ಹುಣಸೂರು: ಗಂಧದ ಮರದ ತುಂಡುಗಳ ಅಕ್ರಮ ಸಾಗಾಟ; ಓರ್ವನ ಬಂಧನ; ನಾಲ್ವರು ಪರಾರಿ
Team Udayavani, Sep 17, 2020, 9:58 PM IST
ಹುಣಸೂರು: ಅಕ್ರಮವಾಗಿ ಗಂಧದ ಮರದ ತುಂಡುಗಳ ಸಾಗಿಸುತ್ತಿದ್ದಾಗ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಓರ್ವನನ್ನು ಬಂಧಿಸಿ ಗಂಧದ ತುಂಡು ವಶಕ್ಕೆ ಪಡೆದುಕೊಂಡ ಘಟನೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದಂಚಿನ ಬೀರತಮ್ಮನಹಳ್ಳಿ- ಪಂಚವಳ್ಳಿ ನಡೆದಿದೆ.
ಬಂಧಿತ ಆರೋಪಿ ಸ್ವಾಮಿ ಎಂದು ತಿಳಿದು ಬಂದಿದ್ದು, ಈತನಿಂದ 12 ಕೆಜಿಯಷ್ಟು ಗಂಧದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದ್ದು. ಕೃತ್ಯಕ್ಕೆ ಬಳಸಿದ್ದ ಎರಡು ಬೈಕ್ ವಶಕ್ಕೆ ಪಡೆಯಲಾಗಿದೆ. ನಾಲ್ವರು ಆರೋಪಿಗಳು ಪರಾರಿಯಾಗಿದ್ದಾರೆ.
ಗುರುವಾರ ಅರಣ್ಯ ಸಿಬ್ಬಂಧಿಗಳು ಗಸ್ತಿನಲ್ಲಿದ್ದ ವೇಳೆ ಗೋಣಿ ಚೀಲದಲ್ಲಿ ಸುತ್ತಿದ್ದ ಗಂಧದ ತುಂಡುಗಳನ್ನು ಸಾಗಿಸುತ್ತಿರುವ ವಾಸನೆಯ ಜಾಡು ಹಿಡಿದು ಆರೋಪಿಗಳನ್ನು ಬೆನ್ನತ್ತಿದ ವೇಳೆ ಸ್ವಾಮಿ ಮಾಲು ಸಮೇತ ಸಿಕ್ಕಿ ಬಿದ್ದಿದ್ದಾನೆ. ಉಳಿದ ಆರೋಪಿಗಳ ಪತ್ತೆಗೆ ತಂಡ ರಚಿಸಲಾಗಿದೆ ಎಂದು ಎ.ಸಿ.ಎಫ್ ಸತೀಶ್ ಉದಯವಾಣಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!