ವಿಶೇಷ ಅಂಚೆ ಲಕೋಟೆ, ಚೀಟಿ ಬಿಡುಗಡೆ

ವ್ಯಂಗ್ಯಚಿತ್ರಕಾರ ಕೆ.ಆರ್‌.ಲಕ್ಷ್ಮಣ್‌ ಜನ್ಮ ಶತಮಾನೋತ್ಸವ ಪ್ರಯುಕ್ತ ಅಂಚೆ ಇಲಾಖೆಯಿಂದ ಸ್ಮರಣೆ

Team Udayavani, Oct 25, 2021, 1:04 PM IST

ವಿಶೇಷ ಅಂಚೆ ಲಕೋಟೆ ಚೀಟಿ ಬಿಡುಗಡೆ

ಮೈಸೂರು: ಭಾರತೀಯ ಅಂಚೆ ಕರ್ನಾಟಕ ವೃತ್ತ ವತಿಯಿಂದ ವ್ಯಂಗ್ಯಚಿತ್ರಕಾರ ಆರ್‌.ಕೆ. ಲಕ್ಷ್ಮಣ್‌ ಅವರ ಜನ್ಮ ಶತಮಾನೋತ್ಸವ ಅಂಗವಾಗಿ ಅವರ ವ್ಯಂಗ್ಯಚಿತ್ರಗಳನ್ನು ಒಳಗೊಂಡ ವಿಶೇಷ ಅಂಚೆ ಲಕೋಟೆ ಹಾಗೂ 3 ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಲಾಯಿತು.

ನಗರದ ನಜರ್‌ಬಾದ್‌ನಲ್ಲಿರುವ ಅಂಚೆ ತರಬೇತಿ ಕೇಂದ್ರದಲ್ಲಿ ಭಾನುವಾರ ನಡೆದ ಕಾರ್ಯಕ್ರಮ ದಲ್ಲಿ ಮೈಸೂರು ವ್ಯಂಗ್ಯಚಿತ್ರಕಾರರ ಸಂಘದ ಸಂಸ್ಥಾಪಕ ಸದಸ್ಯ ಎಂ.ವಿ. ನಾಗೇಂದ್ರ ಬಾಬು ವಿಶೇಷ ಅಂಚೆ ಲಕೋಟೆ ಹಾಗೂ ಮೂರು ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಅವರು, ದೈನಂದಿನ ಜೀವನದ ಸಮಸ್ಯೆ, ಘಟನಾವಳಿಗಳನ್ನು ಇಟು ಕೊಂಡು ವ್ಯಂಗ್ಯಚಿತ್ರ ಮೂಲಕ ವಿಡಂಬನಾತ್ಮಕ ವಾಗಿ ಚಿತ್ರಿಸುತ್ತಿದ್ದ ಲಕ್ಷ್ಮಣ್‌ ಅವರು, ತಮ್ಮ ಮೂರನೆ ವಯಸ್ಸಿನಿಂದಲೇ ಚಿತ್ರಕಲೆಯಲ್ಲಿ ತೊಡಗಿಸಿ ಕೊಂಡಿದ್ದರು. ಅವರ ಇಷ್ಟು ಪ್ರಸಿದ್ಧಿ ಪಡೆದಿರುವ ಹಿಂದೆ ಸಾಕಷ್ಟು ಪರಿಶ್ರಮವಿದೆ ಎಂದು ಸ್ಮರಿಸಿದರು.

ಇದನ್ನೂ ಓದಿ:- ಬಡವರ, ನಿರ್ಗತಿಕರ ನೊಂದವರ ಸೇವೆಯಲ್ಲಿ ಪ್ರತಿಯೊಬ್ಬರ ಸಹಕಾರ ಮುಖ್ಯ: ಸಂಗಮೇಶ ನಿರಾಣಿ

