ಅಪಘಾತ ಆಹ್ವಾನಿಸುವ ರಾಷ್ಟ್ರೀಯ ಹೆದ್ದಾರಿ

ಗುಂಡಿಗಳಿಂದ ಕೂಡಿರುವ ಹೆದ್ದಾರಿಯಲ್ಲಿ ಮಳೆ ಬಂದರೆ ಸಂಚಾರ ಅಸಾಧ್ಯ  ಟೋಲ್‌ ಸಂಗ್ರಹಕ್ಕೆ ಸೀಮಿತವಾದ ಪ್ರಾಧಿಕಾರ  

Team Udayavani, Nov 4, 2021, 12:37 PM IST

ಅಪಘಾತ ಆಹ್ವಾನಿಸುವ ರಾಷ್ಟ್ರೀಯ ಹೆದ್ದಾರಿ

ನಂಜನಗೂಡು: ಗುಂಡಿಗಳಿಂದ ಕೂಡಿರುವ ರಾಷ್ಟ್ರೀಯ ಹೆದ್ದಾರಿಯು, ಮಳೆ ಬಂದರೆ ರಭಸವಾಗಿ ನೀರು ಹರಿಯುವ ನಾಲೆಯಂತಾಗುತ್ತದೆ. ರಸ್ತೆಯಲ್ಲಿ ನೀರು ಹರಿಯುವುದರಿಂದ ರಸ್ತೆ ಮಧ್ಯದಲ್ಲಿ ಬಿದ್ದಿರುವ ಗುಂಡಿಗಳು ಕಾಣದಂತಾಗಿದೆ. ಹೀಗಾಗಿ ವಾಹನ ಸವಾರರು ಸಂಚರಿಸಲು ಹರಸಾಹಸ ಪಡಬೇಕಿದೆ. ಹಲವು ಬಿದ್ದು ಗಾಯ ಮಾಡಿಕೊಂಡಿದ್ದಾರೆ. ಸ್ವಲ್ಪ ಆಯ ತಪ್ಪಿದ್ದರೂ ಅಪಘಾತ ಸಂಭವಿಸಿ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇದೆ.

ನಂಜನಗೂಡು-ಮೈಸೂರು ಮಧ್ಯ ದಲ್ಲಿರುವ ರಾಷ್ಟ್ರೀಯ ಹೆದ್ದಾರಿಯು ಅವ್ಯವಸ್ಥೆಗಳ ಆಗರವಾಗಿದೆ. ಇಲ್ಲಿ ಸಂಚರಿಸುವ ವಾಹನ ಗಳಿಂದ ಟೋಲ್‌ ಸುಂಕ ದಿಂದ ಕೋಟಿ ಕೋಟಿ ರೂ. ವಸೂಲಿ ಮಾಡುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು, ವಾಹನ ಸವಾರರಿಗೆ ನೀಡಿರುವ ಕೊಡುಗೆ ಎಂದರೆ ಅದು ಸರಣಿ ಅಪಘಾತ ಹಾಗೂ ಆಸ್ಪತ್ರೆ ವಾಸ ಎಂಬಂತಾಗಿದೆ. ಈ ರೀತಿಯ ಪರಸ್ಥಿತಿ ಇಲ್ಲಿ ನಿರ್ಮಾಣವಾಗಿದೆ.

ಮೈಸೂರು ತಾಲೂಕಿನ ಕಡಕೊಳದಿಂದ ತಾಂಡವಪುರ ಹಾಗೂ ಅಲ್ಲಿಂದ ನಂಜನ ಗೂಡು ತಾಲೂಕಿನ ಮಲ್ಲನಮೂಲೆಯವರಿ ಗಿನ ರಸ್ತೆಯಲ್ಲಿ ಪ್ರಯಾಣಿಕರು ಕೈನಲ್ಲಿ ಜೀವ ಹಿಡಿದು ಸಂಚರಿಸಬೇಕಾಗಿದೆ. ಮಳೆ ನೀರು ಹರಿಯದಂತೆ ವೈಜ್ಞಾನಿಕವಾಗಿ ರಸ್ತೆ ನಿರ್ಮಿಸಬೇಕಿದ್ದ ಅಧಿ ಕಾರಿಗಳು ಹಾಘು ಎಂಜಿನಿಯರ್‌ಗಳ ಎಡವಟ್ಟಿನಿಂದಾಗಿ ಇಂದು ಈ ರಸ್ತೆ ಅಫ‌ ಘಾತಗಳ ಸರಮಾಲೆ ಯನ್ನು ಸೃಷ್ಟಿಸುತ್ತಿದೆ.

