ಹುಣಸೂರು: ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಗ್ರಾಮಸ್ಥರ ಸಹಕಾರ ಅಗತ್ಯ

ಪುತ್ಥಳಿ, ಗ್ರಂಥಾಲಯ ನಿರ್ಮಾಣದಿಂದ ಕಟ್ಟೆಮಳಲವಾಡಿ ಜಿಲ್ಲೆಗೆ ಮಾದರಿ: ಶಾಸಕ ಮಂಜುನಾಥ್ ಬಣ್ಣನೆ

Team Udayavani, Sep 11, 2022, 10:00 AM IST

news-1

ಹುಣಸೂರು: ತಾಲೂಕಿನ ಕಟ್ಟೆಮಳಲವಾಡಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಿಶ್ವಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ್‌ರವರ ಪುತ್ಥಳಿ ಸ್ಥಾಪನೆ, ಸಾವಿತ್ರಿಬಾಯಿ ಪುಲೆ ಗ್ರಂಥಾಲಯ ಹಾಗೂ ಉದ್ಯಾನವನ ನಿರ್ಮಾಣಕ್ಕೆ ಶಾಸಕದ್ವಯರಾದ ಎಚ್.ಪಿ.ಮಂಜುನಾಥ್ ಹಾಗೂ ಜಿ.ಟಿದೇವೇಗೌಡ ಗುದ್ದಲಿ ಪೂಜೆ ನೆರವೇರಿಸಿದರು.

ತಾಲೂಕಿನ ಕಟ್ಟೆಮಳಲವಾಡಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಷ್ಟಾಪನಾ ಸಮಿತಿಯು ಆಯೋಜಿಸಿದ್ದ ಅಂಬೇಡ್ಕರರ ಪುತ್ಥಳಿ ಪ್ರತಿಷ್ಟಾಪನೆಯ ಗುದ್ದಲಿ ಪೂಜೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ಬಹುದಿನದ ಕನಸನ್ನು ಗ್ರಾಮಸ್ಥರು ಹಾಗೂ ಸರಕಾರಿ ನೌಕರರು,ಅಧಿಕಾರಿಗಳು, ನಿವೃತ್ತರು ಸೇರಿ ತಾಲೂಕಿಗೆ ಮಾದರಿ ರೀತಿಯಲ್ಲಿ ನನಸಾಗಿಸುತ್ತಿದ್ದೀರೆಂದು ಪ್ರಶಂಸಿಸಿ, ಕಟ್ಟೆಮಳಲವಾಡಿ ಗ್ರಾಮ ನನಗೆ ರಾಜಕೀಯವಾಗಿ ಶಕ್ತಿ ತುಂಬಿದೆ. ಈ ಗ್ರಾಮವನ್ನು ಸಿದ್ದರಾಮಯ್ಯರ ಸರಕಾರದ ಅವಧಿಯಲ್ಲಿ ಸುಮಾರು 60 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ದಿಪಡಿಸಿದ್ದೇನೆಂಬ ಆತ್ಮತೃಪ್ತಿ ಇದೆ ಎಂದರು.

ಇಲ್ಲಿ ಅಂಬೇಡ್ಕರ್ ಭವನ ಇದ್ದುದ್ದರಿಂದ ಮತ್ತೊಂದು ಭವನ ನಿರ್ಮಿಸಲು ಸರಕಾರ ಅನುದಾನ ನೀಡಲ್ಲ. ಆದರೂ ಹೋಬಳಿ ಕೇಂದ್ರವಾದ ಗಾವಡಗೆರೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ 50 ಲಕ್ಷ ರೂ. ಮಂಜೂರಾಗಿದ್ದು, ಅಲ್ಲಿ ನಿವೇಶನ ಕೊರತೆಯಿಂದ ಅನುದಾನ ಬಾಕಿ ಇದ್ದು, ಆ ಅನುದಾನವನ್ನು ಇಲ್ಲಿ ಗ್ರಂಥಾಲಯ ನಿರ್ಮಾಣಕ್ಕೆ ವರ್ಗಾಯಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವೆ.  ಪ್ರಮುಖ ಸ್ಥಳದಲ್ಲಿ ನಿವೇಶನ ಗುರುತಿಸಿ ಮಂಜೂರು ಮಾಡಿರುವ ಅಂದಿನ ಗ್ರಾ.ಪಂ.ಅಧ್ಯಕ್ಷರಾಗಿದ್ದ ದೇವಯ್ಯನವರ ಕಾಳಜಿಯನ್ನು ಸ್ಮರಿಸಿದರು.

