ಜಿ ಪ್ಲಸ್‌-3 ಮನೆಗಳೇ ನಿರ್ಮಿಸಿ: ಸಂಸದ


Team Udayavani, Jun 27, 2020, 4:56 AM IST

houses constru

ಮೈಸೂರು: ಈ ಹಿಂದೆ ಘನತ್ಯಾಜ್ಯ ವಿಲೇವಾರಿ ಸಂಬಂಧ ಶಾಸಕ ರಾಮದಾಸ್‌ ಹಾಗೂ ಸಂಸದ ಪ್ರತಾಪ್‌ ಸಿಂಹ ನಡುವೆ ನಡೆದಿದ್ದ ಜಟಾಪಟಿ ಮಾಸುವ ಮುನ್ನವೇ, ಸಂಸದರು ಮತ್ತೆ ಕೆ.ಆರ್‌.  ಕ್ಷೇತ್ರದಲ್ಲಿ ರಾಮದಾಸ್‌ ರೂಪಿಸಿರುವ  ಹೊಸ ವಸತಿ ಯೋಜನೆ ಕೈ ಬಿಟ್ಟು, ಹಳೆಯ ಯೋಜನೆ ಜಾರಿಗೆ ತರುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದು ಮತ್ತೂಂದು ಜಟಾಪಟಿಗೆ ಮುನ್ನುಡಿ ಬರೆದಿದೆ.

ನಗರದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಡೆದ ಜಿಲ್ಲಾ  ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಪ್ರತಾಪ್‌ ಸಿಂಹ, ರಾಮದಾಸ್‌ ನಿರ್ದೇಶನ ಪ್ರಕಾರ ರೂಪಿಸಿದ ಯೋಜನೆ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ ವಸತಿ  ಯೋಜನೆ ರೂಪಿಸಿ 3 ವರ್ಷವಾದರೂ ಬಡವರಿಗೆ ವಸತಿ ನೀಡಲು ಸಾಧ್ಯವಾಗಿಲ್ಲ. ಈ ಹಿಂದೆ ಜಿ ಪ್ಲಸ್‌-3 ಮನೆಗಳು ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಆದರೆ, ಇದೀಗ ಜಿ ಪ್ಲಸ್‌-9 ಮನೆ ನಿರ್ಮಾಣಕ್ಕೆ ಮುಂದಾಗಿರುವುದು ಸರಿಯಲ್ಲ  ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಜಿ ಪ್ಲಸ್‌-3ನೇ ನಿರ್ಮಿಸಿ: ಜಿ ಪ್ಲಸ್‌-3 ಮನೆಗಳ ಬದಲು ಜಿ ಪ್ಲಸ್‌-9 ಮನೆಗಳ ನಿರ್ಮಾಣ ಮಾಡುವಂತೆ ಶಾಸಕರ ನಿರ್ದೇಶನ ಮೇರೆಗೆ ಯೋಜನೆ ಬದಲಾಯಿಸಿರುವುದಾಗಿ  ಅಧಿಕಾರಿಗಳು ಸ್ಪಷ್ಟನೆ ನೀಡಿದರು. ಜಿ ಪ್ಲಸ್‌-3 ಮನೆಗಳ ನಿರ್ಮಾಣಕ್ಕೆ 4.9 ಕೋಟಿ ರೂ. ಸಾಕಾಗುತ್ತದೆ. ಆದರೆ, ಜಿ ಪ್ಲಸ್‌-9 ಮನೆಗಳ ನಿರ್ಮಾಣಕ್ಕೆ 18 ಕೋಟಿ ರೂ. ಅವಶ್ಯಕತೆ ಇದೆ. ಅಷ್ಟೊಂದು ದೊಡ್ಡ ಮೊತ್ತ ಎಲ್ಲಿಂದ ತರುತ್ತೀರಾ? ಅನುಷ್ಠಾನ ಸಾಧ್ಯವೇ ಎಂಬ ಬಗ್ಗೆ ಅಧಿಕಾರಿಗಳು ಚಿಂತನೆ ನಡೆಸಬೇಕು. ಹೀಗಾಗಿ ಈ ಹಿಂದೆ ರೂಪಿಸಿದ ಯೋಜನೆ ಪ್ರಕಾರ ಜಿ ಪ್ಲಸ್‌-3 ಮನೆಗಳ ನಿರ್ಮಾಣಕ್ಕೆ ಕೂಡಲೇ ಕ್ರಮ ವಹಿಸಬೇಕೆಂದು ನಿರ್ದೇಶನ ನೀಡಿದರು.

ರಾಜಕೀಯ  ಹಸ್ತಕ್ಷೇಪ: ನಗರದಲ್ಲಿ ನರ್ಮ್ ಯೋಜನೆಯಡಿ ನಿರ್ಮಿಸಿರುವ ಮನೆಗಳು ಸರಿಯಾಗಿ ಹಂಚಿಕೆಯಲ್ಲಿ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ಪ್ರಭಾವಿಗಳಿಗೆ ಕೆಳ ಭಾಗದಲ್ಲಿ ಮನೆ ನೀಡಲಾಗಿದೆ. ಬಹಿರಂಗವಾಗಿ ಮನೆ ಹಂಚಿಕೆ   ಮಾಡಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಸಭೆಯಲ್ಲಿ ಶಾಸಕರಾದ ಎಚ್‌ .ಪಿ.ಮಂಜುನಾಥ್‌, ಹರ್ಷವರ್ಧನ್‌, ಜಿಲ್ಲಾಧಿಕಾರಿ ಅಭಿರಾಮ್‌ ಜಿ. ಶಂಕರ್‌, ನಗರ ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ಸೇರಿದಂತೆ ನಾನಾ ಇಲಾಖೆ ಅಧಿಕಾರಿಗಳು  ಇದ್ದರು.

ಯುಜಿ ಕೇಬಲ್‌ ಅಳವಡಿಕೆಗೆ ಹಸ್ತಕ್ಷೇಪ: ನಗರದಲ್ಲಿ ಸೆಸ್ಕ್ ಕೈಗೊಂಡಿರುವ ಯುಜಿ ಕೇಬಲ್‌ ಅಳವಡಿಕೆ ಕಾಮಗಾರಿಗೆ ಕೆಲ ಪಾಲಿಕೆ ಸದಸ್ಯರು ಅಡ್ಡಿ ಪಡಿಸುತ್ತಿದ್ದಾರೆ. ತಪ್ಪುಗಳಾಗಿದ್ದರೆ ಪ್ರಶ್ನಿಸಲಿ. ವಿನಾಕಾರಣ ಕಾಮಗಾರಿಗೆ ಅಡ್ಡಿ ಪಡಿಸಿ  ಪಾಲಿಕೆ ಸದಸ್ಯರು ವಸೂಲಾತಿಗೆ ಮುಂದಾಗಿರುವುದು ನನ್ನ ಗಮನಕ್ಕೆ ಬಂದಿದೆ. ಇನ್ನು ಮುಂದೆ ಪಾಲಿಕೆ ಸದಸ್ಯರಿಂದ ಯುಜಿ ಕೇಬಲ್‌ ಅಳವಡಿಕೆಗೆ ಸಮಸ್ಯೆ ಎದುರಾದರೆ ನನ್ನ ಗಮನಕ್ಕೆ ತರುವಂತೆ ಸೆಸ್ಕ್ ಅಧಿಕಾರಿಗಳಿಗೆ ಸಂಸದರು ನಿರ್ದೇಶನ ನೀಡಿದರು

ಟಾಪ್ ನ್ಯೂಸ್

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.