ಎಪಿಎಂಸಿ ತಿದ್ದುಪಡಿ ಕಾಯ್ದೆಗೆ ವಿರೋಧಿಸಿ ಪ್ರತಿಭಟನೆ
Team Udayavani, May 21, 2020, 5:15 AM IST
ಮೈಸೂರು: ಕಾರ್ಪೋರೇಟ್ ಕಂಪನಿಗಳ ಲೂಟಿಗೆ ನೆರವಾಗುವ ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ಮಾಡಲಾದ ತಿದ್ದುಪಡಿಯನ್ನು ವಾಪಸ್ ಪಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಭಾರತ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್ವಾದಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಡೀಸಿ ಕಚೇರಿ ಮುಂಭಾಗ ಪ್ರತಿಭಟಿಸಿದ ಪ್ರತಿಭಟನಕಾರರು, ಕೊರೊನಾದಿಂದ ಕೃಷಿಕರು, ಕಾರ್ಮಿಕರು, ಬಡವರು ಬಿಕ್ಕಟ್ಟಿಗೆ ಸಿಲುಕಿದ್ದು, ಇವರನ್ನು ಮೇಲೆತ್ತಲು ಕ್ರಮ ಕೈಗೊಳ್ಳಲು ಸರ್ಕಾರಗಳು ಕೈಗೊಂಡ ಕ್ರಮಗಳು ನಿರಾಶಾದಾಯಕವಾಗಿದೆ. ರಾಜ್ಯವನ್ನು ಆರ್ಥಿಕ ಬಿಕ್ಕಟ್ಟಿನಿಂದ ಮೇಲೆತ್ತುವ ದೂರದೃಷ್ಟಿಯಿಂದ ಕೂಡಿದವಲ್ಲ,
ಬದಲಿಗೆ ಶ್ರೀಮಂತರನ್ನು ಮತ್ತು ಕಾರ್ಪೋರೇಟ್ ಕಂಪನಿಗಳನ್ನು ಸಂರಕ್ಷಿಸುವ ಪ್ರಯತ್ನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರೈತರ ಬೆಳೆನಷ್ಟ, ನಿರುದ್ಯೋಗ, ಆರ್ಥಿಕ ಸಂಕಷ್ಟದ ಕಾರಣದಿಂದ ರೈತರ, ಗೇಣಿದಾರರ, ಮಹಿಳೆಯರ ಸಾಲಗಳನ್ನು ಮೈಕ್ರೋ ಸಂಸ್ಥೆಗಳದ್ದು ಸೇರಿದಂತೆ ಮನ್ನಾ ಮಾಡಬೇಕು. ಬೆಳೆನಷ್ಟ ಪರಿಹಾರ ನೀಡಬೇಕು.
ಕಾರ್ಮಿಕರಿಗೆ ಲಾಕ್ಡೌನ್ ಅವಧಿಯ ಬಾಕಿ ವೇತನವನ್ನು ಸರ್ಕಾರವೇ ಭರಿಸಬೇಕು ಎಂದರು. ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಕೆ. ಬಸವರಾಜು, ಮುಖಂಡರಾದ ಲ. ಜಗನ್ನಾಥ್, ಜಯರಾಂ, ಜಗದೀಶ್ ಸೂರ್ಯ, ವಿಜಯಕುಮಾರ್, ರಾಜೇಂದ್ರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್