ಹುಣಸೂರು: ಉರುಳಿಗೆ ಬಲಿಯಾಗಿದ್ದ ಹುಲಿಯ ಮೂರು ಮರಿಗಳು ಸುರಕ್ಷಿತ


Team Udayavani, Nov 17, 2022, 10:08 AM IST

2

ಹುಣಸೂರು: ನಾಗರಹೊಳೆ ಉದ್ಯಾನವನದ ಅಂತರಸಂತೆ ವಲಯದಂಚಿನಲ್ಲಿ ಉರುಳಿಗೆ ಬಲಿಯಾಗಿದ್ದ ಹೆಣ್ಣು ಹುಲಿಯ ಮೂರು ಹುಲಿ ಮರಿಗಳು ಸುರಕ್ಷಿತವಾಗಿದ್ದು, ಸ್ವತಃ ಬೇಟೆಯಾಡುವಷ್ಟು ಆರೋಗ್ಯವಾಗಿರುವ ಬಗ್ಗೆ ಕ್ಯಾಮರಾ ಟ್ರ‍್ಯಾಪಿಂಗ್ ನಲ್ಲಿ ಮಾಹಿತಿ ಲಭ್ಯವಾಗಿದೆ.

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಅಂತರಸಂತೆ ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ತಾರಕ ಹೊಳೆಯ ಭಾಗದಲ್ಲಿ ಕಳೆದ ಎರಡು ತಿಂಗಳಿನಿಂದಲೂ ಒಂದು ಹೆಣ್ಣು ಹುಲಿ ತನ್ನ ಮೂರು ಮರಿ ಹುಲಿಗಳೊಂದಿಗೆ ಓಡಾಡುತ್ತಿದ್ದುದ್ದನ್ನು ಸಿಬ್ಬಂದಿಗಳು ಪತ್ತೆ ಮಾಡಿದ್ದರು.

ನ.12 ರಂದು ತಾರಕ ಹಿನ್ನೀರಿನ ಖಾಸಗಿ ಜಮೀನಿನಲ್ಲಿ ತಾಯಿ ಹುಲಿಯ ಕಳೆಬರಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಅರಣ್ಯ ಇಲಾಖೆ ಅಧಿಕಾರಿಗಳು ಮರಿ ಹುಲಿಗಳ ಸುರಕ್ಷತೆಗಾಗಿ ಪತ್ತೆ ಹಚ್ಚಲು ನಾಗರಹೊಳೆ ನಿರ್ದೆಶಕ ಹರ್ಷಕುಮಾರ್ ನರಗುಂದ ರವರ ನೇತೃತ್ವದಲ್ಲಿ 130 ಸಿಬ್ಬಂದಿಗಳು, 4 ಸಾಕಾನೆಗಳು, 30 ಟ್ರ‍್ಯಾಪಿಂಗ್ ಕ್ಯಾಮರಾ ಮತ್ತು 2 ಡ್ರೋನ್‌ ಕ್ಯಾಮರಾಗಳನ್ನು ಬಳಸಿಕೊಂಡು ಮರಿ ಹುಲಿಗಳ ಜಾಡು ಪತ್ತೆ ಹಚ್ಚುವ ಕೂಂಬಿಂಗ್ ಕಾರ್ಯಚರಣೆ ಕೈಗೊಂಡು ಇದೀಗ  ಮರಿ ಹುಲಿಗಳು ಇರುವ ಸ್ಥಳ ಮತ್ತು ಹೆಜ್ಜೆಗುರುತುಗಳು ಕಂಡು ಬಂದಿದೆ.

ಅಲ್ಲದೆ ನ.15 ರ ಮಂಗಳವಾರ ಒಂದು ಜಿಂಕೆಯನ್ನು ಯಾವುದೋ ಮಾಂಸಹಾರಿ ಪ್ರಾಣಿ ದಾಳಿ ಮಾಡಿ ಕೊಂದು ಸ್ವಲ್ಪ ಮಾಂಸವನ್ನು ತಿಂದಿರುವುದು ಕಂಡು ಬಂದ ಕಾರಣ ಜಿಂಕೆಯ ಕಳೇಬರದ ಸುತ್ತ ಅಳವಡಿಸಲಾಗಿದ್ದ ಟ್ರ‍್ಯಾಪಿಂಗ್ ಕ್ಯಾಮರಾಗಳನ್ನು ಪರಿಶೀಲಿಸಿದ ವೇಳೆ 10-11 ತಿಂಗಳ ಪ್ರಾಯದ ಮೂರು ಮರಿ ಹುಲಿಗಳು ನ.16 ಬುಧವಾರದಂದು ಜಿಂಕೆ ಕಳೇಬರದ ಬಳಿ ಬಂದು ಚಿಂಕೆಯನ್ನು ತಿಂದಿರುವುದಲ್ಲದೇ ಸುತ್ತಮುತ್ತಲಿನಲ್ಲೂ  ಮರಿ ಹುಲಿಗಳು ಓಡಾಡಿರುವ ಹೆಜ್ಜೆ ಗುರುತುಗಳು ಮತ್ತು ಟ್ರ‍್ಯಾಪಿಂಗ್ ಕ್ಯಾಮರಾಗಳಲ್ಲಿ ಛಾಯಚಿತ್ರ ಸೆರೆಯಾಗಿದ್ದು, ಹುಲಿ ಮರಿಗಳು ಆರೋಗ್ಯವಾಗಿರುವುದು ಕಂಡುಬಂದಿದೆ.

