ಮಾರಿದ ಬೆಳೆಗೆ ಹಣ ನೀಡದ ಸರ್ಕಾರ


Team Udayavani, May 25, 2020, 6:48 AM IST

maarida

ಮೈಸೂರು: ಸರ್ಕಾರ ರೈತರಿಂದ ಖರೀದಿ ಮಾಡಿದ್ದ ಭತ್ತ, ರಾಗಿಗೆ 2 ತಿಂಗಳಿನಿಂದ ಹಣ ಪಾವತಿಸದೇ ಇರುವುದು ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಮಾರ್ಚ್‌ 24ರಿಂದ ಲಾಕ್‌ಡೌನ್‌  ಜಾರಿಯಲ್ಲಿರುವುದರಿಂದ ರೈತರು ಬೆಳೆದ  ತರಕಾರಿ, ಆಹಾರ ಬೆಳೆ ಹಾಗೂ ಹಣ್ಣುಗಳಿಗೆ ಮಾರುಕಟ್ಟೆ ಲಭ್ಯವಾಗದೆ, ಬೆಲೆಯೂ ಸಿಗದೇ ಅತಂತ್ರರಾಗಿರುವ ಸ್ಥಿತಿಯಲ್ಲಿ, ಸರ್ಕಾರ  ವರ್ಷದ ಆರಂಭದಲ್ಲಿ ರೈತರಿಂದ ಖರೀದಿಸಿದ್ದ ರಾಗಿ, ಭತ್ತದ ಹಣ ನೀಡದೇ ವಿಳಂಬ ಮಾಡುತ್ತಿರುವುದು ಅವರನ್ನು ಮತ್ತಷ್ಟು  ಸಂಕಷ್ಟಕ್ಕೆ ಸಿಲುಕಿಸಿದಂತಾಗಿದೆ.

ಜಿಲ್ಲೆಯಲ್ಲಿ 2019-20 ಸಾಲಿನಲ್ಲಿ ಉತ್ತಮ ಮಳೆಯಾಗಿದ್ದರಿಂದ ರೈತರು ವಾಣಿಜ್ಯ ಬೆಲೆಯ ಜೊತೆಗೆ ಭತ್ತ, ರಾಗಿ ಬೆಳೆ ಬೆಳೆದಿದ್ದರು. ಸರ್ಕಾರ ಕನಿಷ್ಠ ಬೆಂಬಲ  ಬೆಲೆ ಮೂಲಕ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ರೈತರಿಂದ ಭತ್ತ, ರಾಗಿಯನ್ನು ಖರೀದಿಸಿತ್ತು. ಈ ನಡುವೆ ಲಾಕ್‌ಡೌನ್‌ ಪರಿಣಾಮ ರೈತರು ಬೆಳೆದ ಇತರೆ ಬೆಳೆಗಳು ಉತ್ತಮ ಬೆಲೆಗೆ ಮಾರಾಟವಾಗದೇ ನಷ್ಟಕ್ಕೊಳಗಾಗಿದ್ದಾರೆ. ಬ್ಯಾಂಕು,  ಸಹಕಾರ ಸಂಘ ಸೇರಿದಂತೆ ಇತರೆ ಮೂಲಗಳಿಂದ ಬಡ್ಡಿ ಆಧಾರದಲ್ಲಿ ಸಾಲ ಪಡೆದು ಬೆಳೆದಿದ್ದ ಬೆಳೆಗೆ ಉತ್ತಮ ಬೆಲೆ ಸಿಗದೆ ಕಂಗಾಲಾಗಿರುವ ರೈತರಿಗೆ ಖರೀದಿ ಕೇಂದ್ರಗಳ ಮೂಲಕ ಖರೀದಿಸಿದ್ದ ಭತ್ತ, ರಾಗಿಗೆ ಸರ್ಕಾರ ಎರಡು ತಿಂಗಳಾದರೂ ಹಣ ಪಾವತಿಸಿಲ್ಲ.

2019-20ನೇ ಸಾಲಿನ ಮೊದಲ ಹಂಗಾಮಿನಲ್ಲಿ ರೈತರು ತಂಬಾಕು, ಶುಂಠಿ, ಮೆಕ್ಕೆ ಜೋಳ, ಭತ್ತ ಬೆಲೆಯುವುದು ವಾಡಿಕೆ. ನಂತರ ಹಿಂಗಾರಿ  ನಲ್ಲಿ ಸಂಪೂರ್ಣವಾಗಿ ಆಹಾರ ಬೆಳೆಯಾದ ಭತ್ತ, ರಾಗಿ  ಜೊತೆಗೆ ಹುರುಳಿ, ಅವರೆ, ಹಲಸಂ ದೆ ಧಾನ್ಯ ಬೆಳೆಯುತ್ತಾರೆ. ರೈತರು ಈಗಾಗಲೇ ಸರ್ಕಾರಕ್ಕೆ ರಾಗಿ, ಭತ್ತವನ್ನು ಮಾರಾಟ  ಮಾಡಿರುವುದರಿಂದ ಇತ್ತ ಬೆಳೆಯೂ ಇಲ್ಲ, ಹಣವೂ ಇಲ್ಲ ಎಂಬ ಪರಿಸ್ಥಿತಿಯಲ್ಲಿದ್ದಾರೆ.

