ಸಾಧನೆಯ ಸಂಭ್ರಮ: ಮೈಸೂರಿನ ಸ್ವಚ್ಛತೆಗೆ ಪಂಚತಾರಾ ಪಟ್ಟ

ಆರು ನಗರಗಳಿಗೆ ಫೈವ್‌ಸ್ಟಾರ್‌ ಹೆಗ್ಗಳಿಕೆ; ದಕ್ಷಿಣ ಭಾರತದಲ್ಲಿ ಏಕೈಕ ನಗರ

Team Udayavani, May 20, 2020, 6:32 AM IST

ಸಾಧನೆಯ ಸಂಭ್ರಮ: ಮೈಸೂರಿನ ಸ್ವಚ್ಛತೆಗೆ ಪಂಚತಾರಾ ಪಟ್ಟ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಕರ್ನಾಟಕದ ಮೈಸೂರು ಸಹಿತ ದೇಶದ ಆರು ನಗರಗಳು ಕಸ ನಿರ್ವಹಣೆಯಲ್ಲಿ ಅತ್ಯುತ್ತಮ ಸಾಧನೆ ತೋರಿವೆ ಎಂದು ಕೇಂದ್ರ ಸರಕಾರ ಘೋಷಿಸಿದ್ದು, ಈ ಸಾಧನೆಗಾಗಿ ಪಂಚತಾರಾ ಮಾನ್ಯತೆಯನ್ನು (ಫೈವ್‌ ಸ್ಟಾರ್‌ ಗಾರ್ಬೇಜ್‌ ಫ್ರೀ ಸಿಟಿ) ನೀಡಿದೆ. ದಕ್ಷಿಣ ಭಾರತದಲ್ಲಿ ಮೈಸೂರಿಗೆ ಮಾತ್ರ ಈ ಪಟ್ಟ ಲಭಿಸಿದೆ.

ಸ್ವಚ್ಛ ಭಾರತ ಸರ್ವೇಕ್ಷಣ ಅಭಿಯಾನದ ಅಂಗವಾಗಿ ಆಯೋಜಿಸಲಾಗಿದ್ದ ಈ ಸ್ಪರ್ಧೆಯಲ್ಲಿ ಒಟ್ಟು 1,435 ನಗರಗಳು ಸ್ಪರ್ಧಿಸಿದ್ದವು.

ಒಟ್ಟು 1.9 ಕೋಟಿ ನಾಗರಿಕರಿಂದ ಪಡೆದ ಫೀಡ್‌ಬ್ಯಾಕ್‌ ಮತ್ತು 10 ಲಕ್ಷಕ್ಕೂ ಹೆಚ್ಚು ಜಿಯೋ – ಟ್ಯಾಗ್ಡ್ ಚಿತ್ರಗಳು ಹಾಗೂ ಒಟ್ಟು 5,175 ತ್ಯಾಜ್ಯ ವಿಲೇವಾರಿ ಘಟಕಗಳ ಕಾರ್ಯಕ್ಷಮತೆಯನ್ನು ಅವಲೋಕಿಸಿ ಈ ಪಟ್ಟಿ ತಯಾರಿಸಲಾಗಿದೆ ಎಂದು ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯ ತಿಳಿಸಿದೆ. ಸ್ವಚ್ಛತಾ ನಿಯಮ ಆಧರಿಸಿ 141 ನಗರಗಳಿಗೆ ವಿವಿಧ ರೀತಿಯ ಸ್ಟಾರ್‌ ಪಟ್ಟ ನೀಡಲಾಗಿದೆ.

ಮಂಗಳೂರಿಗಿಲ್ಲ
ತ್ಯಾಜ್ಯಮುಕ್ತ ನಗರಗಳ ಪಟ್ಟಿಯಲ್ಲಿ ಮಂಗಳೂರು ಈ ಬಾರಿಯೂ ಅಗ್ರಸ್ಥಾನವನ್ನು ಕಳೆದುಕೊಂಡಿದೆ. 2018ರಲ್ಲಿ ಮಂಗಳೂರು ಘನತ್ಯಾಜ್ಯ ವಿಲೇವಾರಿ ವಿಚಾರದಲ್ಲಿ ದೇಶಕ್ಕೆ ಪ್ರಥಮ ಸ್ಥಾನ ಪಡೆದಿತ್ತು. ಕಳೆದ ವರ್ಷದ ಪಚ್ಚನಾಡಿ ತ್ಯಾಜ್ಯರಾಶಿ ಕುಸಿದ ಘಟನೆ ಅಗ್ರಸ್ಥಾನ ಕೈತಪ್ಪಲು ಕಾರಣ ಎನ್ನಲಾಗಿದೆ.

ಯಾವ ನಗರಕ್ಕೆ ಯಾವ ಪಟ್ಟ?
ಮೈಸೂರಿನ ಜತೆಗೆ ಫೈವ್‌ ಸ್ಟಾರ್‌ ಪಟ್ಟ ಪಡೆದ ಇತರ ನಗರಗಳೆಂದರೆ ಛತ್ತೀಸ್‌ಗಢದ ಅಂಬಿಕಾಪುರ, ಮಧ್ಯಪ್ರದೇಶದ ಇಂದೋರ್‌, ಗುಜರಾತ್‌ನ ರಾಜ್‌ಕೋಟ್‌ ಮತ್ತು ಸೂರತ್‌, ಮಹಾರಾಷ್ಟ್ರದ ನವ ಮುಂಬಯಿ.

ತ್ರೀ ಸ್ಟಾರ್‌ ಪಟ್ಟ ಪಡೆದ ನಗರಗಳಲ್ಲಿ ಹೊಸದಿಲ್ಲಿ, ಹರಿಯಾಣದ ಕರ್ನಾಲ್‌, ಆಂಧ್ರಪ್ರದೇಶದ ತಿರುಪತಿ ಮತ್ತು ವಿಜಯವಾಡ, ಚಂಡೀಗಢ ನಗರ, ಛತ್ತೀಸ್‌ಗಢದ ಭಿಲಾಯ್‌ ನಗರ, ಗುಜರಾತ್‌ನ ಅಹ್ಮದಾಬಾದ್‌, ಮಧ್ಯಪ್ರದೇಶದ ಭೋಪಾಲ, ಝಾರ್ಖಂಡ್‌ನ‌ ಜಮ್ಶೆಡ್‌ಪುರ ಪ್ರಮುಖ.

ದಿಲ್ಲಿ ಕಂಟೋನ್ಮೆಂಟ್‌, ಹರಿಯಾಣದ ರೋಹ್ಟಕ್‌, ಮಧ್ಯಪ್ರದೇಶದ ಗ್ವಾಲಿಯರ್‌, ಮಹೇಶ್ವರ್‌, ಖಾಂದ್ವಾ, ಬದ್ನಾವರ್‌ ಮತ್ತು ಹಾತೋಡ್‌, ಗುಜರಾತ್‌ನ ಭಾವನಗರ್‌ ಮತ್ತು ವ್ಯಾರಾ ಸಿಂಗಲ್‌ ಸ್ಟಾರ್‌ ಪಡೆದ ನಗರಗಳಲ್ಲಿ ಪ್ರಮುಖವಾದವು.

ಟಾಪ್ ನ್ಯೂಸ್

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.