ಪೊಲೀಸ್‌ ಮಾದರಿ ತನಿಖೆ ಕಷ್ಟ: ಹರ್ಷಗುಪ್ತಾ

ಮೂಲ ಹುಡುಕುವುದಕ್ಕಿಂತ ಸೋಂಕು ತಡೆ ಮುಖ್ಯ

Team Udayavani, Apr 29, 2020, 1:06 PM IST

ಪೊಲೀಸ್‌ ಮಾದರಿ ತನಿಖೆ ಕಷ್ಟ: ಹರ್ಷಗುಪ್ತಾ

ಮೈಸೂರು: ಕೋವಿಡ್ ಸಂಬಂಧ ನಂಜನಗೂಡಿನ ಜ್ಯುಬಿಲಿಯಂಟ್‌ ಕಾರ್ಖಾನೆಯ ಕುರಿತು ತನಿಖೆ ನಡೆಸುವ ಜವಾಬ್ದಾರಿ ಹೊತ್ತಿರುವ ಹಿರಿಯ ಐಎಎಸ್‌ ಅಧಿಕಾರಿ ಹರ್ಷ ಗುಪ್ತಾ, ಜ್ಯುಬಿಲಿಯಂಟ್‌ ಪ್ರಕರಣದ ತನಿಖೆಗೆ ವೈಜ್ಞಾನಿಕ ವಿಧಾನ ಅಗತ್ಯವೇ ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಜಿಲ್ಲೆಯ ಕೋವಿಡ್‌ ನಿಯಂತ್ರಣ ಕಾರ್ಯಾಚರಣೆಯ ನೋಡಲ್‌ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಹರ್ಷಗುಪ್ತಾಗೆ ಸರ್ಕಾರ ಸೋಂಕು ಹರಡಿದ್ದು ಹೇಗೆ ಎಂಬುದರ ಬಗ್ಗೆ ವಿಚಾರಣೆ ನಡೆಸಲು ಆದೇಶಿಸಿತ್ತು. ಈ ಸಂಬಂಧ ಶುಕ್ರವಾರ ಆದೇಶವನ್ನು ಕೂಡ ಹೊರಡಿಸಿತ್ತು. ಮರು ದಿನವೇ ವಿಚಾರಣೆ ಪ್ರಕ್ರಿಯೆ ಕುರಿತ ಕೆಲವು ಸಂಗತಿಗಳ ಬಗ್ಗೆ ತಮಗೆ ನಿರ್ದೇಶನ ನೀಡುವಂತೆ ಪತ್ರ ಬರೆದಿರುವ ಹರ್ಷಗುಪ್ತಾ ಅವರು ಸದ್ಯಕ್ಕೆ ವಿಚಾರಣೆಗಿಂತ ವೈರಾಣು ತಡೆಗಟ್ಟುವುದೇ ಮುಖ್ಯವಾಗಬೇಕಿದೆ ಎಂಬ ಸಂಗತಿಯನ್ನು ಪ್ರಸ್ತಾಪಿಸಿದ್ದಾರೆನ್ನಲಾಗಿದೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಇಲ್ಲಿ ತನಿಖೆ ಅಗತ್ಯ ಕಾಣುತ್ತಿಲ್ಲ. ಪ್ರಕರಣದ ತನಿಖೆಗೆ ವೈಜ್ಞಾನಿಕ ವಿಧಾನಗಳಿದೆಯೇ ಎಂದು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ಕೋವಿಡ್ ಸಾಂಕ್ರಾಮಿಕ ರೋಗವಲ್ಲ. ಅದು ಸರ್ವವ್ಯಾಪಿ ಪಿಡುಗು. ಇದಕ್ಕೆ ನಮ್ಮಲ್ಲಿ ಕಾಯ್ದೆಯಿಲ್ಲ. ಶಂಕಿತರು, ಸೋಂಕಿತರನ್ನು ಸಂಪರ್ಕಿಸಿ ಪೊಲೀಸ್‌ ಮಾದರಿ ತನಿಖೆ ಕಷ್ಟ ಎಂದು ತಿಳಿಸಿದ್ದಾರೆ.

ಈಗ ಮೂಲ ಹುಡುಕುವುದಕ್ಕಿಂತಲೂ ಹರಡುವುದನ್ನು ತಡೆಯುವುದು ಮುಖ್ಯ. ಆದ್ದರಿಂದ ತನಿಖೆ ಮಾಡಲು ಏನೂ ಇಲ್ಲ. ಈ ಸಂಬಂಧ ತನಿಖೆ ಶುರುವಾಗಿಲ್ಲ. ಏ.14ರಂದು ನನ್ನನ್ನು ಕೋವಿಡ್‌ ಮೇಲ್ವಿಚಾರಣೆಗಾಗಿ ಸರ್ಕಾರ ನೇಮಿಸಿತ್ತು. ಈಗ ತನಿಖೆ ಮಾಡಿ ಎಂದು ಹೇಳಿದೆ. ಆದ್ದರಿಂದ ಒಂದಷ್ಟು ತಾಂತ್ರಿಕ ಮಾರ್ಗದರ್ಶನ ಕೋರಿದ್ದೇನೆ. ಈ ಬಗ್ಗೆ ಸರ್ಕಾರದಿಂದ ಪ್ರತಿಕ್ರಿಯೆ ಬಂದಿಲ್ಲ. ಜ್ಯುಬಿಲಿಯೆಂಟ್‌ ನಲ್ಲಿ 1500 ಕಾರ್ಮಿ ಕರು ಇದ್ದಾರೆ. 70ಕ್ಕೂ ಹೆಚ್ಚು ಜನರು ಪಾಸಿಟಿವ್‌ ಆಗಿದ್ದಾರೆ. ಹೇಗೆ, ಯಾವ ರೀತಿ ತನಿಖೆ ಮುಂದುವರಿಸಬೇಕು ಎಂದು ಕೇಳಿದ್ದೇನೆ. ಪೊಲೀಸರು ಈಗಾಗಲೇ ತನಿಖೆ ನಡೆಸುತ್ತಿದ್ದಾರೆ. ಅವರ ತನಿಖೆಯಲ್ಲಿ ನಾನು ಹಸ್ತಕ್ಷೇಪ ಮಾಡಿಲ್ಲ ಎಂದರು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.