ಭಾರತ ರತ್ನ ಪ್ರಶಸ್ತಿ ನೀಡಿ: ಇಂದು ದೇಶದ ಪ್ರಮುಖ ಕಾದಂಬರಿಗಳಲ್ಲಿ ಗುರುತಿಸಿಕೊಂಡಿ ರುವ ಆರ್‌.ಕೆ. ನಾರಾಯಣ್‌ ಅವರ ಮಾಲ್ಗುಡಿ ಡೇಸ್‌ ಕಾದಂಬರಿ ಹೆಚ್ಚು ಜನಪ್ರಿಯವಾಗಲು ಲಕ್ಷ್ಮಣ್‌ ಚಿತ್ರಗಳು ಪ್ರಮುಖ ಕಾರಣ ಎಂದು ಹೇಳಿದರೆ ತಪ್ಪಾಗಲಾರದು. ತಮ್ಮದೇ ಶೈಲಿಯ ಚಿತ್ರ ರಚನೆ ಮೂಲಕ ಜಗತ್ತಿನ ಪ್ರಖ್ಯಾತ ವ್ಯಂಗ್ಯ ಚಿತ್ರಕಾರರಾಗಿ ಗುರುತಿಸಿಕೊಂಡಿರುವ ಆರ್‌.ಕೆ. ಲಕ್ಷ್ಮಣ್‌ ಅವರಿಗೆ ಭಾರತ ಸರ್ಕಾರ ಮುಂದೆಯಾದರೂ ಭಾರತ ರತ್ನ ಪ್ರಶಸ್ತಿ ನೀಡಬೇಕು. ಇದಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಲಿ ಎಂದು ಮನವಿ ಮಾಡಿದರು.

ಇದಕ್ಕೂ ಮುನ್ನ ಆರ್‌.ಕೆ. ಲಕ್ಷ್ಮಣ್‌ ಅವರ ಜನ್ಮಶತಮಾತೊÕವದ ಅಂಗವಾಗಿ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಮೂವರು ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ನಂತರದ ವ್ಯಂಗ್ಯಚಿತ್ರಕಾರ ಹಾಗೂ ಪತ್ರಕರ್ತ ದೊಡ್ಡಹುಂಡಿ ರಾಜಣ್ಣ ವ್ಯಂಗ್ಯಚಿತ್ರ ರಚನೆಯ ಬಗ್ಗೆ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಕರ್ನಾಟಕ ವೃತ್ತದ ಪ್ರಧಾನ ಅಂಚೆ ಅಧೀಕ್ಷಕಿ ಶಾರದಾ ಸಂಪತ್‌, ಅಂಚೆ ತರಬೇತಿ ಕೇಂದ್ರದ ನಿರ್ದೇಶಕ ಎಂ.ಬಿ. ಗಜಬಾಯ್‌ ಮತ್ತಿತರರು ಇದ್ದರು.

ಜನಜೀವನ ಅವಲೋಕಿಸಿ ಚಿತ್ರ ರಚಿಸುತ್ತಿದ್ದ ಲಕ್ಷ್ಮಣ್‌-

ಮೈಸೂರಿನ ದೇವರಾಜ ಮಾರುಕಟ್ಟೆ, ರೈಲ್ವೆ ನಿಲ್ದಾಣ, ನಗರ ಬಸ್‌ ನಿಲ್ದಾಣ ಸೇರಿದಂತೆ ಜನನಿ ಬಿಡ ಸ್ಥಳಗಳಿಗೆ ಭೇಟಿಕೊಟ್ಟು ಅಲ್ಲಿನ ಜನಜೀವನ ಅವಲೋಕಿಸಿ ವ್ಯಂಗ್ಯಚಿತ್ರ ಬರೆಯುತ್ತಿದ್ದರು. ಆಳುವ ಸರ್ಕಾರಗಳಿಗೆ ಜನರ ಬವಣೆಗಳನ್ನು ತಮ್ಮ ಶೈಲಿಯಲ್ಲಿ ವಿವರಿಸುತ್ತಿದ್ದರು. ಅವರಿಗೆ ಮೈಸೂರಿನ ಕುಕ್ಕರಹಳ್ಳಿ ಕೆರೆ ಇಷ್ಟವಾದ ಸ್ಥಳವಾ ಗಿತ್ತು. ಅಲ್ಲಿನ ಸೂರ್ಯೋದಯ ನೋಡಲು ನಿತ್ಯ ಕೆರೆಗೆ ಭೇಟಿ ಕೊಡುತ್ತಿದ್ದರು ಎಂದು ಮೈಸೂರು ವ್ಯಂಗ್ಯಚಿತ್ರಕಾರರ ಸಂಘದ ಸಂಸ್ಥಾಪಕ ಸದಸ್ಯ ಎಂ.ವಿ. ನಾಗೇಂದ್ರ ಹೇಳಿದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.