ಆನ್‌ಲೈನ್‌ ಕೋರ್ಸ್‌ ಪುನಾರಂಭ


Team Udayavani, Jun 19, 2020, 4:58 AM IST

puna arambha

ಮೈಸೂರು: ಮೈಸೂರು ವಿಶ್ವವಿದ್ಯಾಲಯ ಆನ್‌ಲೈನ್‌ ಕೋರ್ಸ್‌ ಪುನಾರಂಭ ಮಾಡಲು ವಿವಿ ಶಿಕ್ಷಣ ಮಂಡಳಿಯ ಸಾಮಾನ್ಯ ಸಭೆಯಲ್ಲಿ ಅನುಮೋದನೆ ಪಡೆದುಕೊಳ್ಳಲಾಯಿತು. ಮೈಸೂರು ವಿವಿ ಮಾನಸಗಂಗೋತ್ರಿ ಆವರಣದಲ್ಲಿ  ನಡೆದ ವಿಶ್ವವಿದ್ಯಾಲಯ ಶಿಕ್ಷಣ ಮಂಡಳಿ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಕುಲಪತಿ ಪ್ರೊ. ಜಿ.ಹೇಮಂತ ಕುಮಾರ್‌, ಯುಜಿಸಿ ನಿರ್ದೇಶನದ ಮೇರೆಗೆ ಈ ಹಿಂದೆ ಆನ್‌ಲೈನ್‌ ಕೋರ್ಸ್‌ ಸ್ಥಗಿತಗೊಳಿಸಲಾಗಿತ್ತು. ಇದನ್ನು ಮತ್ತೆ ಪುನಾರಂಭಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಕ್ಕೆ ಅನುಮೋದನೆ ಸಿಗುವ ಅವಕಾಶವಿದೆ ಎಂದರು.

ಅನುಮೋದನೆ ಅಗತ್ಯವಿಲ್ಲ: ಎನ್‌ಐಆರ್‌ಎಆರ್‌ ರ್‍ಯಾಂಕಿಂಗ್‌ನಲ್ಲಿ 100ರ ಒಳಗೆ ಸ್ಥಾನ ಪಡೆದ ವಿವಿಗಳಿಗೆ ಆನ್‌ಲೈನ್‌ ಕೋರ್ಸ್‌ ಆರಂಭಿಸಲು ಅನುಮೋದನೆ ಅಗತ್ಯವಿಲ್ಲ ಎಂದು ವಿಶ್ವವಿದ್ಯಾಲ ಯಗಳ ಧನ ಸಹಾಯ ಆಯೋಗ  ಹೇಳಿದೆ. ಇದರಲ್ಲಿ 27ನೇ ರ್‍ಯಾಂಕ್‌ ಪಡೆದಿರುವ ಮೈಸೂರು ವಿವಿಗೂ ಈ ಶೈಕ್ಷಣಿಕ ಚಟುವಟಿಕೆಗೆ ಅವಕಾಶ ದೊರೆತಿದೆ. ಇದರಿಂದ ಪ್ರಪಂಚದ ಎಲ್ಲ ಮೂಲೆಗಳಲ್ಲಿರುವ ವಿದ್ಯಾರ್ಥಿಗಳಿಗೆ ಪಾಠ ಮಾಡುವುದರೊಂದಿಗೆ ವಿವಿಗೆ ಆದಾಯ  ಬರಲಿದೆ ಎಂದು ಮಾಹಿತಿ ನೀಡಿದರು.

9 ಕಾಲೇಜುಗಳಿಗೆ ಸ್ವಾಯತ್ತತೆ: ವಿಶ್ವವಿದ್ಯಾಲಯ ವ್ಯಾಪ್ತಿಯ ಹತ್ತು ಕಾಲೇಜುಗಳಿಗೆ ಈ ಹಿಂದೆ ಇದ್ದ ಸ್ವಾಯತ್ತತೆ ಮುಂದುವರಿಸಲು ಹಾಗೂ ಹೊಸ ದಾಗಿ ಮದ್ದೂರು ಭಾರತೀನಗರದ (ಕೆ. ಎಂ.ದೊಡ್ಡಿ) ಭಾರತಿ ಕಾಲೇಜಿಗೂ ಸ್ವಾಯತ್ತತೆ  ಮುಂದುವರಿಸಲು ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಯಿತು.

