ಸರ್ಕಾರದ್ದು ಕೀಳುಮಟ್ಟದ ರಾಜಕೀಯ: ಸಿದ್ದರಾಮಯ್ಯ
Team Udayavani, Jun 11, 2020, 4:56 AM IST
ಮೈಸೂರು: ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ಸರ್ಕಾರ ಅನುಮತಿ ನೀಡದಿರುವುದು ಕೀಳುಮಟ್ಟದ ರಾಜಕಾರಣ. ಇದನ್ನು ನಾವು ರಾಜಕೀಯವಾಗಿಯೇ ಎದುರಿಸುತ್ತೇವೆ ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಬುಧವಾರ ಸುದ್ದಿಗಾರ ರೊಂದಿಗೆ ಮಾತನಾಡಿದರು.
ನಾನು ಯಡಿಯೂರಪ್ಪ ಅವರಿಂದ ಈ ರೀತಿಯ ಕೀಳು ಮಟ್ಟದ ರಾಜಕಾರಣ ನಿರೀಕ್ಷೆ ಮಾಡಿರಲಿಲ್ಲ. ದೆಹಲಿಯಲ್ಲಿ ಅಮಿತ್ ಶಾಗೆಒಂದು ನಿಯಮ, ನಮಗೊಂದು ನಿಯಮ ಏಕೆ?. ನಾವು ಸಾಮಾಜಿಕ ಅಂತರ ಕಾ ಯ್ದುಕೊಂಡೆ ಕಾರ್ಯಕ್ರಮ ನಡೆಸುತ್ತಿದ್ದೆವು. ಈ ಬಗ್ಗೆ ಮೌಖೀಕ ವಾಗಿ ಕೇಳಿದ್ದಾಗ ಸರ್ಕಾರ ಒಪ್ಪಿಗೆ ನೀಡಿತ್ತು. ಆದರೆ ಪತ್ರದ ಮೂಲಕ ಕೇಳಿದಾಗ ನಿರಾಕರಿಸಿದೆ. ಇನ್ನೊ ಮ್ಮೆ ಪತ್ರ ಕೊಡುವುದಿಲ್ಲ. ಮನವಿಯನ್ನೂ ಮಾಡುವುದಿಲ್ಲ ಎಂದು ಹೇಳಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಬೇಕು: ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಬೇಕೋ, ಬೇಡವೋ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಎಸ್ಸೆಸ್ಸೆಲ್ಸಿ ಪರೀಕ್ಷೆ ಬೇಡ ಎನ್ನುವುದಕ್ಕೆ ನನ್ನ ವಿರೋಧ ಇದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಬೇಕು. ಆದರೆ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಪರೀಕ್ಷೆ ನಡೆಸಬೇಕು. ದಾಖಲಾತಿ ಶುಲ್ಕ ಕಡಿತದ ಬಗ್ಗೆ ಸರ್ಕಾರ ತಜ್ಞರೊಂದಿಗೆ ಚರ್ಚೆ ನಡೆಸಿ ತೀರ್ಮಾನಿಸಬೇಕು. ಹಾಗೆಯೇ ಖಾಸಗಿ ಶಾಲೆಗಳಲ್ಲೂ ಬಡ ಮಕ್ಕಳು ಓದುತ್ತಿದ್ದಾರೆಂಬುದು ಸರ್ಕಾರದ ಗಮನದಲ್ಲಿರಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
3 ಕೋ. ರೂ. ಹಣ ಚೆನ್ನೈಯಿಂದ ಪೆನ್ಡ್ರೈವ್ ಖರೀದಿ: ಜಿ.ಟಿ.ದೇವೇಗೌಡ
Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…
“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್
G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್ ನೀಡುತ್ತಿರಲಿಲ್ಲ
Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