ರಾತ್ರೋರಾತ್ರಿ ಅಕ್ರಮ ಮಳಿಗೆ, ಕಂಪೌಂಡ್ ನಿರ್ಮಾಣ; ತೆರವಿಗೆ ಮುಂದಾದ ನಗರಸಭೆ ಅಧಿಕಾರಿಗಳು

ಸ್ಥಳದಲ್ಲಿ ಬಿಗುವಿನ ವಾತಾವರಣ

Team Udayavani, Dec 11, 2023, 11:38 AM IST

4-hunsur

ಹುಣಸೂರು: ನಗರದ ಕಲ್ಪತರು ವೃತ್ತದ ಬಳಿಯ ಖಾಲಿ ನಿವೇಶನದಲ್ಲಿ ರಾತ್ರೋರಾತ್ರಿ ಅಕ್ರಮ ಮಳಿಗೆ ಮತ್ತು ಕಂಪೌಂಡ್ ನಿರ್ಮಿಸಲಾಗಿದೆ.

ಈ ನಿವೇಶನ ಕೋಟ್ಯಾಂತರ ರೂ. ಬೆಲೆ ಬಾಳುವ ಜೊತೆಗೆ ಹೆದ್ದಾರಿ ತಿರುವಿನಲ್ಲಿರುವುದರಿಂದ ಸುಗಮ ಸಂಚಾರಕ್ಕೆ ಅಡಚಣೆಯಾಗುತ್ತಿದೆ ಎಂದು ಲೋಕೋಪಯೋಗಿ ಇಲಾಖೆ ಕೂಡಾ ಅಕ್ರಮವಾಗಿ ಬೇಲಿ ಹಾಕುತ್ತಿದ್ದಾರೆಂದು ನಗರಸಭೆಯವರಿಗೆ ತೆರವುಗೊಳಿಸಲು ಪತ್ರ ಬರೆದಿದ್ದರು.

ಈ ನಡುವೆ ಹುಣಸೂರಿನ ನ್ಯಾಯಾಲಯದಲ್ಲೂ ನಗರಸಭೆ ಹಾಗೂ ಮಾಲಿಕರೆಂದು ಹೇಳಿಕೊಳ್ಳುತ್ತಿರುವ ಹೆಬ್ಸೂರ್ ರೆಹಮಾನ್, ಷರೀಪ್ ಕಂಪೌಂಡ್ ನಿರ್ಮಿಸಲು ಮುಂದಾಗಿದ್ದರು. ಇಲ್ಲಿ ಆಟೋ ಚಾಲಕರು ಹಾಗೂ ಕೆಲ ಸಂಘಟನೆಗಳವರು ದೂರು ನೀಡಿದ್ದರ ಮೇರೆಗೆ ನಿರ್ಮಿಸದಂತೆ ಎಚ್ಚರಿಕೆ ನೀಡಿದ್ದರು. ಆದರೂ ಸಹ ಮತ್ತೆ ನಿರ್ಮಿಸಲು ಮುಂದಾಗಿದ್ದರಿಂದ ಈ ಸಂಬಂಧ ವಕೀಲರೊಬ್ಬರು ನ್ಯಾಯಾಲಯದಿಂದ ಖಾಯಂ ನಿರ್ಭಂದಕಾಜ್ಷೆ (ತಡೆಯಾಜ್ಞೆ) ತಂದು ಹಾಜರುಪಡಿಸಿದ್ದರಿಂದಾಗಿ ಕಂಪೌಂಡ್ ನ್ನು ಹಿಂದಿನ ಪೌರಾಯುಕ್ತೆ ಮಾನಸ ಹಾಗೂ ಅಧಿಕಾರಿಗಳ ತಂಡ ತೆರವುಗೊಳಿಸಿ ಎಚ್ಚರಿಕೆ ನೀಡಿದ್ದರು. ಆದರೆ ಶನಿವಾರ ಮದ್ಯರಾತ್ರಿ  ಮತ್ತೆ ಆಟೋ ನಿಲ್ದಾಣದ ಬಳಿ ಜಂಕ್‌ಶೀಟ್‌ನ ದೊಡ್ಡ  ಮಳಿಗೆ ಮತ್ತು ಸಿಮೆಂಟ್ ಕಂಪೌಂಡ್ ನಿರ್ಮಿಸಿದ್ದಾರೆ.

