ಎಲ್ಲಾ ಕಾರ್ಖಾನೆಗಳೂ ಖಾಸಗೀಕರಣ ಆಗಲಿ


Team Udayavani, Jun 10, 2020, 5:41 AM IST

agali khasagi

ಮೈಸೂರು: ಕೇವಲ ಸಕ್ಕರೆ ಕಾರ್ಖಾನೆ ಮಾತ್ರವಲ್ಲ, ರಾಜ್ಯದಲ್ಲಿರುವ ಎಲ್ಲಾ ಕಾರ್ಖಾನೆಗಳನ್ನು ಖಾಸಗೀಕರಣ ಮಾಡಲಿ. ನಾನೊಬ್ಬ ಉದ್ಯಮಿಯಾಗಿ ಖಾಸಗೀಕರಣ ಮಾಡುವಂತೆ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಮಾಜಿ  ಸಚಿವ, ಶಾಸಕ ಮುರುಗೇಶ್‌ ನಿರಾಣಿ ತಿಳಿಸಿದರು. ಪಾಂಡವಪುರ ಸಕ್ಕರೆ ಕಾರ್ಖಾನೆ ಖಾಸಗೀ ಕರಣಕ್ಕೆ ಮಂಡ್ಯ ಜನಪ್ರತಿನಿಧಿಗಳ ವಿರೋಧ ಕುರಿತ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ, ಯಾರೂ ಕಾರ್ಖಾನೆ ಖಾಸಗೀಕರಣಕ್ಕೆ ವಿರೋಧ ಮಾಡಿಲ್ಲ. ಅಲ್ಲಿನ ಎಲ್ಲ ಜನಪ್ರತಿನಿಧಿಗಳು ನಮಗೆ ಸಹಕಾರ ನೀಡಿದ್ದಾರೆ. ಮೈಷುಗರ್‌ ಕಾರ್ಖಾನೆ ಬಗ್ಗೆ ನಾನಿನ್ನೂ ತೀರ್ಮಾನ ಕೈಗೊಂಡಿಲ್ಲ ಎಂದು ಹೇಳಿದರು.

ಆದಾಯ ಬರಲಿದೆ: ಪಾಂಡವಪುರ ಕಾರ್ಖಾನೆಗೆ 26 ಕೋಟಿ ಹಣ ಕಟ್ಟಬೇಕಿದೆ. ಅದನ್ನು ನಾವು ಕಟ್ಟುತ್ತೇವೆ. ಆದರೆ ಅಲ್ಲಿನ ಬಾಕಿ ನಮಗೆ ಸಂಬಂಧ ಪಡುವುದಿಲ್ಲ. ಈ ಕ್ಷಣದಿಂದ ನಾವು  ಅಲ್ಲಿನ ಎಲ್ಲ ವ್ಯವಸ್ಥೆ ಬಳಸಿಕೊಂಡು ಕಬ್ಬು  ಅರೆಯುತ್ತೇವೆ. ಅದರಲ್ಲಿನ ಬಯೋ ಉತ್ಪನ್ನಗಳನ್ನು ತಯಾರಿಸಿ ರೈತರಿಗೆ ಹಿಂದಿ ಗಿಂತ ಹೆಚ್ಚಿನ ಆದಾಯ ಬರುವಂತೆ ಮಾಡುತ್ತೇವೆ. ಆ ಭಾಗದಲ್ಲಿ ಇದರಿಂದ ನಿರುದ್ಯೋಗ ನಿವಾರಣೆಯಾಗುತ್ತದೆ. ಯಾವ ಕಾರಣಕ್ಕೆ ವಿರೋಧ  ಮಾಡುತ್ತಿದ್ದಾರೋ ಗೊತ್ತಿಲ್ಲ ಎಂದು ಹೇಳಿದರು.

