Hunsur: ಅಣ್ಣನ ಹೆಸರಲ್ಲಿ ತಮ್ಮ ಸರಕಾರಿ ಕೆಲಸ; ಕೆಲಸದಿಂದ ವಜಾಗೊಳಿಸಿ ಡಿಡಿಪಿಐ ಆದೇಶ

ಆರ್ಥಿಕ ಸೌಲಭ್ಯ ಹಿಂಪಡೆಯಲು ಡಿಡಿಪಿಐ ಆದೇಶ

Team Udayavani, Jan 25, 2024, 2:27 PM IST

8-hunsur

ಹುಣಸೂರು: ಮರಣ ಹೊಂದಿದ್ದ ಸಹೋದರನ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕನ ಹುದ್ದೆಗಿಟ್ಟಿಸಿ, ಕಳೆದ 26 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ ನಕಲಿ ಶಿಕ್ಷಕನನ್ನು ಮೈಸೂರು ಡಿಡಿಪಿಐ ಸೇವೆಯಿಂದ ವಜಾಗೊಳಿಸಿ ಆದೇಶಿಸಿದ್ದಾರೆ.

ಹುಣಸೂರು ತಾಲೂಕು ಹಿರಿಕ್ಯಾತನಹಳ್ಳಿಯ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕನಾಗಿದ್ದ ವಜಾಗೊಂಡ ನಕಲಿ ಶಿಕ್ಷಕ ಲೋಕೇಶ್. ಈತನ ನೈಜ ಹೆಸರು  ಲಕ್ಷ್ಮಣೇಗೌಡ ಆಗಿದ್ದು, ಸಹೋದರ ಲೋಕೇಶ್ ಮರಣದ ನಂತರ ತಾನೇ ಲೋಕೇಶ್ ಎಂದು ನಕಲಿ ದಾಖಲೆ ಸೃಷ್ಟಿಸಿ ಕೆಲಸ ಗಿಟ್ಟಿಸಿಕೊಂಡಿದ್ದ.

ಮೂಲತಃ ಕೆ.ಆರ್.ನಗರ ತಾಲೂಕಿನ ಡಿ.ಕೆ.ಕೊಪ್ಪಲು ಗ್ರಾಮದ ರಾಮೇಗೌಡರಿಗೆ ಇಬ್ಬರು ಪುತ್ರರಿದ್ದು, ಲೋಕೇಶ್ ಶಿಕ್ಷಕ ತರಬೇತಿ ಪಡೆದುಕೊಂಡಿದ್ದರು. ಇವರು 1992ರಲ್ಲಿ ಮರಣಹೊಂದಿದ್ದರು.  ನಿರುದ್ಯೋಗಿಯಾಗಿದ್ದ ಲಕ್ಷ್ಮಣೇಗೌಡ 1998ರಲ್ಲಿ ಅಣ್ಣನ ಹೆಸರಿನ ದಾಖಲಾತಿ ನೀಡಿ, ಶಿಕ್ಷಕ ಹುದ್ದೆಗಿಟ್ಟಿಸಿಕೊಂಡು, ಕೆ.ಆರ್.ನಗರ, ಪಿರಿಯಾಪಟ್ಟಣ, ಹುಣಸೂರು ತಾಲೂಕುಗಳಲ್ಲಿ ಕೆಲಸ ನಿರ್ವಹಿಸಿದ್ದ.

ಈ ನಡುವೆ ಅಣ್ಣ ಲೋಕೇಶ್ ಪತ್ನಿ ಗಲಾಟೆ ಮಾಡಿದ್ದರು. ಪತಿ ಸಾವನ್ನಪ್ಪಿರುವ ಬಗ್ಗೆ ಇಲಾಖೆಗೆ ದಾಖಲೆ ಸಲ್ಲಿಸಿದ್ದರು. ಅಲ್ಲದೆ ಹುಣಸೂರಿನ ಇಂಟಕ್ ರಾಜು ಎಂಬವರು ಶಿಕ್ಷಣ ಇಲಾಖೆ ಹಾಗೂ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಹಿರಿಯ ಅಧಿಕಾರಿಗಳ ಆದೇಶದನ್ವಯ ಕೆ.ಆರ್.ನಗರ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಜಂಟೀಯಾಗಿ ಗ್ರಾಮದಲ್ಲಿ ವಿಚಾರಣೆ ನಡೆಸಿದ ವೇಳೆ ವಿಷಯ ಹೊರಬಂದಿತ್ತು.

ಈ ಬಗ್ಗೆ ಸುದೀರ್ಘ ಕಾಲದ ವಿಚಾರಣೆ ನಡೆದು ಈತ ಮೃತ ಸಹೋದರನ ಹೆಸರಿನಲ್ಲಿದ್ದ ಶಿಕ್ಷಕ ತರಬೇತಿಯ ದಾಖಲಾತಿಗಳನ್ನು ಸಲ್ಲಿಸಿ ಕೆಲಸ ಗಿಟ್ಟಿಸಿರುವುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಸೇವೆಯಿಂದ ವಜಾಗೊಳಿಸಿದ್ದು,  ನಕಲಿ ಹೆಸರಿನಲ್ಲಿ ಇಲಾಖೆಗೆ ವಂಚಿಸಿ, ಪಡೆದಿರುವ ಎಲ್ಲಾ ಆರ್ಥಿಕ ಸೌಲಭ್ಯದ ಮೊತ್ತವನ್ನು ಲೆಕ್ಕಾಚಾರ ಮಾಡಿ ವಸೂಲಿ ಮಾಡಲು ಆದೇಶಿಸಿದ್ದು, ಆರ್ಥಿಕ ಸೌಲಭ್ಯವನ್ನು ಹಿಂತಿರುಗಿಸದಿದ್ದಲ್ಲಿ ನ್ಯಾಯಾಯಲದಲ್ಲಿ ಸಿವಿಲ್ ಪ್ರಕರಣ ದಾಖಲಿಸಿ ಅಗತ್ಯ ಕ್ರಮವಹಿಸಲು ಹುಣಸೂರು ಬಿಇಓ ಎಸ್.ರೇವಣ್ಣರಿಗೆ ಆದೇಶಿಸಲಾಗಿದೆ ಎಂದು ಡಿಡಿಪಿಐ ಎಚ್.ಕೆ.ಪಾಂಡುರವರು ತಿಳಿಸಿದ್ದಾರೆ.

ಆಸ್ತಿ ಮುಟ್ಟುಗೋಲಿಗೆ ಮನವಿ:

ತಾವು ದೂರು ಸಲ್ಲಿಸಿದ್ದರಿಂದ ನಕಲಿ ಶಿಕ್ಷಕನೊಬ್ಬ ಸೇವೆಯಿಂದ ವಜಾಗೊಳಿಸಿದ ಇಲಾಖೆ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿರುವ ಇಂಟಕ್ ರಾಜು ಲಕ್ಷ್ಮಣೇಗೌಡನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳವಂತೆ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.