Hunsur: ಸಂಸದ ಪ್ರತಾಪಸಿಂಹ ವಿರುದ್ದ ಕ್ರಮ ಕೈಗೊಳ್ಳಲು ವಕೀಲರ ಮನವಿ
Team Udayavani, Oct 6, 2023, 2:25 PM IST
ಹುಣಸೂರು: ಜನರನ್ನು ಕೆರಳಿಸುವಂತ ಹೇಳಿಕೆ ನೀಡುತ್ತಿರುವ ಸಂಸದ ಪ್ರತಾಪಸಿಂಹ ವಿರುದ್ದ ಕ್ರಮ ಕೈಗೊಳ್ಳಲು ವಕೀಲ ಪುಟ್ಟರಾಜು ಪೊಲೀಸರಲ್ಲಿ ಮನವಿ ಮಾಡಿದ್ದಾರೆ.
ಹುಣಸೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಮಹಿಷ ಒಬ್ಬ ರಾಜನಾಗಿದ್ದು, ಮಹಿಷ ದಸರಾ ಆಚರಿಸುತ್ತಿದ್ದೇವೆಯೇ ಹೊರತು ಬೇರೆಯವರಿಗೆ ನೋವುಂಟು ಮಾಡಲು ಅಲ್ಲ. ನಾವೇನು ಸಂಸದರಂತೆ ಜನರನ್ನು ಎತ್ತಿಕಟ್ಟುತ್ತಿಲ್ಲ. ನಾಲ್ಕು ವರ್ಷಗಳಿಂದ ನಾಪತ್ತೆಯಾಗಿದ್ದ ಸಂಸದರು ಜನರ ಧಾರ್ಮಿಕ ಭಾವನೆಗಳನ್ನು ಕೆರಳಿಸುವಂತ ಹೇಳಿಕೆ ನೀಡಿ ಅಶಾಂತಿ ಉಂಟು ಮಾಡಲು ಹೊರಟಿದ್ದಾರೆರೆಂದರು.
ಸಂಸದರು ಅಭಿವೃದ್ದಿ ಕಡೆ ಗಮನ ಹರಿಸುವುದನ್ನು ಬಿಟ್ಟು ಮಹಿಷ ದಸರಾ ಹೆಸರಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಇದು ಅವರಿಗೆ ಶೋಬೆ ತರಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರವರ ಧಾರ್ಮಿಕ ಆಚರಣೆಗೆ ಅವಕಾಶವಿದೆ ಎಂದರು.
ಎಲ್ಲರ ಧಾರ್ಮಿಕ ಭಾವನೆಗಳನ್ನು ಗೌರವಿಸಬೇಕು. ಅ.13 ರಂದು ನಡೆಸಲುದ್ದೇಶಿಸಿರುವ ಮಹಿಷ ದಸರಾ ದಂಧೆ ವ್ಯತಿರಿಕ್ತವಾಗಿ ಚಾಮುಂಡಿ ಬೆಟ್ಟ ಚಲೋ ಮಾಡುತ್ತಿರುವುದು ತರವಲ್ಲ. ಆ ಪಕ್ಷದ ಹಿರಿಯರು ಸಂಸದರಿಗೆ ತಿಳಿ ಹೇಳಬೇಕು. ಮಹಿಷ ದಸರಾ ತಡೆದಲ್ಲಿ ಆಗುವ ಅನಾಹುತಗಳಿಗೆ ಸಂಸದರೇ ನೇರ ಹೊಣೆಗಾರರಾಗಲಿದ್ದಾರೆಂದರು.
ಬೈಕ್ ರ್ಯಾಲಿ:
ಹುಣಸೂರು ಅ.13 ರ ಮಹಿಷ ದಸರಾಕ್ಕೆ ತಾಲೂಕಿನಿಂದ 200 ಕ್ಕೂ ಹೆಚ್ಚು ಬೈಕ್ ಗಳು, 15 ಬಸ್ ಗಳಲ್ಲಿ ಬುದ್ದನ ಅನುಯಾಯಿಗಳು ತೆರಳುತ್ತಿರುವುದಾಗಿ ತಿಳಿಸಿದರು.
ಹೆಚ್ಚಿನ ಸಂಖ್ಯೆಯಲ್ಲಿ ತಾಲೂಕಿನ ಜನರು ಬಾಗವಹಿಸುವಂತೆ ಬಿ.ಎಸ್.ಪಿ. ತಾಲೂಕು ಅಧ್ಯಕ್ಷ ಸೋಮನಹಳ್ಳಿ ಪ್ರಸನ್ನ ಮನವಿ ಮಾಡಿದರು.
ಸುದ್ದಿಗೋಷ್ಟಿಯಲ್ಲಿ ದಲಿತ ಮುಕಲಂಡ ವರದರಾಜು, ಕಾಂತರಾಜು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್