ರೈತ ವಿರೋಧಿ ನೀತಿ ರೂಪಿಸಿ ರೊಚ್ಚಿಗೇಳಿಸಬೇಡಿ; ಕುರುಬೂರು

ನಾವೇ ವಿದೇಶಗಳಿಗೆ ಆಹಾರ ಪೂರೈಸುವ ಶಕ್ತಿ ಇದೆ.

Team Udayavani, May 20, 2022, 6:15 PM IST

ರೈತ ವಿರೋಧಿ ನೀತಿ ರೂಪಿಸಿ ರೊಚ್ಚಿಗೇಳಿಸಬೇಡಿ; ಕುರುಬೂರು

ತಿ.ನರಸೀಪುರ: ಯಾವುದೇ ಚರ್ಚೆ ಇಲ್ಲದೇ ತಮ್ಮ ವೇತನ, ಸಾರಿಗೆ ಭತ್ಯೆ ಹೆಚ್ಚಿಸಿಕೊಳ್ಳುವ ಶಾಸಕರಿಗೆ, ರೈತರ ಬೆಳೆಗಳಿಗೆ ಬೆಲೆ ಹೆಚ್ಚಿಸುವ ಆಸಕ್ತಿ ಇಲ್ಲ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ಆರೋಪಿಸಿದರು.

ತಾಲೂಕಿನ ಮೂಗೂರು ಹೋಬಳಿ ವಾಟಾಳು ಪುರ ಗ್ರಾಮದಲ್ಲಿ ಗ್ರಾಮ ಘಟಕ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ರೈತ ಬೆಳೆದ ಭತ್ತ, ಕಬ್ಬು ಇನ್ನಿತರ ಬೆಳೆಗಳಿಗೆ ಭಿಕ್ಷೆ ರೂಪದಲ್ಲಿ ದರ ಏರಿಸುವ ಸರ್ಕಾರ, ಜನಪ್ರತಿನಿಧಿಗಳ ವೇತನ ಮಾತ್ರ ಮನಸೋಇಚ್ಛೆ ಹೆಚ್ಚಿಸುತ್ತದೆ. ಜನಪ್ರತಿನಿಧಿಗಳಿಗೆ ರೈತರ ಬಗ್ಗೆ ಕಾಳಜಿ ಇಲ್ಲ ಎಂದು ಹೇಳಿದರು.

ಸರ್ಕಾರ ಮನಗಾಣಲಿ: ರೈತ ವಿರೋಧಿ ನೀತಿ ರೂಪಿಸುವ ಸರ್ಕಾರ, ರೈತರನ್ನು ಉಳಿಸುವ ಬದಲು ಸಮಾಧಿ ತೋಡುತ್ತಿದೆ. ಇಂತಹ ಕಾರ್ಯದಿಂದಲೇ ನೆರೆಯ ಶ್ರೀಲಂಕಾದಲ್ಲಿ ಜನರು ದಂಗೆ ಎದ್ದು ಪ್ರಧಾನಿ ಮನೆಗೆ ಬೆಂಕಿ ಹಚ್ಚಿದ್ದಾರೆ. ಜನರನ್ನು ರೊಚ್ಚಿ ಗೇಳಿಸುವ ಕಾರ್ಯ ಮಾಡಬಾರದು ಎಂಬುದನ್ನು ಸರ್ಕಾರ ಮನಗಾಣಬೇಕು ಎಂದು ತಿಳಿಸಿದರು.

ರೈತರ ಉತ್ಪಾದನಾ ವೆಚ್ಚ ಏರಿಕೆ:
ಸೂರ್ಯಕಾಂತಿ ಬಿತ್ತನೆ ಬೀಜದ ಬೆಲೆ 1100 ರಿಂದ 2,300ಕ್ಕೇರಿದರೆ, ರಸಗೊಬ್ಬರ ಬೆಲೆ 850 ರಿಂದ 1,700ಕ್ಕೆ ಸೇರಿ ಇಂಧನ, ಅಡುಗೆ ಅನಿಲ, ಕೀಟನಾಶಕ ವಸ್ತುಗಳ ಬೆಲೆ ಹೆಚ್ಚಾಗಿದೆ. ರೈತರಿಗೆ ಉತ್ಪಾದನಾ ವೆಚ್ಚ ಏರಿಕೆಯಾಗಿ ಉತ್ಪನ್ನದ ಬೆಲೆ ಮಾತ್ರ ಕುಸಿಯುತ್ತಿದೆ ಎಂದು ವಿಷಾದಿಸಿದರು.

