ಮೃಗಾಲಯಕ್ಕೆ ಸಚಿವರ ದೇಣಿಗೆ
ಇನ್ಫೋಸಿಸ್ ಫೌಂಡೇಶನ್ ಟ್ರಸ್ಟ್ನಿಂದ ನೆರವು
Team Udayavani, May 9, 2020, 2:48 PM IST
ಸಾಂದರ್ಭಿಕ ಚಿತ್ರ
ಮೈಸೂರು: ಮೃಗಾಲಯಕ್ಕೆ ದೇಣಿಗೆ ನೀಡುವಂತೆ ಇನ್ಫೋಸಿಸ್ ಫೌಂಡೇಶನ್ ಟ್ರಸ್ಟ್ನ ಡಾ. ಸುಧಾಮೂರ್ತಿ ಅವರಿಗೆ ಪತ್ರ ಬರೆದಿದ್ದೆ. ಅದಕ್ಕೆ ಪ್ರತಿಯಾಗಿ ಪತ್ರ ಬರೆದು 20 ಲಕ್ಷ ರೂ. ಕೊಡುವುದಾಗಿ ಹೇಳಿದ್ದಾರೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. ಸುದ್ಧಿಗಾರರೊಂದಿಗೆ ಮಾತನಾಡಿ, ಅನಿವಾಸಿ ಭಾರತೀಯರು ಹಾಗೂ ಅಕ್ಕಸಂಸ್ಥೆಗೂ ಕೇಳಿಕೊಂಡಿದ್ದು, ಅವರಿಂದಲೂ ದೇಣಿಗೆ ಸಿಗುವ ನಿರೀಕ್ಷೆ ಇದೆ. ಸಂಪುಟ ಸಹದ್ಯೋಗಿಗಳು, ಶಾಸಕರಿಗೆ ಮನವಿ ಮಾಡಿದ್ದೇನೆ. ಮೃಗಾಲಯ ಸಂಕಷ್ಟದಲ್ಲಿರುವ ಕಾರಣ ನೆರವಿಗೆ ನಿಲ್ಲುವಂತೆ ಮಾಡಿದ ಮನವಿಗೆ ಅನೇಕರು ದೇಣಿಗೆ ನೀಡಲು ಮುಂದಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಚರ್ಚಿಸಿ ತೀರ್ಮಾನ: ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಮಾತನಾಡಿ, ಮೈಸೂರು ನಗರ ಪಾಲಿಕೆಯಲ್ಲಿ ಹಲವು ವರ್ಷದಿಂದ ಬಾಕಿ ಇರುವ ಕುಡಿಯುವ ನೀರಿನ ಬಡ್ಡಿ ಮನ್ನಾ ಮಾಡುವಂತೆ ನಗರಪಾಲಿಕೆ ಸದಸ್ಯರು ಮನವಿ ಮಾಡಿದ್ದು, ಈ ಬಗ್ಗೆ ಬೆಂಗಳೂರಿನಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳ ಲಾಗುವುದು. ಕುಡಿಯುವ ನೀರಿನ ಬಿಲ್ ಪಾವತಿಸಲು ಮೂರು ತಿಂಗಳ ಸಮಯಾವಕಾಶ ನೀಡಲಾಗಿದ್ದು, ಗ್ರಾಹಕರ ಮೇಲೆ ಒತ್ತಡ ಹೇರದಂತೆ ಸೂಚಿಸಲಾಗಿದೆ ಎಂದು ಹೇಳಿದರು.
ನೀರಿನ ಬಿಲ್ ಮನ್ನಾ ಮಾಡುವ ಚಿಂತನೆ ಸರ್ಕಾರದ ಮುಂದಿಲ್ಲ. ಆದರೆ, ಬಡ್ಡಿ ಮನ್ನಾ ಬಗ್ಗೆ ಸದಸ್ಯರು ಪ್ರಸ್ತಾಪ ಮಾಡಿದ್ದರಿಂದ ಚರ್ಚೆ ನಡೆಸಬೇಕಾಗಿದೆ. ಬಡ್ಡಿ ಮನ್ನಾ ಕುರಿತು ಹಿರಿಯ ಅಧಿಕಾರಿಗಳ ಸಭೆ ಕರೆದು ಸಾಧಕ- ಬಾಧಕ ಬಗ್ಗೆ ಚರ್ಚಿಸಿದ ಬಳಿಕ ನಿರ್ಧರಿಸಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾಳೆಯಿಂದ ಸಿಎಫ್ ಟಿಆರ್ಐನಲ್ಲಿ ಟೆಕ್ ಭಾರತ್
ನಾವು ಮುಳುಗುತ್ತಿದ್ದೇವೆಂದು ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ
ಚುನಾವಣೆಯಲ್ಲಿ 123 ಸ್ಥಾನ ಗೆಲ್ಲುವ ಗುರಿ : ಯಾರಿಗೂ ಬೆಂಬಲ ಕೊಡುವ ಪ್ರಶ್ನೆಯೇ ಇಲ್ಲ : HDK
ಹುಣಸೂರು: ತಟ್ಟೆಕೆರೆ ಗ್ರಾ.ಪಂ.ಅಧ್ಯಕ್ಷರಾಗಿ ಎ.ಎಂ.ದೇವರಾಜ್ ಅವಿರೋಧ ಆಯ್ಕೆ
ಮೊಮ್ಮಗಳ ಅಗಲಿಕೆ : ಮಾಜಿ ಸಚಿವ ಜಿ.ಟಿ.ದೇವೇಗೌಡರ ನಿವಾಸಕ್ಕೆ ಎಚ್ ಡಿಕೆ ಭೇಟಿ
MUST WATCH
ಹೊಸ ಸೇರ್ಪಡೆ
ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟ
ಪ್ರತಿಷ್ಠೆಗೆ ರಚನೆಯಾದ ತಾಲೂಕುಗಳು ಅನಾಥ; ತಹಶೀಲ್ದಾರ್ ನೇಮಕವಾಗಿಲ್ಲ ,ಆಡಳಿತ ಸೌಧವಿಲ್ಲ
ಚಳ್ಳಕೆರೆಯಲ್ಲಿ ಹನ್ಸ-ಎನ್ಜಿ ಯಶಸ್ವಿ ಪ್ರಯೋಗ; ಸಿಎಸ್ಐಆರ್, ಎನ್ಎಎಲ್ನಿಂದ ವಿಮಾನ ಸಿದ್ಧ
ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ
ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