ಚೀನಾ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿ: ಚೀನಾದಿಂದ ಈಗಾಗಲೇ ಕೆಲ ವಿದ್ಯಾರ್ಥಿಗಳು ಪ್ರವೇಶಾತಿಗಾಗಿ ಹಣ ಪಾವತಿಸಿದ್ದಾರೆ. ಸದ್ಯ ಭಾರತ ಮತ್ತು ಚೀನಾ ನಡುವೆ ವಿವಾದ ಇರುವುದರಿಂದ ಅವರಿಗೆ ವೀಸಾ ದೊರೆತಿಲ್ಲ. ಅವರಿಗೆ ವೀಸಾ ಸಿಗುವವರೆಗೂ ಆನ್‌ಲೈನ್‌ ನಲ್ಲಿಯೇ ತರಗತಿ ನಡೆಸಲು ನಿರ್ಧರಿಸಲಾಗಿದೆ. ಒಂದು ವೇಳೆ ವೀಸಾ ಸಿಗುವುದಿಲ್ಲ ಎಂದಾದರೆ ಅವರ ಪ್ರವೇಶ ರದ್ದು ಮಾಡಲಾಗುತ್ತದೆ ಎಂದರು.

ಎಂಸಿಎ ಕೋರ್ಸ್‌ ಕಡಿತ: ವಿವಿಯ ಎನ್ನೆಸ್ಸೆಸ್‌,  ಎನ್‌ಸಿಸಿ, ದೈಹಿಕ ಶಿಕ್ಷಣ ವಿಭಾಗ ಮತ್ತು ವಿದ್ಯಾರ್ಥಿ ಕ್ಷೇಮಪಾಲನಾ ವತಿಯಿಂದ ಅಂತರ ವಿಶ್ಚವಿದ್ಯಾ ನಿಲಯ ಕಾರ್ಯಕ್ರಮ, ಸಾಹಸ ಶಿಬಿರ, ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಕೆಲವು ಸಮಸ್ಯೆ ಇರುವ ಕಾರಣ ಪ್ರತ್ಯೇಕ ಪರೀಕ್ಷೆ ನಡೆಸುವುದು ಸೇರಿದಂತೆ ಯುಜಿಸಿ ನಿಯಮಾವಳಿ ಪ್ರಕಾರ ಎಂಸಿಎ ಕೋರ್ಸ್‌ನ್ನು 3 ವರ್ಷಗಳಿಂದ 2 ವರ್ಷಗಳಿಗೆ ಕಡಿತಗೊಳಿಸಲು ನಿರ್ಧರಿಸಲಾಯಿತು.

ತರಬೇತಿ ಸಂಸ್ಥೆಯೊಂದಿಗೆ ಒಪ್ಪಂದ: ಮೈಸೂರು ವಿವಿ ಹಾಗೂ ಆಡಳಿತ ತರಬೇತಿ ಸಂಸ್ಥೆ ಈ ಹಿಂದೆ ಮಾಡಿಕೊಂಡಿರುವ ಒಪ್ಪಂದದಂತೆ ಎಂಓಓಸಿಎಸ್‌ ಯೋಜನೆಯಡಿ ಆನ್‌ಲೈನ್‌ ವಿಷಯ ಅಭಿವೃದಿಪಡಿಸಲಾಗಿದ್ದು, ಆಡಳಿತ  ತರಬೇತಿ ಸಂಸ್ಥೆಗೆ ತರಬೇತಿಗೆ ಬರುವ ಐಎಎಸ್‌, ಕೆಎಎಸ್‌ ಪ್ರೊಬೆಷನರಿ ಅಧಿಕಾರಿಗಳಿಗೆ ಮೈಸೂರು ವಿವಿ ಕೆಲ ವಿಷಯಗಳನ್ನು ನುರಿತ ಪ್ರಾಧ್ಯಾಪಕರಿಂದ ವಿಶೇಷ ತರಗತಿ ತೆಗೆದುಕೊಳ್ಳಲು ಸಭೆ ಒಪ್ಪಿಗೆ ನೀಡಿತು. ಸಭೆಯಲ್ಲಿ ಮೈವಿವಿ  ಕುಲಸಚಿವ ಪ್ರೊ.ಆರ್‌. ಶಿವಪ್ಪ, ಸದಸ್ಯರಾದ ಪ್ರೊ.ಜಿ.ವೆಂಕಟೇಶ್‌, ಪ್ರೊ. ಎನ್‌.ಎಂ.ತಳವಾರ್‌, ಪ್ರೊ.ಆರ್‌. ರಾಜಣ್ಣ, ಪ್ರೊ. ಎಂ.ಎಸ್‌. ಶೇಖರ್‌, ಪ್ರೊ.ನಾಗರಾಜ ನಾಯ್ಕ, ಪ್ರೊ.ಡಿ.ವಿ.ಗೋಪಾಲಪ್ಪ, ಪ್ರೊ.ಯಶೋಧಾ ಇತರರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.