ಬಿಎಸ್‌ವೈ ಕೊಟ್ಟ ಮಾತು ಉಳಿಸಿಕೊಳ್ಳಲಿ


Team Udayavani, Jun 29, 2020, 6:31 AM IST

bsy-maatu

ಮೈಸೂರು: ಮುಖ್ಯಮಂತ್ರಿ ಯಡಿಯೂರಪ್ಪ ಮಾತಿನ ಮೇಲೆ ನಿಂತ ನಾಯಕರಾಗಿದ್ದು, ಅವರು ತಮ್ಮ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ನಂಬಿಕೆ ಇದೆ ಎಂದು ಮಾಜಿ ಸಚಿವ ಎಚ್‌.ವಿಶ್ವನಾಥ್‌ ಹೇಳಿದರು. ನಗರದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿ, ರಾಜಕಾರಣದಲ್ಲಿ ಕೊಟ್ಟ ಮಾತು ಉಳಿಸಿ ಕೊಂಡ ನಾಯಕ ಇದ್ದರೆ ಅದು ಬಿಎಸ್‌ ವೈ ಮಾತ್ರ. ಈ ಮಾತಿಗೆ ನೀವು ಅಪವಾದ ಆಗಬೇಡಿ. ನನಗೆ ಸಚಿವ ಸ್ಥಾನ ಕೊಡಬೇಕು ಎಂದು ಹೇಳುತ್ತಿಲ್ಲ. ಅದು  ನಿಮಗೆ ಬಿಟ್ಟ ವಿಚಾರ. ಆದರೆ ನನ್ನ ಅನುಭವ ಬಳಸಿಕೊಳ್ಳಿ ಎಂದು ಕೇಳುತ್ತಿದ್ದೇನೆ ಎಂದು ತಿಳಿಸಿದರು.

ಮಾತು ತಪ್ಪಬೇಡಿ: ದೇಶದ ರಾಜಕಾರಣ ನಡೆಯುತ್ತಿರುವುದು ಭಾವನೆ ಮತ್ತು ನಂಬಿಕೆ ಮೇಲೆ. ಆ ಎರಡೂ ಮುಗಿದು ಹೋದರೆ ರಾಜಕಾರಣ ಇರೋದೇ ಇಲ್ಲ. ಜನನಾಯಕರು ಈ ಭಾವನೆ ಮತ್ತು ನಂಬಿಕೆ ಉಳಿಸಿಕೊಳ್ಳಬೇಕಿದೆ.  ಯಡಿಯೂರಪ್ಪನವರೇ ತಾವು ಮಾತು ತಪ್ಪದ ಮಗನಾಗಿ. ಮಾತು ತಪ್ಪಿದ ಮಗನಾಗಬಾರದು ಎಂಬುದು ಜನರ ಅಭಿಪ್ರಾಯ ಎಂದು ಹೇಳಿದರು.

ನನ್ನ ಆಶಯ: ನನಗೆ ಈಗಾಗಲೇ ಸಾಕಷ್ಟು ಅನುಭವ ಆಗಿದೆ. ಜನರು ನೆನಪಿಟ್ಟುಕೊಳ್ಳುವಂತಹ ಕೆಲಸಗಳನ್ನು ಮಾಡಿದ್ದೇನೆ. ಅಷ್ಟು ಸಾಕು. ನನಗೆ ಎಂಎಲ್ಸಿ ಸ್ಥಾನ ಸಿಕ್ಕಾಕ್ಷಣ ನನ್ನ ಕೀರ್ತಿ ಯೇನು ಅಟ್ಟಕ್ಕೇರುವುದಿಲ್ಲ. ಸ್ಥಾನ ಸಿಗದಾಕ್ಷಣ  ನನಗೇನೂ ಬೇಸರವಾಗುವುದಿಲ್ಲ. ಆದರೆ ಅವರು ಕೊಟ್ಟ ಮಾತನ್ನು ಉಳಿಸಿ  ಕೊಳ್ಳಲಿ, ಮಾತು ತಪ್ಪದ ಮಗನಾಗದಿರಲಿ ಎಂಬುದು ನನ್ನ ಆಶಯ ಎಂದು ಹೇಳಿದರು.