ಕಡಕೊಳ ಹಾಗೂ ತಾಂಡವಪುರದ ರೇಷ್ಮೆ ಇಲಾಖೆಯ ಬಳಿ ಕಡಕೊಳ ಹಾಗೂ ಅಡಕನಹಳ್ಳಿ ಕೈಗಾರಿಕಾ ಕೇಂದ್ರಗಳ ಪ್ರದೇಶದಿಂದ ಹರಿದು ಬರುವ ಮಳೆ ನೀರು ಹರಿಯಲು ಚರಂಡಿಯೇ ಇಲ್ಲ. ಹೀಗಾಗಿ ಈ ನೀರೆಲ್ಲ ರಸ್ತೆಯೇ ಮೇಲೆ ಹರಿದು ಅಲ್ಲಿದ್ದ ಗುಂಡಿಗಳು ಸೃಷ್ಟಿಯಾಗಿವೆ. ನೀರು ಹರಿಯುವುದರಿಂದ ಈ ಗುಂಡಿಗಳು ಕಾಣದಂತಾಗಿ ಅಪಘಾತಗಳಿಗೆ ಎಡೆ ಮಾಡಿಕೊಟ್ಟಿದೆ. ತಾಂಡವಪುರ ಹಾಗೂ ಬಂಚಳ್ಳಿಹುಂಡಿ ಹಾಗೂ ಮಲ್ಲನಮೂಲೆ ಬಳಿ ಕೂಡ ಇದೇ ಅವ್ಯವಸ್ಥೆ ಇದೆ. ಹೆದ್ದಾರಿಯ ಅದ್ವಾನದಿಂದಾಗಿ ಅನೇಕರು ಕೈ ಕಾಲು ಮುರಿದುಕೊಂಡು ಆಸ್ಪತ್ರೆ ಸೇರುತ್ತಿದ್ದರೂ ಪ್ರಾಧಿಕಾರ ಮಾತ್ರ ಕಣ್ಣಿದ್ದೂ ಕುರುಡನಂತೆ ವರ್ತಿಸುತ್ತಿದೆ.

ಇದನ್ನೂ ಓದಿ;- ಮಾದಪ್ಪನ ಸನ್ನಿಧಿಯಲ್ಲಿ ದೀಪಾವಳಿ ಜಾತ್ರೆ ಸಂಭ್ರಮ

ನಂಜನಗೂಡು ತಾಲೂಕು ಪತ್ರಕರ್ತರ ಸಂಘದ ಹಾಲಿ ಅಧ್ಯಕ್ಷರೂ ಆಗಿರುವ ಮಹದೇವ ಪ್ರಸಾದ್‌ ಇದೇ ಸ್ಥಳದಲ್ಲಿ ಅಪಘಾತಕ್ಕೀಡಾಗಿ ಕೈ ಮುರಿದು ಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಸಾಕಷ್ಟು ವಾಹನ ಸವಾರರು ಬಿದ್ದು ಗಾಯ ಮಾಡಿಕೊಂಡು ಆಸ್ಪತ್ರೆ ಸೇರಿರುವ ನಿದರ್ಶನಗಳು ಇವೆ. ಇಲ್ಲಿ ಅಪಘಾತ ಸಂಭವಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೇ ನೇರ ಕಾರಣ ಎಂದು ವಾಹನ ಸವಾರರು ದೂರಿದ್ದಾರೆ. ಹೆದ್ದಾರಿ ಪ್ರಾಧಿಕಾರದ ಕಚೇರಿಯೂ ಈಗ ಮೈಸೂರಿನಲ್ಲಿ ಇಲ್ಲವಾಗಿದ್ದು, ಅದಕ್ಕೆ ನೈಜ ಸ್ಥಿತಿಯನ್ನು ತಿಳಿಸುವ ಬಗೆ ಹೇಗೆ ಎಂಬುದೇ ವಾಹನ ಸವಾರರ ಯಕ್ಷಪ್ರಶ್ನೆಯಾಗಿದೆ.

 ಮತ್ತಷ್ಟು ಮಣ್ಣು ಕುಸಿದರೆ ಸಂಚಾರವೇ ಸ್ಥಗಿತ

ರಾಷ್ಟ್ರೀಯ ಹೆದ್ದಾರಿಯ ಏರಿ (ಧರೆ) ಕಡಕೊಳ ಬಳಿ ಈಗ ಕುಸಿಯಲು ಆರಂಭಿಸಿದೆ. ಅಲ್ಲಿ ಕೆಲವೇ ಮೀಟರ್‌ ಅಂತರದಲ್ಲಿರುವ ವರುಣಾ ನಾಲೆಯ ಮೇಲ್ಗಾಲುವೆ ಹಾಗೂ ರೈಲಿನ ಮೇಲ್ಸೇತುವೆ ಬಳಿ ಧರೆಯ ಮಣ್ಣು ಕುಸಿಯತೊಡಗಿದ್ದು, ಅಲ್ಲಿನ ಕಲ್ಲು ಮಣ್ಣುಗಳ ರಾಶಿ ಹೆದ್ದಾರಿಗೆ ಬಂದು ಬೀಳತೊಡಿಗಿದೆ. ಈ ಜಾಗದಲ್ಲಿ ಮತ್ತಷ್ಟು ಕುಸಿತವಾದರೆ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಕುಸಿತ ಸ್ವಲ್ಪ ಹೆಚ್ಚಾದರೆ ಬೆಂಗಳೂರು ನೀಲಗಿರಿ ರಸ್ತೆಯ (ನಂಜನಗೂಡು-ಮೈಸೂರು ಮಧ್ಯೆ) ಸಂಚಾರವೇ ಸ್ಥಗಿತವಾಗುವ ಸಾಧ್ಯತೆ ಇದೆ.

 – ಶ್ರೀಧರ್‌ ಆರ್‌.ಭಟ್‌

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.