ಹುಣಸೂರು: ಚಿರತೆ ದಾಳಿಗೆ ಕರು ಬಲಿ
Team Udayavani, Sep 28, 2022, 12:57 PM IST
ಹುಣಸೂರು: ಮನೆ ಮುಂದೆ ಕಟ್ಟಿ ಹಾಕಿದ್ದ ಇಲಾತಿ ಕರುವನ್ನು ಚಿರತೆ ಕೊಂದು ಹಾಕಿರುವ ಘಟನೆ ತಾಲೂಕಿನ ಪೆಂಜಹಳ್ಳಿಯಲ್ಲಿ ಸೆ.27ರ ರಾತ್ರಿ ನಡೆದಿದೆ.
ಹನಗೋಡು ಹೋಬಳಿಯ ನಿವಾಸಿಯೊಬ್ಬರಿಗೆ ಸೇರಿದ ಇಲಾತಿ ಕರು ಇದಾಗಿದ್ದು, ಸಂಜೆ ಮನೆ ಬಳಿ ಹಸುಗಳನ್ನು ಕಟ್ಟಿ ಹಾಕಿದ್ದರು. ರಾತ್ರಿ ಹಸುಗಳ ಚೀರಾಟ ಕೇಳಿ ಹೊರ ಬಂದ ಸಂದರ್ಭ ಚಿರತೆ ಕಂಡು ಕೂಗಿಕೊಂಡಿದ್ದಾರೆ. ಕೂಗಾಟ ಕೇಳಿ ಕರುವಿನ ಕುತ್ತಿಗೆಯನ್ನು ಕಚ್ಚಿ ಎಳೆದೊಯ್ಯುಲು ಪ್ರಯತ್ನಿಸುತ್ತಿದ್ದ ಚಿರತೆ ಕರುವನ್ನು ಬಿಟ್ಟು ಪರಾರಿಯಾಗಿದೆ. ತಕ್ಷಣವೇ ಗ್ರಾಮಸ್ಥರು ಕರುವಿಗೆ ಉಪಚರಿಸಿದರಾದರೂ ಕರು ಸಾವನ್ನಪ್ಪಿದೆ. ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