಒಂದು ವರ್ಷಗಳಿಂದ ಯಾವುದೇ ಅನುದಾನ ಮಂಜೂರಿಯಾಗದೇ ಇರುವುದರಿಂದ ದುರಸ್ತಿ ಕಾರ್ಯ ನಡೆದಿಲ್ಲ. ಕೆರೆಯ ನೀರಿನ ಮೇಲೆ ಅವಲಂಬಿತರಾಗಿದ್ದ ಹಿಂಗಾರು ಬೆಳೆಗಳಿಗೆ ರೈತರು ನೀರಿನ ಸಮಸ್ಯೆ ಎದುರಿಸಬೇಕಾಗಿದೆ.
ಮಳೆ ಅಭಾವದಿಂದಾಗಿ ತೊಗರಿ ಹೊಲಗಳಲ್ಲಿ ತೇವಾಂಶ ಕೊರತೆಯಿಂದ ಬೆಳೆಗಳು ಹಾನಿಯಾಗುತ್ತಿವೆ. ಜೋಳ, ಕಡಲೆ ಬೆಳೆಗಳಿಗೆ ನೀರಿನ ಅವಶ್ಯಕತೆ ಇರುವುದರಿಂದ ರೈತರಿಗೆ ತೋಚದಂತಾಗಿದೆ. ಕೆರೆ ದುರಸ್ತಿ ಕಾಮಗಾರಿ ನಡೆಸದೇ ಇರುವುದರಿಂದ ಬೆಳೆಗಳು ಬಾಡುತ್ತಿರುವುದರಿಂದ ರೈತರ ಮೊಗದಲ್ಲಿ ನಿರಾಶೆ ಉಂಟುಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್