ಗಜಪಡೆಗೆ ಭಾರ ಹೊರುವ ತಾಲೀಮು ; ಮೊದಲ ದಿನವೇ 550 ಕೆ.ಜಿ. ತೂಕ ಭಾರ

ಅರ್ಜುನ ಬಿಟ್ಟು 5 ಗಂಡಾನೆಗಳಿಗೆ ಭಾರ ಹೊರಿಸುವ ತಾಲೀಮನ್ನು ರೊಟೆಷನ್‌ ಆಗಿ ಐದು ದಿನ ನಡೆಸಲಾಗುತ್ತದೆ

Team Udayavani, Aug 19, 2022, 5:57 PM IST

ಗಜಪಡೆಗೆ ಭಾರ ಹೊರುವ ತಾಲೀಮು ; ಮೊದಲ ದಿನವೇ 550 ಕೆ.ಜಿ. ತೂಕ ಭಾರ

ಮೈಸೂರು: ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಅಭಿಮನ್ಯು ನೇತೃತ್ವದ ಗಜಪಡೆಗೆ ಗುರುವಾರದಿಂದ ಭಾರ ಹೊರಿಸುವ ತಾಲೀಮು ಆರಂಭವಾಗಿದ್ದು, ಮೊದಲ ದಿನವೇ ಕ್ಯಾಪ್ಟನ್‌ ಅಭಿಮನ್ಯು 550 ಕೆ.ಜಿ. ತೂಕ ಭಾರ ಹೊತ್ತು ಬನ್ನಿಮಂಟಪದವರೆಗೆ ನಿರಾಯಾಸವಾಗಿ ಹೆಜ್ಜೆ ಹಾಕಿದ.

ಅರಮನೆ ಆವರಣದಲ್ಲಿರುವ ಕೋಡಿ ಸೋಮೇಶ್ವರ ದೇವಾಲಯದ ಮುಂಭಾಗ ಗುರುವಾರ ಬೆಳಗ್ಗೆ 7.45ಕ್ಕೆ ಭಾರ ಹೊರಿಸುವ ಮುನ್ನ ಸಂಪ್ರದಾಯದಂತೆ ಆನೆಗಳ ಬೆನ್ನಿನ ಮೇಲೆ ಇಡುವ ಗಾದಿ, ನಮಾª ಹಾಗೂ ಆನೆಗಳಿಗೆ ಅರಮನೆ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭ ಡಿಸಿಎಫ್ ಕರಿಕಾಳನ್‌ ಆನೆಗಳಿಗೆ ಪುಷ್ಪಾರ್ಚನೆ ಮಾಡಿ, ಹಣ್ಣು ಮತ್ತು ಕಬ್ಬನ್ನು ನೀಡಿದರು. ನಂತರ 8.15ಕ್ಕೆ ಅಭಿಮನ್ಯು ಬೆನ್ನಿನ ಮೇಲೆ 250 ಕೆ.ಜಿ. ತೋಕದ ಗಾದಿ, ನಮ್ದಾ ಹಾಗೂ 300 ಕೆ.ಜಿ. ತೂಕದ ಮರಳು ಮೂಟೆಯನ್ನಿಟ್ಟು ಭಾರ ಹೊರುವ ತಾಲೀಮು ಆರಂಭಿಸಲಾಯಿತು. ಅರಮನೆಯಿಂದ ಹೊರಟ ಗಜಪಡೆ ನಿರಾತಂಕವಾಗಿ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದವರೆಗೆ ಸಾಗಿತು. ಈ ವೇಳೆ ಕ್ಯಾಪ್ಟನ್‌ ಅಭಿಮನ್ಯುಗೆ ಅರ್ಜುನ, ಗೋಪಾಲಸ್ವಾಮಿ ಸೇರಿದಂತೆ ಇತರೆ ಆನೆಗಳು ಜೊತೆಯಾದವು. ದಿನಕ್ಕೆ ಎರಡು ಬಾರಿಯಂತೆ 5 ಕಿ.ಮೀ. ನಡೆಸಲು ತೀರ್ಮಾನಿಸಲಾಗಿದ್ದು, 300 ಕೆ.ಜಿ. ಮರಳಿನ ಮೂಟೆ ಹೊರಿಸುವ ಮುಖಾಂತರ ತಾಲೀಮು ನಡೆಸಲಾಗಿದೆ.

