ದಾಖಲೆ ಸಮೇತ ಸಾಬೀತು ಪಡಿಸಿ


Team Udayavani, Jul 10, 2020, 5:54 AM IST

ecord

ಮೈಸೂರು: 15 ವರ್ಷಗಳಿಂದ ಈಚೆಗೆ ನಗರದಲ್ಲಿ ಪಾಲಿಕೆ ಸದಸ್ಯರು, ಮೇಯರ್‌ಗಳು ಹಾಗೂ ವಕ್ಫ್ ಕಮಿಟಿ ಅಧ್ಯಕ್ಷರಾಗಿದ್ದವರು ತಾವು ಕಟ್ಟಿರುವ ಮನೆ, ವಾಣಿಜ್ಯ ಕಟ್ಟಡಗಳು ಪಾಲಿಕೆ ನಿಯಮಗಳ ಪ್ರಕಾರವೇ ಇದೆ, ಯಾವುದೇ ಅಕ್ರಮ  ಮಾಡಿಲ್ಲ ಎಂದು ದಾಖಲೆ ಸಮೇತ ಸಾಬೀತು ಪಡಿಸಿದರೆ ನಾನು ಪಾಲಿಕೆ ಸದಸ್ಯರು ಮತ್ತು ಮೇಯರ್‌ ವಾದ ಒಪ್ಪುತ್ತೇನೆ ಎಂದು ಸಂಸದ ಪ್ರತಾಪ್‌ ಸಿಂಹ ಮಹಾನಗರ ಪಾಲಿಕೆ ಸದಸ್ಯರಿಗೆ ಸವಾಲು ಹಾಕಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರಪಾಲಿಕೆ ನಿಯಮಗಳ ಅನುಸಾರವೇ ನಾವು ಕಟ್ಟಡಗಳನ್ನು ಕಟ್ಟಿದ್ದೇವೆ, ಅಕ್ರಮ ಮಾಡಿಲ್ಲ, ಸಿಆರ್‌ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರೆ, ನಾನೇ ಖುದ್ದು ಸ್ಥಳ ಪರಿಶೀಲಿಸುತ್ತೇನೆ.  ತಪ್ಪು ಮಾಡಿರುವವರು ಸಾರ್ವಜನಿಕವಾಗಿ ತಪ್ಪೊಪ್ಪಿಕೊಳ್ಳಲಿ. ರಾಜೀನಾಮೆ ಕೊಡುವುದು ಬೇಡ. ಮುಂದಕ್ಕೆ ಯಾರ ಬಳಿಯೂ ಹಣ ವಸೂಲಿ ಮಾಡಬಾರದು ಎಂದು ಎಚ್ಚರಿಸಿದರು.

ತೊಂದರೆ ನೀಡಬೇಡಿ: ಮಹಾಪೌರರು,  ನಗರಪಾಲಿಕೆ ಸದಸ್ಯರು ವಿನಾಕಾರಣ ಅಧಿಕಾರಿಗಳನ್ನು ಕರೆದುಕೊಂಡು ಕಟ್ಟಡ ಕಟ್ಟುತ್ತಿರುವ ಸ್ಥಳಗಳಿಗೆ ಹೋಗಬಾರದು. ಅಧಿಕಾರಿಗಳು ಬೇಕಾದರೆ ತಾವೇ ಖುದ್ದಾಗಿ ಹೋಗಿ ಪರಿಶೀಲಿಸಲಿ. ಆದರೆ ಈ ವಿಚಾರದಲ್ಲಿ ಸದಸ್ಯರ ಮಾತು  ಕೇಳುವುದು ಬೇಡ. ಯಾರಾದರೂ ತೊಂದರೆ ಕೊಡುತ್ತಿದ್ದಾರೆ ಎಂದರೆ ಜನರು ನನಗೆ, ಪಾಲಿಕೆ ಆಯುಕ್ತರಿಗೆ ದೂರು ನೀಡಬಹುದು. ಪಾಲಿಕೆ ಸದಸ್ಯರು ತಮ್ಮ ವಾರ್ಡ್‌ಗಳಲ್ಲಿ ಎಷ್ಟು ಕಂದಾಯ ಸಂಗ್ರಹವಾಗಬೇಕು, ಎಷ್ಟು  ಸಂಗ್ರಹವಾಗಿದೆ ಹಾಗೂ ತಮ್ಮ ವಾರ್ಡ್‌ಗಳಿಗೆ ಬಿಡುಗಡೆಯಾಗಿರುವ ಹಣವನ್ನು ಹೇಗೆ ಬಳಸಿದ್ದಾರೆ ಎಂಬುದನ್ನು ದಾಖಲೆ ಸಮೇತ ತೋರಿಸಲಿ ಎಂದು ಸವಾಲು ಹಾಕಿದರು.

ಲೆಕ್ಕ ಕೊಡಿ: ನಾಲ್ಕು ವರ್ಷಗಳಲ್ಲಿ 800 ಕೋಟಿ ರೂ. ವೆಚ್ಚ ಮಾಡಿದ್ದಾರೆ. ಅದನ್ನೆಲ್ಲಾ ಯಾವುದಕ್ಕೆ ಬಳಸಿದ್ದಾರೆ ಎಂದು ಲೆಕ್ಕ ನೀಡಲಿ. ಮಾಡಿದ ಕೆಲಸಗಳನ್ನೇ ಮತ್ತೆ ಮತ್ತೆ ಮಾಡುತ್ತಾರೆ. ಇದರ ಬಗ್ಗೆ ಕೌನ್ಸಿಲ್‌ ಸಭೆಗೆ ಬಂದು ಮಾತನಾಡಿ  ಎನ್ನುತ್ತಾರೆ. ಅಲ್ಲಿ ಹೋದರೆ ಗಲಾಟೆ ಬಿಟ್ಟರೆ ಮತ್ತೇನೂ ಇರುವುದಿಲ್ಲ ಎಂದು ದೂರಿದರು.

ಸಹಾಯವಾಣಿ: ನಗರಪಾಲಿಕೆಯಿಂದ ಒಂದು ಸಹಾಯವಾಣಿ ಆರಂಭಿಸೋಣ. ನಗರದ ಜನರು ವಸತಿ, ವಾಣಿಜ್ಯ ಕಟ್ಟಡಗಳು ನಿರ್ಮಿಸುವಾಗ ವಕ್ಫ್ ಕಮಿಟಿ ಅಥವಾ ಪಾಲಿಕೆ ಸದಸ್ಯರು ಬಂದು ಹಣ ವಸೂಲಿ ಮಾಡಿದರೆ  ಆ ಸಹಾಯವಾಣಿಗೆ ದೂರು ನೀಡಲಿ. ಆಗ ಎಷ್ಟು ದೂರುಗಳು ಬರುತ್ತವೆ ನೋಡಿದರೆ ಇವರು ಮಾಡಿರುವ ತಪ್ಪು ಎಲ್ಲರಿಗೂ ತಿಳಿಯುತ್ತದೆ ಎಂದು ಚಾಟಿ ಬೀಸಿದರು.

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಾಲ್ಕೇ ದಿನದಲ್ಲಿ ಮ್ಯಾಜಿಕ್‌ ಆಗುತ್ತೆ, ನೋಡ್ತಾ ಇರಿ: ಬಿ.ವೈ.ವಿಜಯೇಂದ್ರ

ನಾಲ್ಕೇ ದಿನದಲ್ಲಿ ಮ್ಯಾಜಿಕ್‌ ಆಗುತ್ತೆ, ನೋಡ್ತಾ ಇರಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.