ಕಳೆದ ಆರು ತಿಂಗಳಿನಿಂದಷ್ಟೆ ಅಭಿವೃದ್ದಿ ಕಾರ್ಯಕ್ಕೆ ಚಾಲನೆ ದೊರೆತಿದ್ದು, ಎಂದಿಗೂ ಮಾತು ತಪ್ಪದ ಮಂಜುನಾಥ ಮುಂದೆ ಸಮಿತಿಯೊಂದಿಗೆ ಚರ್ಚಿಸಿ ಸಂಪೂರ್ಣ ಬೆಂಬಲ ನೀಡುವೆನೆಂದರು.

ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ದೇಶಕ್ಕೆ ಅತ್ಯುತ್ತಮ ಸಂವಿದಾನ ನೀಡಿದ ಅಂಬೇಡ್ಕರರ ಪುತ್ಥಳಿಯ ಸ್ಥಾಪನೆ ಎಲ್ಲರ ಪರಿಶ್ರಮದಿಂದ  ಸ್ಥಾಪಿಸುತ್ತಿರುವುದು ಸ್ವಾಗತಾರ್ಹ, ಇಲ್ಲಿ ಅತ್ಯುತ್ತಮ ಗ್ರಂಥಾಲಯ, ಸಂಶೋಧನಾ ಕೇಂದ್ರ ಆರಂಭವಾಗಲೆಂದು ಆಶಿಸಿ, ಸರ್ವ ಜನಾಂಗವಿರುವ ಇದೊಂದು ಆದರ್ಶ ಗ್ರಾಮವಾಗಿದ್ದು, ಈ ಕಾರ್ಯಕ್ಕೆ ಸಹಕಾರ ನೀಡುವೆನೆಂದರು.

ದಲಿತ ಮುಖಂಡ ಹರಿಹರ ಆನಂದಸ್ವಾಮಿ ಮಾತನಾಡಿ, ತಾಲೂಕಿನಲ್ಲಿ ಶೋಷಿತರು ಬಹುಸಂಖ್ಯಾತರಾಗಿದ್ದರೂ ಎಡ-ಬಲವೆಂಬ ಹೆಸರಿನಲ್ಲಿ ಒಡೆದು ಹೋಗಿ ಅನಾಯಾಸವಾಗಿ ಪಡೆಯಬಹುದಾದ ಅಧಿಕಾರದಕ್ಕದಾಗಿದೆ. ಮಾನಸಿಕವಾಗಿ ಒಂದಾದಲ್ಲಿ ಮಾತ್ರ ನಮ್ಮತನವನ್ನು ಉಳಿಸಿಕೊಳ್ಳಲು ಸಾಧ್ಯವೆಂದರು.

ಸಮಿತಿಯ ಅಧ್ಯಕ್ಷ ನಾಗರಾಜ ಮಲ್ಲಾಡಿ, ಉಪಾಧ್ಯಕ್ಷ ನಿಂಗರಾಜ ಮಲ್ಲಾಡಿ ಮಾತನಾಡಿ, ಬರುವ ಡಿ.6 ಅಂಬೇಡ್ಕರ್ ಪರಿನಿಬ್ಬಾಣದಿನದಂದು ಪುತ್ಥಳಿ ಸ್ಥಾಪಿಸಲು ಎಲ್ಲರೂ ಸಹಕರಿಸಬೇಕೆಂದು ಕೋರಿದರು.