ಆಹಾರ ಪೂರೈಸುವ ಶಕ್ತಿ ಇದೆ: ಅಮೆರಿಕಾದ ಗೋಧಿಗೆ ಭಿಕ್ಷೆ ಬೇಡುತ್ತಿದ್ದ ಕಾಲ ದೂರವಾಗಿ 300 ಲಕ್ಷ ಮಿಲಿಯನ್‌ ಟನ್‌ ಆಹಾರ ಉತ್ಪಾದಿಸುವ ಸಾಮರ್ಥ್ಯ ರೈತರಿಗೆ ಬಂದಿದೆ. ನಾವೇ ವಿದೇಶಗಳಿಗೆ ಆಹಾರ ಪೂರೈಸುವ ಶಕ್ತಿ ಇದೆ. ಇದನ್ನು ಕೇಂದ್ರ ಸರ್ಕಾರ ಮರೆತು ರೈತರನ್ನು ಬಲಿಕೊಡುವ ಕೆಲಸ ಮಾಡಬಾರದು ಎಂದು ವಿವರಿಸಿದರು.

ರೈತರು ಎಚ್ಚೆತ್ತುಕೊಳ್ಳಬೇಕು:
ಮಾಧ್ಯಮಗಳಲ್ಲಿ ಮಾತ್ರ ಆಕರ್ಷಣೀಯವಾಗಿ ಮಾತನಾಡುವ ಮಂತ್ರಿಗಳು, ಜನಪ್ರತಿನಿಧಿಗಳು ರೈತರ ನೋವಿನ ಬಗ್ಗೆ ಚಕಾರ ಎತ್ತುವುದಿಲ್ಲ, ಭೂ ಮಾಫಿಯಾ, ಹಣ ಬಲವುಳ್ಳವರು ಅಧಿಕಾರ ಹಿಡಿಯುತ್ತಿದ್ದು,ಕಾನೂನುಗಳನ್ನು ಗಾಳಿಗೆ ತೂರಿದ್ದಾರೆ. ಈ ಬಗ್ಗೆ ರೈತರು ಎಚ್ಚೆತ್ತುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ರೈತರು ಸಂಘಟಿತರಾಗಲಿ: ಕಬ್ಬಿನ ಸಸಿಗೆ ನೀರೆರೆದು ಘಟಕ ಉದ್ಘಾಟಿಸಿದ ವಾಟಾಳು ಮಠದ ಡಾ.ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ರೈತರು ಸಂಘ ಟಿತರಾಗಲು, ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಲು ಗ್ರಾಮ ಘಟಕಗಳ ಸಂಘಟನೆ ಅಗತ್ಯವಿದೆ. ರೈತರ ಪ್ರತಿನಿಧಿ ಶಾಸನ ಸಭೆಯಲ್ಲಿದ್ದರೆ ಮಾತ್ರ ರೈತರ ಶಕ್ತಿ ಹೆಚ್ಚುತ್ತದೆ ಎಂದು ಹೇಳಿದರು. ಸಂಘದ ಮುಖಂಡರಾದ ಅತ್ತಳ್ಳಿ ದೇವರಾಜ್‌, ಹಳ್ಳಿಕೆರೆಹುಂಡಿ ಭಾಗ್ಯರಾಜ್‌, ಕಿರಗಸೂರು ಶಂಕರ್‌ ಮಾತನಾಡಿ, ಸಂಘಟನೆಯ ಮಹತ್ವದ ಬಗ್ಗೆ ತಿಳಿಸಿದರು. ಸಭೆಯಲ್ಲಿ ತಾಲೂಕು ಅಧ್ಯಕ್ಷ ಕುರುಬೂರು ಸಿದ್ದೇಶ್‌, ವಾಟಾಳುಪುರದ ನಾಗೇಶ್‌, ಶಂಭುಲಿಂಗಪ್ಪ, ಚಿನ್ನಸ್ವಾಮಿ, ಸುರೇಶ್‌ ಶಿವಕುಮಾರಸ್ವಾಮಿ, ಹಾಡ್ಯರವಿ, ಬರಡನಪುರ ನಾಗರಾಜ್‌ ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.