ಹುಣಸೂರು: ಮೆರವಣಿಗೆ ಮೂಲಕ ಶಿಕ್ಷಕರ ದಿನಾಚರಣೆ
Team Udayavani, Sep 5, 2022, 12:15 PM IST
ಹುಣಸೂರು: ಶಿಕ್ಷಕರ ದಿನಾಚರಣೆ ಅಂಗವಾಗಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಭಾವಚಿತ್ರವನ್ನು ಶಿಕ್ಷಕ ವೃಂದ ನಗರದಲ್ಲಿ ಮೆರವಣಿಗೆ ನಡೆಸಿದರು.
ಮೆರವಣಿಗೆಗೆ ನಗರಸಭೆ ಅಧ್ಯಕ್ಷೆ ಗೀತಾನಿಂಗರಾಜ್ ಚಾಲನೆ ನೀಡಿದರು.
ಮೆರವಣಿಗೆಯಲ್ಲಿ ಶಾಲಾ ಮಕ್ಕಳ ಪ್ರಭಾತ್ ಭೇರಿಯೊಂದಿಗೆ ಆಕರ್ಷಕ ವೀರಗಾಸೆ, ಡೊಳ್ಳು ಕುಣಿತ, ಗೊಂಬೆ ಕುಣಿತದೊಂದಿಗೆ ನಗರದ ವಿವಿಧ ಶಾಲೆಗಳ ಸುಮಾರು 500ಕ್ಕೂ ಹೆಚ್ಚು ಶಿಕ್ಷಕರು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು.
ನಗರದ ಮುನೇಶ್ವರ ಕಾವಲ್ ಮೈದಾನದಿಂದ ಹೊರಟು ಶಿಕ್ಷಕರ ಭವನದ ವರೆಗೆ ಮೆರವಣಿಗೆಯಲ್ಲಿ ಸಾಗಿಬಂದರು.
ಈ ವೇಳೆ ತಹಶೀಲ್ದಾರ್ ಡಾ.ಅಶೋಕ್, ತಾ.ಪಂ. ಇಓ ಮನು, ಬಿ.ಇ.ಓ. ರೇವಣ್ಣ, ಬಿ.ಆರ್.ಸಿ.ಸಂತೋಷ್ ಕುಮಾರ್, ಶಿಕ್ಷಕರ ಸಂಘದ ಅಧ್ಯಕ್ಷ ನರಸಿಂಹ, ಮಾಜಿ ಅಧ್ಯಕ್ಷ ಚನ್ನವೀರಯ್ಯ, ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಗೋವಿಂದೇಗೌಡ, ರಂಗಸ್ವಾಮಿ, ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ನವೀನ್ ರೈ ಸೇರಿಂತೆ ಶಿಕ್ಷಕರ ವೃದದವರು ಭಾಗವಹಿಸಿದ್ದರು.