ಎಸ್‌ಟಿ ವರ್ಗಕ್ಕೆ ಶೇ.7.5 ಮೀಸಲು ಕಲ್ಪಿಸಿ


Team Udayavani, Oct 21, 2021, 12:09 PM IST

ವಾಲ್ಮೀಕಿ ಜಯಂತಿ

ಮೈಸೂರು: ಪರಿಶಿಷ್ಟ ಪಂಗಡಕ್ಕೆ ಪರಿವಾರ ಜನಾಂಗವನ್ನು ಸೇರಿಸಲಾಗಿದ್ದು, ಫ‌ಲಾನುಭವಿಗಳಿಗೆ ಜಾತಿ ಪ್ರಮಾಣ ನೀಡಲು ಅಧಿಕಾರಿಗಳು ಸತಾಯಿಸಬಾರದು. ಯಾವುದೇ ತೊಂದರೆ ನೀಡದೇ ಸಿಂಧುತ್ವ ಮಾಡಿಕೊಡಬೇಕು ಎಂದು ಶಾಸಕ ಜಿ.ಟಿ. ದೇವೇಗೌಡ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮೈಸೂರು ನಗರ ಮತ್ತು ತಾಲೂಕು ನಾಯಕ ಜನಾಂಗದ ಸಂಘಗಳ ಸಹಯೋಗದಲ್ಲಿ ಬುಧವಾರ ಕಲಾಮಂದಿರದ ಕಿರುರಂಗಮಂದಿರದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಮಾತನಾಡಿದರು.

ತಳವಾರ-ಪರಿಹಾರ ಸಮಾಜವನ್ನು ಎಸ್‌ಟಿಗೆ ಸೇರಿಸಬೇಕೆಂದು 1988-89ರಲ್ಲಿ ನಿಯೋಗ ಹೋಗಿದ್ದೆವು. ಆಗ ಕೆಲವು ಸಂಗತಿಗಳು ಬಿಟ್ಟು ಹೋದ ಕಾರಣ ಸಮಸ್ಯೆಯಾಯಿತು. ಸದ್ಯಕ್ಕೆ ಈಗ ಪರಿಶಿಷ್ಟ ಪಂಗಡಕ್ಕೆ ಪರಿವಾರ ಜನಾಂಗವನ್ನು ಸೇರಿಸಲಾಗಿದೆ. ಆದರೆ, ಫ‌ಲಾನುಭವಿಗಳಿಗೆ ಜಾತಿ ಪ್ರಮಾಣ ನೀಡಲು ಅಧಿಕಾರಿಗಳು ಸತಾಯಿಸುತ್ತಿರುವ ಬಗ್ಗೆ ದೂರುಗಳು ಬಂದಿವೆ.

ಅಧಿಕಾರಿಗಳು ಯಾವುದೇ ತೊಂದರೆ ನೀಡದೇ ಸಿಂಧುತ್ವ ಮಾಡಿಕೊಡಬೇಕು. ಜತೆಗೆ ಈ ಹಿಂದೆ ಎಸ್‌ಟಿ ಪ್ರಮಾಣ ಪತ್ರ ಪಡೆದಿರುವವರ ಮೇಲೆ ದಾಖಲಾಗಿರುವ ಪ್ರಕರಣವನ್ನು ರಾಜ್ಯ ಸರ್ಕಾರ ವಾಪಸ್‌ ಪಡೆಯಬೇಕು. ಈ ವಿಚಾರವನ್ನು ಕ್ಯಾಬಿನೆಟ್‌ನಲ್ಲಿ ಚರ್ಚಿಸಲಾಗುವುದು. 30ರ ಬಳಿಕ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಈ ಕುರಿತು ಮನವಿ ಸಲ್ಲಿಸುವುದಾಗಿ ತಿಳಿಸಿದರು.