ಸೂಕ್ತ ನಿರ್ವಹಣೆ: ಕಾರ್ಖಾನೆ ಖಾಸಗಿಯ ವರಿಗೆ ನೀಡಿದರೆ ಸೂಕ್ತ ನಿರ್ವಹಣೆ ಮಾಡು ತ್ತಾರೆ. ಕಾರ್ಖಾನೆ ಮಾರಾಟಕ್ಕೆ ನನ್ನ ವಿರೋಧವಿದೆ. ಆದರೆ ಗುತ್ತಿಗೆ ನೀಡಿ ಟೆಂಡರ್‌ ಮೂಲಕ ಕಾರ್ಖಾನೆ ನಡೆಸಲಿ. ಬೇಕಾದರೆ ಡಿ.ಕೆ. ಶಿವಕುಮಾರ್‌ ಟೆಂಡರ್‌ನಲ್ಲಿ ಭಾಗಿಯಾಗಲಿ. ವಿರೋಧಕ್ಕಾಗಿ ವಿರೋಧ ಮಾಡುವುದು ಬೇಡ. ಖಾಸಗೀಕರಣದ ಬಗ್ಗೆ ಮನ ಮೋಹನ್‌ ಸಿಂಗ್‌, ಮೋದಿಯೂ ಹೇಳಿದ್ದಾರೆ ಎಂದರು. ನಿರಾಣಿ ಷುಗರ್ನಲ್ಲಿ ಕೇವಲ 32 ಕೋಟಿ ಬಾಕಿ ಇದೆ. ಆದರೆ, ನಾವು 2000 ಕೋಟಿ ವ್ಯವ ಹಾರ ಮಾಡಿದ್ದೇವೆ. ಅದರಲ್ಲಿ 32 ಕೋಟಿ ಮಾತ್ರ ಬಾಕಿ ಇದೆ. ಅದನ್ನು ಇನ್ನು 10 ದಿನದಲ್ಲಿ ಕ್ಲಿಯರ್‌ ಮಾಡುತ್ತೇನೆ. ಪಾಂಡವಪುರ ಸಕ್ಕರೆ ಕಾರ್ಖಾನೆ ಪುನಾರಂಭಕ್ಕೆ ರಾಜವಂಶಸ್ಥರನ್ನು  ಆಹ್ವಾನಿಸಲು ಮೈಸೂರಿಗೆ ಬಂದಿದ್ದೇನೆ ಎಂದರು.

ಅಚ್ಚರಿಯ ಅಭ್ಯರ್ಥಿಗಳಲ್ಲ: ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ಅಚ್ಚರಿ ಅಭ್ಯರ್ಥಿಗಳಲ್ಲ. ಅವರ ಹೆಸರು ರಾಜ್ಯ ಬಿಜೆಪಿ ಕಳುಹಿಸಿದ ಪಟ್ಟಿಯಲ್ಲಿತ್ತು. ಈರಣ್ಣ ಕಡಾಡಿ, ಅಶೋಕ್‌ ಗಸ್ತಿ ಬಿಜೆಪಿಯ ಕಟ್ಟಾಳುಗಳು. ಎಲೆ ಮರೆ ಕಾಯಿಯಂತಿದ್ದು ಪಕ್ಷ ಕಟ್ಟಿದ್ದಾರೆ. ಮಾಧ್ಯಮಗಳಲ್ಲಿ ಕೆಲವರ ಹೆಸರು ಮಾತ್ರ ಬರುತ್ತಿತ್ತು. ಆದರೆ ಹೈಕಮಾಂಡ್‌ ಗೆ ಕಳುಹಿಸಿದ ಪಟ್ಟಿಯಲ್ಲಿ ಈ ಇಬ್ಬರ ಹೆಸರಿತ್ತು. ಇದರಲ್ಲಿ ಅಚ್ಚರಿ ಏನೂ ಇಲ್ಲ. ಇದರಿಂದ  ಯಾರಿಗೂ ಅಸಮಾಧಾನ ಇಲ್ಲ. ನಾನು ಮಂತ್ರಿ ಆಕಾಂಕ್ಷಿಯಾಗಿದ್ದೆ. ಆದರೇ ಸಿಗಲಿಲ್ಲ ಎಂದು ಅಸಮಾಧಾನ ತೋರಲಿಲ್ಲ. ನಮ್ಮ ಪಕ್ಷದಲ್ಲಿ ದುಡಿದವರಿಗೆ ಸ್ಥಾನಮಾನ ಸಿಕ್ಕೇ ಸಿಗುತ್ತದೆ ಎಂದು ಶಾಸಕ ಮುರುಗೇಶ್‌ ನಿರಾಣಿ ಹೇಳಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.