ವಿಷಯ ತಿಳಿದ ನಗರಸಭೆ ಪ್ರಭಾರ ಪೌರಾಯುಕ್ತೆ ಶರ್ಮಿಳಾ, ಆರ್.ಐ.ಆದ ಮಧುಸೂಧನ್  ಸಿಬ್ಬಂದಿಗಳೊಂದಿಗೆ ಸ್ಥಳಕ್ಕಾಗಮಿಸಿ ಅಕ್ರಮ ನಿರ್ಮಾಣ ತೆರವುಗೊಳಿಸಲು ಮುಂದಾಗುತ್ತಿದ್ದಂತೆ ನಮ್ಮ ಜಾಗದಲ್ಲಿ ಮಳಿಗೆ, ಕಂಪೌಂಡ್ ನಿರ್ಮಿಸಿಕೊಂಡಿದ್ದೇವೆಂದು ಸುಮಾರು ಗಂಟೆಗೂ ಹೆಚ್ಚು ಕಾಲ ವಾದಿಸಿದರಲ್ಲದೆ  ಮಾತಿನ ಚಕಮಕಿಯೂ ನಡೆಯಿತು.

ಬೆರಳೆಣಿಕೆಯಲ್ಲಿದ್ದ ಪೊಲೀಸರಿಂದ ನಿಯಂತ್ರಣ ಕಷ್ಟಸಾಧ್ಯವಾಗಿತ್ತು. ಈ ವೇಳೆ ನೂರಾರು ಮಂದಿ ಸ್ಥಳದಲ್ಲಿ ಜಮಾಯಿಸಿ ನೀವು ಯಾರದೋ ಮಾತು ಕೇಳಿ ಬಂದಿದ್ದೀರಾ, ಇಲ್ಲಿ ಹಣಕ್ಕಾಗಿ ಕೆಲವು ವ್ಯಕ್ತಿಗಳು ನಿತ್ಯ ಪೋನ್ ಮಾಡುತ್ತಿದ್ದಾರೆ, ಬೆದರಿಕೆ ಇದೆ. ಈ ನಡುವೆ ನಮ್ಮ ಆಸ್ತಿ ಉಳಿಸಿಕೊಳ್ಳುವುದು ತಪ್ಪಾ ಎಂದು ಕೆಲವರು ಅಧಿಕಾರಿಗಳನ್ನೇ ತರಾಟೆ ತೆಗೆದುಕೊಂಡರು.

ಪಕ್ಕದಲ್ಲಿ ಅಕ್ರಮವಾಗಿ ನಿರ್ಮಿಸಿರುವ ಕಟ್ಟಡಗಳನ್ನು ತೆರವುಗೊಳಿಸಿರೆಂದು ಪಟ್ಟು ಹಿಡಿದರು. ಈ ವೇಳೆ ಪೌರಾಯುಕ್ತೆ ಶರ್ಮಿಳ ನಿಮ್ಮಿಂದಲೇ ಅದು ಶುರುವಾಗಲಿ. ಇಷ್ಟಕ್ಕೆ ನಿಲ್ಲಿಸಿ, ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಪಡೆದು ಕ್ರಮವಹಿಸಲಾಗುವುದೆಂದು ಎಚ್ಚರಿಸಿದ ನಂತರ ನಗರಸಭೆ ಜೆಸಿಬಿ ವಾಪಾಸ್ಸಾಯಿತು.

ಕಂಪೌಂಡ್ ತೆರವುಗೊಳಿಸುವ ವಿಚಾರ ನಗರದಲ್ಲಿ ಹರಡುತ್ತಿದ್ದಂತೆ ಸ್ಥಳದಲ್ಲಿ  ನೂರಾರು ಮಂದಿ ಜಮಾಯಿಸಿದ್ದರಿಂದಾಗಿ ಸಂಚಾರ ಅಸ್ತವ್ಯಸ್ತವಾಗಿತ್ತು. ಪೊಲೀಸರು ನಿಯಂತ್ರಿಸಲು ಹರಸಾಹಸಪಟ್ಟರು. ಹೆಚ್ಚಿನ ಸಂಖ್ಯೆಯಲ್ಲಿ ಜನರು ನೆರೆದಿದ್ದರಿಂದಾಗಿ ನಗರಸಭೆ ಅಧಿಕಾರಿಗಳು ಸಹ ಯಾವುದೇ ಕ್ರಮ ಕೈಗೊಳ್ಳದೆ ವಾಪಸ್ಸಾದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.