ಇದನ್ನೂ ಓದಿ;- ಡಿಸಿಸಿ ಬ್ಯಾಂಕ್‌ ನಿರ್ದೇಶಕರಾಗಿ ಕಲ್ಯಾಣಪ್ಪ ಮಳಖೇಡ

 ನಿರ್ಣಯ: ತೀರ ಹಿಂದುಳಿದುವರು ಹಾಗೂ ದುಡಿಯುವ ವರ್ಗ ಪರಿಶಿಷ್ಟ ಪಂಗಡಕ್ಕೆ ಶೇ.7.5 ಮೀಸಲು ನೀಡಬೇಕೆಂದು ಸಮುದಾಯ ಸ್ವಾಮೀಜಿಗಳ ನೇತೃತ್ವದಲ್ಲಿ ಹೋರಾಟ ನಡೆದಿದೆ. ಇದಕ್ಕೆ ನಮ್ಮ ಬೆಂಬಲವಿದೆ. ಸರ್ಕಾರ ಕೂಡಲೇ ಈ ಬಗ್ಗೆ ನಿರ್ಣಯ ತೆಗದುಕೊಳ್ಳಬೇಕು. ಸಂಸದ ಪ್ರತಾಪ್‌ಸಿಂಹ ಸಹ ಕೇಂದ್ರದಲ್ಲಿ ಈ ಬಗ್ಗೆ ದನಿ ಎತ್ತಬೇಕು ಎಂದು ಒತ್ತಾಯಿಸಿದರು. ಕಾರ್ಯಕ್ರಮದಲ್ಲಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಈ ವೇಳೆ ಮೇಯರ್‌ ಸುನಂದ ಪಾಲನೇತ್ರ, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ. ಶಿವಣ್ಣ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್‌, ಎಸ್ಪಿ ಆರ್‌. ಚೇತನ್‌, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಆರ್ಥಿಕ ಸಲಹೆಗಾರ ಕೆ.ಮಹದೇವನಾಯಕ, ಸಮುದಾಯ ಮುಖಂಡ ಕೆಂಪನಾಯಕ, ವಾಲ್ಮೀಕಿ ಅಭಿವೃದ್ಧಿ ಮಂಡಳಿ ಜಿಲ್ಲಾ ಅಧಿಕಾರಿ ಕೆ.ಎಂ.ಮಲ್ಲೇಶ್‌, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಭ ಅರಸ್‌, ಸುಧಾಮಣಿ ಇತರರಿದ್ದರು.

ಮಂಥರೆ ಪಾತ್ರ ಬಗ್ಗೆ ಎಚ್ಚರವಹಿಸಿ: ಜಿಟಿಡಿ ಮಹರ್ಷಿ ವಾಲ್ಮೀಕಿ ಅವರ ರಾಮಾಯಣ ಮಹಾಕಾವ್ಯ ಮೌಲ್ಯಯುತ, ಮಾನವೀಯ ಬದುಕನ್ನು ಕಲಿಸುತ್ತದೆ. ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ರಾಮಾಯಣದ ಮಂಥರೆ ಪಾತ್ರ ಪ್ರತಿ ಮನೆಯಲ್ಲೂ ಇರುತ್ತಾರೆ. ಈ ಬಗ್ಗೆ ಎಚ್ಚರವಹಿಸಬೇಕೆಂದು ಶಾಸಕ ಜಿ.ಟಿ.ದೇವೇಗೌಡ ಕಿವಿಮಾತು ಹೇಳಿದರು.

 ವಿಶ್ವಕ್ಕೆ ದಾರಿದೀವಿಗೆ: ಕೌಟಿಲ್ಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮ ಅಧ್ಯಕ್ಷ ಆರ್‌.ಕೌಟಿಲ್ಯ ಮಾತನಾಡಿ, ಶ್ರೇಷ್ಠ ಕೃತಿ ರಾಮಾಯಣ ವಿಶ್ವಕ್ಕೆ ದಾರಿದೀವಿಗೆಯಾಗಿದೆ. ಮಾನವೀಯತೆ, ಸಮಯ ಮತ್ತು ಬದ್ಧತೆಯ ಪಾಠ ಹೇಳುತ್ತದೆ. ಒಂದು ಕೂಡು ಕುಟುಂಬ ಹೇಗಿರಬೇಕೆಂಬುದನ್ನು ತಿಳಿಸುತ್ತದೆ. ರಾಮಾಯಣವನ್ನು ಅನುಸರಿಸಿ ನಡೆಯಬೇಕು ಎಂದು ಸಲಹೆ ನೀಡಿದರು.

ಟಾಪ್ ನ್ಯೂಸ್

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.