ಮೈಸೂರು ದಸರಾಗೆ ದಿನಗಣನೆ: ಸಂಚಾರ ನಿಯಮ ಬದಲಾವಣೆ
ಸಂಚಾರ ದಟ್ಟಣೆ ತಪ್ಪಿಸಲು ಏಕಮುಖ ಸಂಚಾರ ವ್ಯವಸ್ಥೆ ರಸ್ತೆ ಬದಿ ವಾಹನ ನಿಲುಗಡೆಗೆ ಪೊಲೀಸರಿಂದ ನಿರ್ಬಂಧ
Team Udayavani, Oct 4, 2021, 2:01 PM IST
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಆರಂಭಕ್ಕೆ ದಿನಗಣನೆ ಶುರುವಾಗಿದ್ದು, ದಸರಾ ವೇಳೆ ನಗರದಲ್ಲಿ ಸಂಚಾರ ಸುವ್ಯವಸ್ಥೆಗಾಗಿ ಸಂಚಾರ ನಿಯಮಗಳಲ್ಲಿ ಬದಲಾವಣೆ ಮಾಡಿ ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.
ನಿಷೇಧ: ಈ ಬಾರಿಯ ನಾಡಹಬ್ಬ ಮೈಸೂರು ದಸರಾದಲ್ಲಿ ದೀಪಾಲಂಕರವೇ ಪ್ರಮುಖ ಆಕರ್ಷಣೆ ಆಗಿರುವುದರಿಂದ ಸಾರ್ವಜನಿಕರು ರಸ್ತೆ ಬದಿ ಹೆಚ್ಚಾಗಿ ಸೇರುವುದರಿಂದ ಉಂಟಾಗುವ ಸಂಚಾರ ದಟ್ಟಣೆ ತಪ್ಪಿಸಲು ಏಕಮುಖ ಸಂಚಾರ ವ್ಯವಸ್ಥೆ ಜತೆಗೆ ರಸ್ತೆ ಬದಿಯಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.
ಇದನ್ನೂ ಓದಿ:- ನಟಿ Aisha sharma ಹಾಟ್ ಫೋಟೋಸ್
ನಿಯಮ ಬದಲಾವಣೆ: ನಗರ ಹೃದಯ ಭಾಗದ ಹಲವು ಪ್ರದೇಶಗಳಲ್ಲಿ ವಾಹನಗಳ ನಿಲುಗಡೆಗೆ ನಿಷೇಧ ಹೇರಲಾಗಿರುವ ಜತೆಗೆ ಅಂಬಾ ವಿಲಾಸ ಅರಮನೆ ಸುತ್ತ ಯಾವುದೇ ವಾಹನಗಳ ನಿಲುಗಡೆಗೆ ಅವಕಾಶವಿಲ್ಲ.
ಸಯ್ನಾಜಿರಾವ್ ರಸ್ತೆ, ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ, ಪುರಂದರ ರಸ್ತೆ ಬಿ.ರಾಚಯ್ಯ ವೃತ್ತ-ಬಿ.ಎನ್.ರಸ್ತೆ ಜಂಕ್ಷನ್, ಶಿವರಾತ್ರಿ ರಾಜೇಂದ್ರ ವೃತ್ತ-ಜಯ ಚಾಮರಾಜೇಂದ್ರ ವೃತ್ತ, ಆಲ್ಬರ್ಟ್ ವಿಕ್ಟರ್ ರಸ್ತೆಯ ಜಯಚಾಮರಾಜೇಂದ್ರ ವೃತ್ತ-ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತ, ಅಶೋಕ ರಸ್ತೆಯ ನೆಹರು ವೃತ್ತ- ಮಹಾವೀರ ವೃತ್ತ, ಅಶೋಕ ರಸ್ತೆಯ ಮಹಾವೀರ ವೃತ್ತ- ಜಯಚಾಮರಾಜ ವೃತ್ತ, ಬಲರಾಮ ದ್ವಾರದ ಮುಂಭಾಗ, ಡಾ. ರಾಜ್ಕುಮಾರ್ ವೃತ್ತ-ಬಿ.ಎನ್.ನರಸಿಂಹಮೂರ್ತಿ ವೃತ್ತ, ವಸ್ತು ಪ್ರರ್ದಶನದ ಮುಂಭಾಗದ ಟ್ಯಾಂಕ್ ಬಂಡ್ ರಸ್ತೆಯ ಬಿಎನ್ ರಸ್ತೆ ಜಂಕ್ಷ-ಮೃಗಾಲಯದ ರಸ್ತೆ, ಇಟ್ಟಿಗೆಗೂಡಿನ ಹೊಸ ಬೀದಿ 5ನೇ ತಿರುವು ರಸ್ತೆ ಮೃಗಾಲಯದ ವೃತ್ತ-ವಸ್ತು ಪ್ರರ್ದಶನದ ಪೂರ್ವ ದ್ವಾರ, ಮಾನಸರ ರಸ್ತೆ ವಾಣಿವಿಲಾಸ ರಸ್ತೆ ಜಂಕ್ಷನ್ -ಲೋಕರಂಜನ್ ರಸ್ತೆ, ಮಲೆ ಮಹದೇಶ್ವರ ರಸ್ತೆಯ ಬಿ.ಎನ್.ರಸ್ತೆ ಜಂಕ್ಷನ್-(ಛತ್ರಿಮರ) ಚನ್ನಯ್ಯ ವೃತ್ತ, ಸರ್ಕಾರಿ ಭವನದ ರಸ್ತೆಯ ಸರ್ಕಾರಿ ಭವನದ ದ್ವಾರದ ರಾಜೇಂದ್ರ ಒಡೆಯರ್ ವೃತ್ತದವರೆಗೆ, ಸಂಪೂರ್ಣ ವಾಹನ ನಿಲುಗಡೆ ನಿಷೇಧಿಸಿ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ. ಅ.7 ರಿಂದ 15 ರವರೆಗೆ ಪ್ರತಿದಿನ ಸಾಯಂಕಾಲ 4 ರಿಂದ ರಾತ್ರಿ 12 ಗಂಟೆವರೆಗೆ ಈ ನಿಯಮ ಜಾರಿಯಲ್ಲಿರಲಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
MUST WATCH
ಹೊಸ ಸೇರ್ಪಡೆ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು