Mysore: ಆದಿಚುಂಚನಗಿರಿ ಶ್ರೀಗಳ ಭೇಟಿ ಮಾಡಿದರೆ ತಪ್ಪೇನು: ವಿಜಯೇಂದ್ರ
Team Udayavani, Apr 11, 2024, 9:43 PM IST
ಮೈಸೂರು: ಚುನಾವಣೆ ಸಂದರ್ಭ ಎಲ್ಲಾ ಪಕ್ಷದ ಅಭ್ಯರ್ಥಿಗಳು ಮಠಗಳಿಗೆ ತೆರಳಿ ಸ್ವಾಮೀಜಿಗಳ ಆಶೀರ್ವಾದ ಪಡೆಯುವುದು ಪದ್ಧತಿ. ಹಾಗಾಗಿ ಮೈತ್ರಿ ಅಭ್ಯರ್ಥಿಗಳು ಆದಿಚುಂಚನಗಿರಿ ಶ್ರೀಗಳ ಆಶೀರ್ವಾದ ಪಡೆದುಕೊಂಡಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಶ್ನಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆದಿಚುಂಚನಗಿರಿ ಶ್ರೀಗಳನ್ನು ಮೈತ್ರಿ ಅಭ್ಯರ್ಥಿಗಳು ಭೇಟಿಯಾಗಿದ್ದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಟೀಕಿಸಿರುವುದಕ್ಕೆ ಪ್ರತಿಕ್ರಿಯಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆಗಳನ್ನು ಗಮನಿಸಿದರೆ, ಅವರಿಗೆ ಚುನಾವಣೆ ಫಲಿತಾಂಶದ ವಾಸ್ತವಾಂಶ ತಿಳಿದಿದೆ.
ಹಾಗಾಗಿಯೇ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದರು. ಶಿವಮೊಗ್ಗದಲ್ಲಿ ಈಶ್ವರಪ್ಪ ನಾಮಪತ್ರ ಸಲ್ಲಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನು ಮೈಸೂರಲ್ಲಿ ಇದ್ದೇನೆ. ರಾತ್ರಿ ಕಳೆಯುವುದರೊಳಗೆ ಮ್ಯಾಜಿಕ್ ನಡೆಯುವುದಿಲ್ಲ. ಎಲ್ಲವನ್ನೂ ಕಾದುನೋಡೋಣ ಎಂದರು.