7 ಪುಸ್ತಕ ಬರೆದಿದ್ದೇನೆ: ನಾನು ಸಾಹಿತಿಯೂ ಹೌದು, ರಾಜಕಾರಣಿಯೂ ಹೌದು. 7 ಪುಸ್ತಕಗಳನ್ನು ಬರೆದಿದ್ದೇನೆ. ಚುನಾವಣೆ ವಿಡಂಬನೆ, ತುರ್ತು ಪರಿಸ್ಥಿತಿ ಬಗ್ಗೆಯೂ ಬರೆದಿದ್ದೇನೆ. ಚಾಣಕ್ಯನ ಕಾಲದಲ್ಲಿ ಹೇಗೆಲ್ಲ ಚುನಾವಣೆ ನಡೆ  ಯುತ್ತಿತ್ತು ಎಂಬುದನ್ನು ಉಲ್ಲೇಖೀಸಿದ್ದೇನೆ ಎಂದು ಹೇಳಿದರು. ನಾನು ಮತ್ತೂಂದು ರಾಜಕೀಯ ಪುಸ್ತಕ ಬರೆಯಲು ಮುಂದಾಗಿ ದ್ದೇನೆ. ಆ ಪುಸ್ತಕಕ್ಕೆ “ದಿ ಬಾಂಬೆ ಡೇಸ್‌’ ಎಂದು ಹೆಸರು ಕೊಟ್ಟಿದ್ದೇನೆ. ಈ ಪುಸ್ತಕ ಮೂರು  ಭಾಷೆಯಲ್ಲಿರಲಿದ್ದು, ದೆಹಲಿಯಲ್ಲಿ ಬಿಡುಗಡೆ ಮಾಡುತ್ತೆನೆ. ಬಾಂಬೆಯಲ್ಲಿ ಏನಾಯಿತು, ಅದೆಲ್ಲವನ್ನು ಬರೆಯುತ್ತಿದ್ದೇನೆ. ಒಂದು ಸರ್ಕಾರ ಹೋಗಿ ಮತ್ತೂಂದು ಸರ್ಕಾರ ಬರಲೇಬೇಕಿದೆ. ಜನ ತಂತ್ರ ವ್ಯವಸ್ಥೆ ಯಲ್ಲಿ ಭಾವನೆ,  ನಂಬಿಕೆ ಮೇಲಿನ ತಲ್ಲಣ ವೇನು. ಇದೆಲ್ಲ ವನ್ನು ಅಕ್ಷರದ ಮೂಲಕ ಜನರಿಗೆ ತಿಳಿಸು ತ್ತೇನೆ ಎಂದು ಹೇಳಿದರು.

ಕುಮಾರಸ್ವಾಮಿ ವಿರುದ್ಧ ವ್ಯಂಗ್ಯ: ನಾನು ಯಾವ ಪಕ್ಷದಲ್ಲೇ ಇದ್ದರು ಆ ಪಕ್ಷವನ್ನ ಪ್ರೀತಿ ಮಾಡುತ್ತೇನೆ. ಪಕ್ಷದ ನಾಯಕತ್ವದ ನಡವಳಿಕೆ ವಿರುದ್ಧವೂ ದಂಗೆ ಎದ್ದಿದ್ದೇನೆ. ಬಂಗಾರಪ್ಪ, ವೀರಪ್ಪ ಮೊಯ್ಲಿ ಹಾಗೂ ನಾವೇ ಕರೆತಂದ  ಸಿದ್ದರಾಮಯ್ಯನ ವಿರುದ್ಧವೂ ದಂಗೆ ಎದ್ದಿದ್ದೆ. ಸಮ್ಮಿಶ್ರ ಸರ್ಕಾರದ ಕುಮಾರಸ್ವಾಮಿ ವಿರುದ್ಧ ದಂಗೆ ಎದ್ದವನು ನಾನು. ಈ ಎಲ್ಲ ಸಂಗತಿಗಳಿಗೆ ಪುಸ್ತಕ ರೂಪ ನೀಡಲು ಅಣಿಯಾಗುತ್ತಿದ್ದೇನೆ ಎಂದು ವಿಶ್ವನಾಥ್‌ ಹೇಳಿದರು. 2006ರಲ್ಲಿ  ಕುಮಾರಸ್ವಾಮಿ ಅವರು ಧರ್ಮ ಸಿಂಗ್‌ ಸರ್ಕಾರ ಬೀಳಿಸಿದ್ದು ಕ್ಷಿಪ್ರ ಕ್ರಾಂತಿಯಂತೆ. ಆದರೆ, ಈಗ ನಾವು ಮಾಡಿದ್ದು ಪಕ್ಷಕ್ಕೆ ದ್ರೋಹ ಅಂತೆ ಎಂದು ಮಾಜಿ ಸಿಎಂ ಎಚ್‌ಡಿಕೆ ವಿರುದ್ಧ ಕಿಡಿಕಾರಿದರು.

ಸಾರಾ ಹೇಳಿಕೆಗೆ ತಿರುಗೇಟು: ವಿಶ್ವನಾಥ್‌ ಅಧ್ಯಾಯ ಮುಗಿಯಿತು ಎಂಬ ಸಾ.ರಾ.ಮಹೇಶ್‌ ಹೇಳಿಕೆಗೆ ತಿರುಗೇಟು ನೀಡಿದ ಅವರು, ನಾನು ಯಾರಿಗೂ ಉತ್ತರ ಕೊಡಬೇಕಿಲ್ಲ. ಅವರ್ಯಾರೂ ನನ್ನ ಮಟ್ಟ ಅಲ್ಲ. ಅವರು ಗ್ರಾಮ ಪಂಚಾಯತಿ  ಮಟ್ಟದವರು. ಅದಕ್ಕೆ ನಾನು ಉತ್ತರ ಕೊಡಬೇಕಿಲ್ಲ ಎಂದು ತಿರುಗೇಟು ನೀಡಿದರು.

ಟಾಪ್ ನ್ಯೂಸ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.