ಶುಂಠಿಯೊಳಗೆ ಲಕ್ಷಾಂತರ ರೂ. ಬೆಲೆ ಬಾಳುವ ಬೀಟೆ ನಾಟ ಸಾಗಾಟ
Team Udayavani, Apr 21, 2022, 3:32 PM IST
ಹುಣಸೂರು: ಶುಂಠಿಯ ಚೀಲದ ಕೆಳಗೆ ಅಕ್ರಮವಾಗಿ ಕೇರಳ ಕಡೆಗೆ ಸಾಗಿಸುತ್ತಿದ್ದ 8 ಲಕ್ಷರೂ ಬೆಲೆ ಬಾಳುವ ಬೀಟೆ ನಾಟಾವನ್ನು ವಶ ಪಡಿಸಿಕೊಳ್ಳುವಲ್ಲಿ ಹುಣಸೂರು ಪ್ರಾದೇಶಿಕ ಅರಣ್ಯ ವಿಭಾಗದ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಶನಿವಾರ ಸಂತೆಯ ಹರೀಶ್ ಪೊನ್ನಪ್ಪರಿಗೆ ಸೇರಿದ ಮಹೇಂದ್ರ ಮಿನಿ ಗೂಡ್ಸ್ ವಾಹನವನ್ನು ವಶಕ್ಕೆ ಪಡೆಯಲಾಗಿದ್ದು, ಚಾಲಕ ಪರಾರಿಯಾಗಿದ್ದಾನೆ.
ಶನಿವಾರ ಸಂತೆಯಿಂದ ಹುಣಸೂರು ಹೆಚ್.ಡಿ.ಕೋಟೆ ಮಾರ್ಗವಾಗಿ ಬಾವಲಿ ಚೆಕ್ ಪೋಸ್ಟ್ ಮೂಲಕ ಕೇರಳಕ್ಕೆ ಬೀಟೆ ನಾಟಗಳನ್ನು ಸಾಗಿಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಡಿ.ಎಫ್.ಓ. ಸೀಮಾ ಬಿ.ಎ.ಹಾಗೂ ಎಸಿಎಫ್ ಅನುಷಾರ ಮಾರ್ಗದರ್ಶನದಲ್ಲಿ ಆರ್ ಎಫ್ ಓ ನಂದಕುಮಾರ್ ನೇತೃತ್ವದ ತಂಡ ಹುಣಸೂರು-ಹೆಚ್.ಡಿ. ಕೋಟೆ ರಸ್ತೆಯ ನಲ್ಲೂರು ಪಾಲ ಜಂಕ್ಷನ್ ಬಳಿಯಲ್ಲಿ ಹೊಂಚು ಹಾಕಿ ವಾಹನವನ್ನು ತಡೆಯುತ್ತಿದ್ದಂತೆ ವಾಹನ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ.
ಇದನ್ನೂ ಓದಿ:ಕಿಡ್ನಾಪ್ ಆಗಿದ್ದ ಬೇಕರಿ ಮಾಲೀಕಗೆ ರಕ್ಷಣೆ ಒದಗಿಸಲು ಆಗ್ರಹಿಸಿ ಮನವಿ
ವಾಹನದಲ್ಲಿ ಸುಮಾರು 7 ಲಕ್ಷರೂ ಬೆಲೆ ಬಾಳುವ ಹಳೆಯ 7ಬೀಟೆ ಮರದ ನಾಟಾಗಳು ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಯಿತೆಂದು ಡಿಎಫ್ ಓ ಸೀಮಾ ಮಾಹಿತಿ ನೀಡಿದರು.
ಕಾರ್ಯಾಚರಣೆಯಲ್ಲಿ ಆರ್.ಎಫ್. ಓ .ನಂದಕುಮಾರ್. ಡಿ.ಆರ್.ಎಫ್.ಓ.ಗಳಾದ ಮಲ್ಲಿಕಾರ್ಜುನ. ಹರೀಶ್ ದೇವಯ್ಯ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
MUST WATCH
ಹೊಸ ಸೇರ್ಪಡೆ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