ಜಿ.ಪಂ. ಮಾಜಿ ಸದಸ್ಯ ಅಚ್ಚುತಾನಂದರವರು ಈ ಕಾರ್ಯಕ್ಕೆ ವೈಯಕ್ತಿಕವಾಗಿ 10 ಲಕ್ಷ ರೂ. ನೀಡುವುದಾಗಿ ಘೋಷಿಸಿದರು.

ಬಿ. ಆರ್. ಸಿ. ಸಂತೋಷ್‌ ಕುಮಾರ್ ಶೋಷಿತರ ಬೆಳಕಾಗಿರುವ ಅಂಬೇಡ್ಕರರ ಪುತ್ಥಳಿಯನ್ನು ಸ್ಥಾಪಿಸುವ ಜೊತೆಗೆ ಇಲ್ಲಿ ಸಾವಿತ್ರಿಬಾಯಿ ಬಾಪುಲೆ ಹೆಸರಿನಲ್ಲಿ ಗ್ರಂಥಾಲಯ ಸ್ಥಾಪಿಸಲಾಗುವುದು. ಬುದ್ದನ ಉದ್ಯಾನ ನಿರ್ಮಿಸಲಾಗುವುದೆಂದರೆ ಅಭಿಯೋಜಕ ರಮೇಶ್‌ ಬಾಬು ಗ್ರಂಥಾಲಯಕ್ಕೆ ಅವಶ್ಯವಾದ ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕಗಳು ಸೇರಿದಂತೆ ಎಲ್ಲ ರೀತಿಯ ಸಹಕಾರ ನೀಡಲಾಗುವುದೆಂದರು.

ಜೆಡಿಎಸ್ ಉಪಾಧ್ಯಕ್ಷ ದೇವರಾಜ ಒಡೆಯರ್, ಮಾಜಿ ಮೇಯರ್ ಪುರುಷೋತ್ತಮ್ ಮಾತನಾಡಿ, ದಲಿತರು ತಮ್ಮೊಳಗಿನ ಈರ್ಷೆ ಬಿಟ್ಟು ಒಂದಾದಲ್ಲಿ ಮಾತ್ರ ಅಧಿಕಾರ ಹಿಡಿಯಲು ಸಾಧ್ಯವೆಂದರು. ಮಾಜಿ ಸಂಸದ ವಿಜಯಶಂಕರ್, ಜೆಡಿಎಸ್ ಅಧ್ಯಕ್ಷ ದೇವರಹಳ್ಳಿಸೋಮಶೇಖರ್, ಹುಡಾ ಅಧ್ಯಕ್ಷ ಗಣೇಶ್‌ ಕುಮಾರಸ್ವಾಮಿ, ನಗರಸಭೆ ಸದಸ್ಯ ದೊಡ್ಡಹೆಜ್ಜೂರು ರಮೇಶ್,ಕೆಂಪನಾಯಕ ಮಾತನಾಡಿದರು.

ಈ ವೇಳೆ ಗ್ರಾ.ಪಂ.ಅಧ್ಯಕ್ಷೆ ಸುಧಾತಗಡಯ್ಯ,ಸದಸ್ಯರು, ತಾ.ಪಂ.ಮಾಜಿ ಅಧ್ಯಕ್ಷೆ ಪದ್ಮಮ್ಮ, ತಾ.ಬಿಜೆಪಿ ಅಧ್ಯಕ್ಷ ನಾಗಣ್ಣ, ಮುಖಂಡರಾದ ನಟರಾಜ್, ತಗಡಯ್ಯ, ದೇವರಾಜ್, ಶ್ರೀಧರ್, ಬಸವಲಿಂಗಯ್ಯ, ಸಂಜು, ಕೃಷ್ಣಶೆಟ್ಟೆ, ಕೇಶವಮೂರ್ತಿ, ಹರೀಶ್, ಪ್ರಪುಲ್ಲಾಮಲ್ಲಾಡಿ ಸೇರಿದಂತೆ ಅನೇಕ ಮುಖಂಡರಿದ್ದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.