ಗ್ರಾಪಂ ನೌಕರರ ಬೇಡಿಕೆ ಈಡೇರಿಸಿ
Team Udayavani, Jun 3, 2020, 5:25 AM IST
ಮೈಸೂರು: ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಸಲು ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘ (ಸಿಐಟಿಯುಸಿ)ದಿಂದ ಜಿಲ್ಲಾ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಸಂಘಟನೆ ಅಧ್ಯಕ್ಷ ಬಸವರಾಜು, ರಾಜ್ಯದ 6025 ಗ್ರಾಪಂಗಳಲ್ಲಿ ಕೆಲಸ ನಿರ್ವಹಿಸುತ್ತಿರುವ 6,500 ಸಿಬ್ಬಂದಿಗೆ 900 ಕೋಟಿ ರೂ.ಹಣ ಬೇಕಾಗಿದೆ ಎಂದು ಅಂದಾಜಿಸಲಾಗಿದೆ.
900 ಕೋಟಿ ರೂ. ಹಣದಲ್ಲಿ 518 ಕೋಟಿ ಮಾತ್ರ ಹಣಕಾಸು ಇಲಾಖೆ ಮಂಜೂರು ಮಾಡಿದೆ. ಕಳೆದ 2 ವರ್ಷಗಳಿಂದ ಸಿಬ್ಬಂದಿ ವೇತನ ಬಾಕಿ ಉಳಿದಿದ್ದು, 3 ತಿಂಗಳಿಗೊಮ್ಮೆ ಬಿಡುಗಡೆಯಾದ ಕಂತಿನ ಹಣದಲ್ಲಿ 2 ತಿಂಗಳು ವೇತನಕ್ಕಾಗಿ ಮಾತ್ರ ಹಣ ಸಾಕಾಗುತ್ತದೆ. 2 ವರ್ಷಗಳಿಂದ 8 ತಿಂಗಳು ಹಣ ಬಾಕಿಯಿದೆ. ವೇತನಕ್ಕಾಗಿ 2020-21ನೇ ಸಾಲಿನ ಹಣ ಮಂಜೂರು ಮಾಡಿಸಬೇಕು ಎಂದು ಆಗ್ರಹಿಸಿದರು.
ಎಲ್ಲಾ ಸಿಬ್ಬಂದಿಗೆ ಪಿಂಚಣಿ, ವೈದ್ಯಕೀಯ ವೆಚ್ಚ ಸಿಗುವಂತಾಗಬೇಕು. ಕನಿಷ್ಠ ವೇತನ ಪಡೆಯುವ ಎಲ್ಲರಿಗೂ ಬಿಪಿಎಲ್ ಕಾರ್ಡ್ ಉಳಿಸಿಕೊಳ್ಳಲು ಮಂಜೂರಾತಿ ಮಿತಿ 1.20 ಲಕ್ಷದಿಂದ 2 ಲಕ್ಷಕ್ಕೆ ಹೆಚ್ಚಿಸಬೇಕು. ಅದಕ್ಕಾಗಿ ಆಹಾರ ಇಲಾಖೆಗೆ ಪತ್ರ ಬರೆಯಬೇಕು. ಈಗ ಸದ್ಯಕ್ಕೆ ಸೇವಾ ನಿಯಮಾವಳಿ ಗೆಜೆಟ್ ಪ್ರಕಟಣೆಯಾಗಿದ್ದು ತಿದ್ದುಪಡಿ ಪರಿಶೀಲಿಸಿ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಸಂಘಟನೆಯ ಪ್ರಧಾನ ಕಾರ್ಯದರ್ಶಿ ದಿನೇಶ್, ಖಜಾಂಚಿ ಲೋಕೇಶ್ ಕಿರಿಜಾಜಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