ಈ ಹುಲಿ ಮರಿಗಳು ಸ್ವತಃ ತಾವೇ ಜಿಂಕೆಯನ್ನು ಬೇಟೆಯಾಡಿ ತಿಂದಿರುವುದು ಒಂದು ಆಶಾದಾಯಕ ಬೆಳವಣಿಗೆಯಾಗಿದ್ದು, ಮರಿ ಹುಲಿಗಳು ಬೇಟೆಯಾಡುವ ಕಲೆಯನ್ನು ಕಲಿತಿರುವುದರಿಂದ ತಾವಾಗಿಯೇ ಬದುಕಬಲ್ಲವು ಮತ್ತು ಮರಿಹುಲಿಗಳು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದೊಳಗೆ ತನ್ನ ತಾಯಿ ಹುಲಿಯು ಓಡಾಡುತ್ತಿದ್ದ ಪ್ರದೇಶದಲ್ಲಿಯೇ ಕಂಡುಬಂದಿದೆ. ಈ ಮರಿಹುಲಿಗಳ ಚಲನವಲನಗಳ ಮೇಲೆ ಅರಣ್ಯ ಇಲಾಖೆಯು ನಿರಂತರವಾಗಿ ನಿಗಾ ವಹಿಸಿ ಅವುಗಳನ್ನು ರಕ್ಷಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ನಾಗರಹೊಳೆ ಹುಲಿ ಯೋಜನೆ ನಿರ್ದೇಶಕ ಹರ್ಷಕುಮಾರ್ ನರಗುಂದ ಉದಯವಾಣಿಗೆ ತಿಳಿಸಿದರು.

ಟಾಪ್ ನ್ಯೂಸ್

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

1-ww-ewewe

ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ

1-scadsadsad

ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್

ಸಲ್ಮಾನ್ ಖಾನ್ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

Forest Department Case Against UP Man Who Rescued, Cared For Sarus Crane

ಕೊಕ್ಕರೆಯನ್ನು ರಕ್ಷಿಸಿ ಸಾಕಿದ್ದ ಆರಿಫ್ ಖಾನ್ ಗೆ ಅರಣ್ಯ ಇಲಾಖೆ ನೋಟಿಸ್

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

G PARAMESHWAR

ಒಳಮೀಸಲಾತಿ ಹೆಚ್ಚಳ ರಾಜ್ಯ ಸರ್ಕಾರದ ಚುನಾವಣಾ ಗಿಮಿಕ್-ಡಾ.ಜಿ.ಪರಮೇಶ್ವರ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-15

ಪ್ಲಾಸ್ಟಿಕ್‌ ನಿಷೇಧಕ್ಕೆ ಪೊಲೀಸ್‌ ಒಳಗೊಂಡ ಸ್ಕ್ವಾಡ್‌ ರಚಿಸಿ

ಸಿದ್ದರಾಮಯ್ಯ ಪುಕ್ಕಲುತನದಿಂದ ವರುಣಾಗೆ ಬರುತ್ತಿದ್ದಾರೆ: ಪ್ರತಾಪ್ ಸಿಂಹ

ಸಿದ್ದರಾಮಯ್ಯ ಪುಕ್ಕಲುತನದಿಂದ ವರುಣಾಗೆ ಬರುತ್ತಿದ್ದಾರೆ: ಪ್ರತಾಪ್ ಸಿಂಹ

ಮೈಸೂರಿನಲ್ಲಿ ಪಂಚರತ್ನ ರಥಯಾತ್ರೆಯ ಬೃಹತ್ ಸಮಾರೋಪ ಸಮಾವೇಶಕ್ಕೆ ಸಿದ್ದತೆ

ಮೈಸೂರಿನಲ್ಲಿ ಪಂಚರತ್ನ ರಥಯಾತ್ರೆಯ ಬೃಹತ್ ಸಮಾರೋಪ ಸಮಾವೇಶಕ್ಕೆ ಸಿದ್ದತೆ

tdy-11

ಉದ್ದೇಶ ಪೂರ್ವಕವಾಗಿಯೇ ರಾಹುಲ್ ಗಾಂಧಿ ಅವರನ್ನು ಅನರ್ಹ ಮಾಡಲಾಗಿದೆ: ಎಚ್.ವಿಶ್ವನಾಥ್

1-adsad-asd

ಹುಣಸೂರು: ಹೃದಯಾಘಾತದಿಂದ ಅರಣ್ಯ ಪ್ರೇರಕ ನಿಧನ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

1-ww-ewewe

ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ

1-scadsadsad

ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್

ಸಲ್ಮಾನ್ ಖಾನ್ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

Forest Department Case Against UP Man Who Rescued, Cared For Sarus Crane

ಕೊಕ್ಕರೆಯನ್ನು ರಕ್ಷಿಸಿ ಸಾಕಿದ್ದ ಆರಿಫ್ ಖಾನ್ ಗೆ ಅರಣ್ಯ ಇಲಾಖೆ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.