ಸಾಲದ ಸುಳಿಯಲ್ಲಿ ರೈತರು: ಈಗಾಗಲೇ ಮುಂಗಾರು ಮಳೆ ಆರಂಭವಾಗಿದ್ದು ಎಲ್ಲೆಡೆ ಬಿತ್ತನೆ ಕಾರ್ಯ ನಡೆಯುತ್ತಿದೆ. ಆದರೆ, ಬಿತ್ತೆನೆಗೆ ಬೇಕಾದ ಬಿತ್ತನೆ ಬೀಜ, ರಸಗೊಬ್ಬರ, ಉಳುಮೆ ಸೇರಿದಂತೆ ಮತ್ತಿತರ ಖರ್ಚುಗಳಿಗೆ ರೈತರು ಪರದಾಡುವ ಪರಿಸ್ಥಿತಿ  ಎದುರಾಗಿದೆ. ಇದ್ಕಕಾಗಿ ಸಾಲದ ಮೊರೆ ಹೋಗಿರುವ ರೈತರು ಬಡ್ಡಿ ಸಾಲ ಮಾಡುವ ಮೂಲಕ ಬಿತ್ತನೆ ಕಾರ್ಯ ಮಾಡುವಂತಾಗಿದೆ. ಸರ್ಕಾರ ರೈತರಿಗೆ ತಕ್ಷಣವೇ ಹಣ ಪಾವತಿಸಿ  ದ್ದರೆ ರೈತರು ಸಾಲದ ಮೊರೆ ಹೋಗುವುದು ತಪ್ಪಿದಂದಂತಾಗುತ್ತಿತ್ತು.

ಜಿಲ್ಲೆಯಲ್ಲಿ 35 ಸಾವಿರ ಹೆಕ್ಟೇರ್‌ ಪ್ರದೇಶ   ದಲ್ಲಿ ರಾಗಿ, 1 ಲಕ್ಷ ಹೆಕ್ಟೇರ್‌ನಲ್ಲಿ ಭತ್ತವನ್ನು ಬೆಳೆದಿದ್ದರು. ಕೇಂದ್ರ ಪ್ರತಿ ಕ್ವಿಂಟಾಲ್‌ ರಾಗಿಗೆ 3100 ರೂ. ಬೆಂಬಲ ಬೆಲೆ ಘೋಷಣೆ ಮಾಡಿದ್ದರೆ, ಭತ್ತಕ್ಕೆ 1815 ರೂ.  ಬೆಂಬಲ ಬೆಲೆ ಘೋಷಿಸಿತ್ತು. ಇದಕ್ಕೆ ರಾಜ್ಯ ಸರ್ಕಾರ 200 ರೂ. ಹಣ ಸೇರಿಸಿದ್ದು, 2015 ರೂ. ಬೆಂಬಲ ಬೆಲೆಯಾಗಿತ್ತು. ಬೆಲೆ ಹೆಚ್ಚಿದ ಪರಿಣಾಮ ಎಲ್ಲಾ ರೈತರು ತಾವು ಬೆಳೆದ ಬೆಳೆಯನ್ನು ಖರೀದಿ ಕೇಂದ್ರಗಳ ಮೂಲಕ ಮಾರಾಟ ಮಾಡಿದ್ದರು.

ಕಳೆದ ಬಾರಿ ಬೆಳೆದ ರಾಗಿಯನ್ನು ಬೆಂಬಲ ಬೆಲೆಗೆ ಮಾರಾಟ ಮಾಡಿದ್ದೆವು. ಸರ್ಕಾರ ಖರೀದಿಸಿದ್ದ ರಾಗಿಗೆ ಹಣ ಪಾವತಿಸಿದ್ದರೆ ಹಣದ ಸಮಸ್ಯೆ ಕಡಿಮೆಯಾಗುತ್ತಿತ್ತು. 
-ಗೋವಿಂದಪ್ಪ, ರೈತ

* ಸತೀಶ್‌ ದೇಪುರ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.