ನಗರದ ವಾತಾವರಣಕ್ಕೆ ಒಗ್ಗಿದ ಮಹೇಂದ್ರ: ಇದೇ ಮೊದಲ ಬಾರಿಗೆ ದಸರಾ ಉತ್ಸವದಲ್ಲಿ ಪಾಲ್ಗೊಳ್ಳುತ್ತಿರುವ ಮಹೇಂದ್ರ ಆನೆ ನಗರ ಪರಿಸರಕ್ಕೆ ನಿಧಾನವಾಗಿ ಹೊಂದಿಕೊಳ್ಳುತ್ತಿದ್ದು, ಆನೆಗಳ ಜತೆಗೆ ಯಾವುದೇ ಭಯ, ಆತಂಕವಿಲ್ಲದೇ ತಾಲೀಮಿನಲ್ಲಿ ಭಾಗವಹಿಸುತ್ತಿದೆ. ತಾಲೀಮಿನ ವೇಳೆ ಪಕ್ಕದಲ್ಲಿ ಅಧಿಕಾರಿಗಳ ಕಾರು ಸೇರಿದಂತೆ ಏನೇ ಶಬ್ಧವಾದರು ಭಯಪಡದೆ ಧೈರ್ಯದಿಂದ ಹೆಜ್ಜೆ ಇಡುವ ಮೂಲಕ ಅಧಿಕಾರಿಗಳಲ್ಲಿ ಭರವಸೆ ಮೂಡಿಸಿದ್ದಾನೆ.

ಡಿಸಿಎಫ್ ಡಾ.ವಿ.ಕರಿಕಾಳನ್‌ ಮಾತನಾಡಿ, ಇಂದು ಆನೆಗಳಿಗೆ ಭಾರದ ತಾಲೀಮು ನಡೆಸಲಾಗುತ್ತಿದೆ. ಮೊದಲು 300 ಕೆ.ಜಿ. ಮರಳಿನ ಮೂಟೆ ಇಟ್ಟು ತಾಲೀಮು ನಡೆಸಲಾಗುತ್ತಿದೆ. ಅರ್ಜುನ ಬಿಟ್ಟು 5 ಗಂಡಾನೆಗಳಿಗೆ ಭಾರ ಹೊರಿಸುವ ತಾಲೀಮನ್ನು ರೊಟೆಷನ್‌ ಆಗಿ ಐದು ದಿನ ನಡೆಸಲಾಗುತ್ತದೆ. 300 ಕೆ.ಜಿ.ಆದ ನಂತರ ಮತ್ತೆ ಹೆಚ್ಚಿಸುತ್ತೇವೆ. 750 ಕೆಜಿ ಬರುವ ತನಕ ತಾಲೀಮು ಮಾಡುತ್ತೇವೆ.

ಇಲ್ಲಿಂದ ಬನ್ನಿಮಂಟಪ 5ಕಿ.ಮಿ.ಇದೆ. ನಾವು ನಿನ್ನೆ ಮೊನ್ನೆ ಎಲ್ಲ ಕೇವಲ ವಾಕ್‌ ಮಾಡಿಸಿದ್ದೇವೆ. ಆ ಟೈಮ್‌ ನಲ್ಲಿ ನಮಗೆ ಇಲ್ಲಿಂದ ಅಲ್ಲಿಗೆ ತಲುಪಲು ಒಂದುಕಾಲು ಗಂಟೆ ಹಿಡಿದಿದೆ. ಇವತ್ತು ತೂಕ ಹಾಕಿ ಆನೆಗಳು ಸಾಗಲಿವೆ. ಎಷ್ಟು ಗಂಟೆ ಆಗತ್ತೆ ನೋಡಬೇಕು. ಸೆಪ್ಟೆಂಬರ್ ಮೊದಲ ವಾರ ಎರಡನೇ ಹಂತದ ಆನೆ ಕರೆತರಲಾಗುತ್ತದೆ. ಮರಳ ಮೂಟೆ 300 ಕೆ.ಜಿ, ನಮ್ದಾ, ಗಾದಿ, ಹಗ್ಗ ಎಲ್ಲ ಸೇರಿ 500ರಿಂದ 550ಕೆಜಿ ತೂಕವಿರಿಸಿ ಆನೆಗಳು ನಡೆಯುತ್ತಿವೆ. ಹಂತ
ಹಂತವಾಗಿ ಭಾರ ಹೆಚ್ಚಿಸುವ ನಂತರ ಮರದ ಅಂಬಾರಿ ಕಟ್ಟಿ ತಾಲೀಮು ನಡೆಸಲಾಗುತ್ತದೆ ಎಂದು ತಿಳಿಸಿದರು.

ಮೊದಲ ಹಂತವಾಗಿ 300ಕೆಜಿ ತೂಕದ ಮರಳು ಮೂಟೆ ಸೇರಿ 550 ಕೆಜಿ ಭಾರ ಹೊರಿಸಿ ತಾಲೀಮು ನಡೆಸಲಾಗಿದೆ. ಹಂತಹಂತವಾಗಿ ತೂಕವನ್ನು ಹೆಚ್ಚಿಸಿ ಜಂಬೂ ಸವಾರಿ ವೇಳೆಗೆ 750ಕೆ.ಜಿ.ತೂಕವನ್ನು ಭಾರ ಹೊರಲು ಗಜಪಡೆಯನ್ನು ಸಜ್ಜುಗೊಳಿಸಲಾಗುತ್ತದೆ. ಅದಕ್ಕಾಗಿ ಈಗಾಗಲೇ ಪೌಷ್ಟಿಕ ಆಹಾರವನ್ನು ನೀಡಲಾಗುತ್ತಿದೆ.
●ಡಾ.ವಿ. ಕರಿಕಾಳನ್‌, ಡಿಸಿಎಫ್

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.