Hunsur: ಬೆಂಕಿ ರೋಗ, ಎಲೆ ಸುರುಳಿ ಹುಳುಗಳಿಂದ ಬೆಳೆಗಳನ್ನು ರಕ್ಷಿಸಲು ಕೀಟನಾಶಕ ಲಭ್ಯ
Team Udayavani, Oct 12, 2023, 2:19 PM IST
ಹುಣಸೂರು: ಇತ್ತೀಚಿನ ದಿನಗಳಲ್ಲಿ ಭತ್ತದ ಬೆಳೆಗೆ ಬೆಂಕಿ ರೋಗ, ಎಲೆ ಸುರುಳಿ ಹುಳಗಳು ಕಾಣಿಸಿಕೊಳ್ಳುತ್ತಿದ್ದು ಇವುಗಳು ಭತ್ತದ ಬೆಳೆಯನ್ನು ನಾಶ ಮಾಡುತ್ತಿರುವುದರಿಂದ ರೈತರು ಸಂಕಷ್ಟಗೀಡಾಗುತ್ತಿದ್ದಾರೆ. ಇದಕ್ಕೆ ಪರಿಹಾರವಾಗಿ ಬಣಕಲ್ ನ ರೈತ ಸಂಪರ್ಕ ಕೇಂದ್ರ ಕಚೇರಿ ಪ್ರಕಟಣೆಯೊಂದನ್ನು ನೀಡಿದೆ.
ಬೆಂಕಿ ರೋಗ: ಎಲೆಗಳ ಮೇಲೆ ಕಂದು ಬಣ್ಣದ ಚುಕ್ಕೆಗಳು ಕಾಣುತ್ತವೆ. ಇಂತಹ ಚುಕ್ಕೆಗಳ ಮಧ್ಯಭಾಗವೂ ನಂತರದ ದಿನಗಳಲ್ಲಿ ಬೂದಿ ಬಣ್ಣಕ್ಕೆ ತಿರುಗುತ್ತದೆ. ಹಾಗೂ ಇಂತಹ ಹಲವಾರು ಚುಕ್ಕೆಗಳು ಸೇರಿ ಎಲೆಗಳು ಸುಟ್ಟಂತೆ ಕಾಣುತ್ತವೆ.
ಬೆಂಕಿ ರೋಗದ ಹತೋಟಿಗೆ ಬರಲು TRICYCLAZOLE ಶಿಲೀಂದ್ರ ನಾಶಕವನ್ನು 0.6 ಗ್ರಾಂ ಅನ್ನು ಪ್ರತಿ ಲೀಟರಿಗೆ ಬೆರೆಸಿ ಸಿಂಪರಣೆ ಮಾಡಬೇಕು.
ಎಲೆ ಸುರುಳಿ ಹುಳು: ಮರಿ ಹುಳುಗಳು ಎಲೆಗಳನ್ನು ಸುರುಳಿ ಮಾಡಿ ಅದರೊಳಗೆ ಇದ್ದು ಹಸಿರು ಭಾಗವನ್ನು ಕೆರೆದು ತಿನ್ನುವುದರಿಂದ ಎಲೆಗಳ ಮೇಲೆ ಬಿಳಿ ಪಟ್ಟಿಗಳು ಕಾಣುತ್ತವೆ.
ಈ ಹುಳುಗಳನ್ನು ಹತೋಟಿಗೆ ತರಲು ಕ್ಲೋರೋಫೈರಿಪಾಸ್ ಕೀಟನಾಶಕವನ್ನು 2 ಮಿ.ಲೀ. ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಣೆ ಮಾಡಬೇಕು.
Tricyclazole ಶಿಲೀಂದ್ರ ನಾಶಕ ಹಾಗೂ ಕ್ಲೋರೋಫೈರಿಫಾಸ್ ಕೀಟನಾಶಕ ಬಣಕಲ್ ನ ರೈತ ಸಂಪರ್ಕ ಕೇಂದ್ರದಲ್ಲಿ ಲಭ್ಯವಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಬಣಕಲ್ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ವೆಂಕಟೇಶ್ ಎಂ ಆರ್ ವಿನಂತಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?