1,803 ವಿದ್ಯಾರ್ಥಿಗಳು ಗೈರು


Team Udayavani, Jun 26, 2020, 5:58 AM IST

1803-students

ಮೈಸೂರು: ಜಿಲ್ಲೆಯಲ್ಲಿ 2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಯಾವುದೇ ಅಡೆ ತಡೆ ಇಲ್ಲದೇ, ವಿದ್ಯಾರ್ಥಿಗಳು ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷಾ ಕೇಂದ್ರಗಳಿಗೆ ತೆರಳಿ, ನಿರಾತಂಕವಾಗಿ ಪರೀಕ್ಷೆ ಬರೆದರು. ಜಿಲ್ಲೆಯ 139 ಪರೀಕ್ಷಾ ಕೇಂದ್ರಗಳಲ್ಲಿ ವ್ಯವಸ್ಥಿತವಾಗಿ ನಡೆಯಿತು. ಯಾವುದೇ ವಿದ್ಯಾರ್ಥಿ ಡಿಬಾರ್‌ ಆದ ಬಗ್ಗೆ ವರದಿಯಾಗಿಲ್ಲ.

ಮೊದಲ ದಿನ ನಡೆದ ದ್ವಿತೀಯ ಕನ್ನಡ/ ಇಂಗ್ಲಿಷ್‌ ಪರೀಕ್ಷೆಯನ್ನು 37,738  ವಿದ್ಯಾರ್ಥಿಗಳ ಪೈಕಿ   35,935 ವಿದ್ಯಾರ್ಥಿಗಳು ಬರೆದಿದ್ದು, 1,803 ವಿದ್ಯಾರ್ಥಿಗಳು ಗೈರಾಗಿದ್ದರು. ಹಾಜರಾತಿ ಕಡಿಮೆ, ಪ್ರವೇಶ ಪತ್ರ ಸಿಗದವರೇ ಹೆಚ್ಚಾಗಿ ಗೈರಾಗಿದ್ದರು. ಜಿಲ್ಲಾದ್ಯಂತ ಯಾವುದೇ ಅಕ್ರಮ ನಡೆದಿಲ್ಲ ಎಂದು ಡಿಡಿಪಿಐ ಪಾಂಡುರಂಗ ಪತ್ರಿಕೆಗೆ ತಿಳಿಸಿದ್ದಾರೆ.

ಕಟ್ಟೆಚ್ಚರ: ಜಿಲ್ಲಾಡಳಿತದಿಂದ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ವ್ಯವಸ್ಥೆ ಮಾಡಲಾಗಿತ್ತು. ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತ ಪೊಲೀಸ್‌ ಬಿಗಿ ಭದ್ರತೆ ಇತ್ತು. ಪೋಷಕರು ಕೂಡ ಪರಸ್ಪರ ಅಂತರ ಕಾಯ್ದುಕೊಂಡರು. ಪರೀಕ್ಷೆ  ಮುಗಿಯುವವರಿಗೂ ಕೇಂದ್ರದ ಮಾರ್ಗದಲ್ಲಿ ಜನ, ವಾಹನ ಸಂಚಾರ ನಿಷೇಧಿಸಲಾಗಿತ್ತು.

2700 ಸಿಬ್ಬಂದಿ ಬಳಕೆ: ಪರೀಕ್ಷಾ ನಿರ್ವಹಣೆಗೆ ಜಿಲ್ಲಾದ್ಯಂತ 2700 ಸಿಬ್ಬಂದಿ ಬಳಕೆ ಮಾಡಿಕೊಳ್ಳಲಾಗಿತ್ತು. ಪರೀಕ್ಷಾ ಕೇಂದ್ರಗಳ ಬಳಿ ಆ್ಯಂಬುಲೆನ್ಸ್‌ ಮತ್ತು ವೈದ್ಯಕೀಯ ತಂಡ ನಿಯೋಜಿಸಲಾಗಿತ್ತು. ನಗರ ಸೇರಿದಂತೆ ಗ್ರಾಮೀಣ  ವಿದ್ಯಾರ್ಥಿಗಳ ಅನುಕೂಲಕ್ಕೆ 56 ಉಚಿತ ಕೆಎಸ್‌ಆರ್‌ಟಿಸಿ ಬಸ್‌ ವ್ಯವಸ್ಥೆ ಕಲ್ಪಿಸಲಾಗಿತ್ತು. ವಿವಿಧ ಸಂಘ ಸಂಸ್ಥೆಗಳು ಪರೀಕ್ಷಾ ಕೇಂದ್ರದ ಬಳಿ ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್, ಸ್ಯಾನಿಟೈಸರ್‌ ವಿತರಿಸಿದರು.

ಪ್ರತ್ಯೇಕ ಕೊಠಡಿ ವ್ಯವಸ್ಥೆ: ಈ ಬಾರಿ ಅಂತರ ಕಾಯ್ದುಕೊಳ್ಳುವ ಸಲುವಾಗಿ ಹೆಚ್ಚುವರಿಯಾಗಿ 12 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿತ್ತು. ಕಂಟೈನ್ಮೆಂಟ್‌ ವಲಯದಿಂದ ಬಂದ 40 ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ  ಬರೆಸಲಾಯಿತು. ಜ್ವರ, ಕೆಮ್ಮು, ನೆಗಡಿಯಿಂದ ಬಳಲುತ್ತಿದ್ದ 4 ವಿದ್ಯಾರ್ಥಿಗಳಿಗೂ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಲಾಗಿದೆ. ಹೊರ ಜಿಲ್ಲೆಯ 271 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 5 ವಿದ್ಯಾರ್ಥಿಗಳು ಗೈರಾಗಿದ್ದರು.

ಸದ್ವಿದ್ಯಾ ಶಾಲೆಗೆ ಶಿಫ್ಟ್: ಕಂಟೈನ್ಮೆಂಟ್‌ ವಲಯದಲ್ಲಿದ್ದ ಅವಿಲಾ ಕಾನ್ವೆಂಟ್‌ ಕಂಟೈನ್ಮೆಂಟ್‌ ಪರೀಕ್ಷಾ ಕೇಂದ್ರವನ್ನು ಮಹಾರಾಣಿ ಪಿಯು ಮತ್ತು ಸದ್ವಿದ್ಯಾ ಶಾಲೆಗೆ ಶಿಫ್ಟ್ ಮಾಡಲಾಗಿತ್ತು. ಪರೀಕ್ಷಾ ಕೇಂದ್ರದ ಆವರಣ ಹಾಗೂ ಹೊರ  ಭಾಗದಲ್ಲಿ ವಿದ್ಯಾರ್ಥಿಗಳು ಗುಂಪುಗೂಡುವುದನ್ನು ತಪ್ಪಿಸಲು ಪ್ರತಿ ವಿದ್ಯಾರ್ಥಿ ನಡುವೆ ಅಂತರ ಕಾಯ್ದುಕೊಳ್ಳುವ ಬಾಕ್ಸ್‌ ಮಾರ್ಕ್‌ ಮಾಡಲಾಗಿತ್ತು. ಎಲ್ಲರೂ ಮಾಸ್ಕ್ ಧರಿಸಿಯೇ ಆಗಮಿಸಿದ್ದರು. ಎಲ್ಲರನ್ನು ಥರ್ಮಲ್‌ ಸ್ಕ್ರೀನಿಂಗ್‌  ಮಾಡಿಯೇ ಒಳಗೆ ಬಿಡಲಾಯಿತು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.