ಅವ್ಯವಹಾರದ ಸಾಕ್ಷ್ಯ ಜನರ ಮುಂದಿಡಿ


Team Udayavani, May 22, 2020, 5:19 AM IST

avyavahara

ಮೈಸೂರು: ಮೈಮುಲ್‌ ನೇಮಕಾತಿಯಲ್ಲಿ ಅವ್ಯವಹಾರ ನಡೆದಿರುವುದು ನಿಜವಾಗಿದ್ದರೆ ಸಾಕ್ಷ್ಯವನ್ನು ಸಾರ್ವಜನಿಕರ ಮುಂದಿಡಬೇಕು. ಅದುಬಿಟ್ಟು ನನ್ನ ಬಳಿ ಮತ್ತಷ್ಟು ಆಡಿಯೋಗಳಿದ್ದು ಮುಂದೆ ಬಿಡುಗಡೆ ಮಾಡುತ್ತೇನೆ ಎಂದು  ಬ್ಲಾಕ್‌ಮೇಲ್‌ ಮಾಡುವುದು ತರವಲ್ಲ ಎಂದು ಸಚಿವ ಎಸ್‌.ಟಿ.ಸೋಮಶೇಖರ್‌ ಅವರು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಮೈಮುಲ್‌ ಸಿಬ್ಬಂದಿ ನೇಮಕ ಪ್ರಕ್ರಿಯೆ ವಿಚಾರ ಕಳೆದ ಆರೇಳು ತಿಂಗಳಿನಿಂದ ನಡೆದುಕೊಂಡು  ಬಂದಿದೆ. ಸಂಸ್ಥೆಯಲ್ಲಿ ಕಳೆದ 6 ತಿಂಗಳಿನಿಂದ ನೇಮಕಾತಿ ಚಟುವಟಿಕೆ ನಡೆಯುತ್ತಿವೆ. ಸಾರಾ ಹೇಳಿದ ತಕ್ಷಣ, ಆರೋಪ ಮಾಡಿದ ತಕ್ಷಣ ನೇಮಕಾತಿ ರದ್ದು ಮಾಡಲು ಅಸಾಧ್ಯ.  ಈಗಾಗಲೇ ಇಲಾಖೆಯಿಂದ ತನಿಖೆ ನಡೆಯುತ್ತಿದೆ.

ವರದಿ  ಬಂದ ನಂತರ ತಪ್ಪಿತಸ್ಥರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದರು. ತನಿಖೆ ಯಾರು ಮಾಡಬೇಕು ಅಂತ ಸಾ.ರಾ. ಮಹೇಶ್‌ ಅವರನ್ನು ಕೇಳಿ ತನಿಖೆ ಮಾಡಿಸುವುದಲ್ಲ. ಇಲಾಖೆಗೆ ಸಂಬಂಧಪಟ್ಟಿದ್ದು ಯಾರು ಮಾಡಿದರೇನು. ಹಾಗಾಗಿ ಇಲಾಖೆಯಿಂದಲೇ ತನಿಖೆ ನಡೆಯುತ್ತಿದೆ. ಇದನ್ನು ರಿಜಿಸ್ಟ್ರರ್‌ ಕೂಲಂಕುಶವಾಗಿ ಪರಿಶೀಲಿಸುತ್ತಾರೆ ಎಂದರು.

ಸಾರಾ ಡೇರಿ ಮುಂದೆ ಪ್ರತಿಭಟನೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಅದು ಅವರ ಹಕ್ಕು ಪ್ರತಿಭಟನೆ ಮಾಡಬೇಡಿ ಎಂದು ನಾವು ಹೇಳಲಾಗುವುದಿಲ್ಲ. ಇದು ರೈತರ ಸಂಸ್ಥೆ ರೈತರಿಗೋಸ್ಕರ ಇರುವ ಸಂಸ್ಥೆ. ನೌಕರರ ಸಮಸ್ಯೆ ಇದೆ ಎಂದು ನೇಮಕಾತಿಗೆ ಅನುಮೋದನೆ ಪಡೆದಿದ್ದೇ ಅವರು. ಈಗ ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆ ಎಂದು  ಆಡಿಯೋ ಬಿಡುಗಡೆ ಮಾಡ್ತೀನಿ, ಮಾಡ್ತೀನಿ ಎನ್ನುತ್ತಿದ್ದಾರೆ.

ನೇಮಕಾತಿಯಲ್ಲಿ ಅರ್ಹ ಅಭ್ಯರ್ಥಿ ಬಿಟ್ಟು ಬೇರೆಯವರಿಗೆ ಉದ್ಯೋಗ ನೀಡಬಾರದು, ಜೊತೆಗೆ ಅನ್ಯಾಯವಾಗಬಾರದು. ಈ ಬಗ್ಗೆ ಇಲಾಖೆಯವರು ವಿಚಾರಣೆ  ನಡೆಸುತ್ತಿದ್ದು, ಸತ್ಯಾಂಶ ಹೊರಬರಲಿದೆ ಎಂದರು.

ಸಚಿವ ಮಾಧುಸ್ವಾಮಿ ರೈತ ಮಹಿಳೆ ಜೊತೆ ವರ್ತಿಸಿದ್ದು ಸರಿಯಲ್ಲ. ನನಗೆ ಮಾಹಿತಿಯೂ ಇಲ್ಲ, ಕೇಳಲು ಮಾಧು ಸ್ವಾಮಿ ಸಿಕ್ಕಿಲ್ಲ, ಮಂತ್ರಿಗಳು ಮಾತನಾಡು ವಾಗ ಎಚ್ಚರಿಕೆಯಿಂದ ಇರಬೇಕು, ಅವರು ಮಾತನಾಡುವ ವೇಳೆ ಅಲ್ಲಿನ  ಸಂದರ್ಭ ಹೇಗಿತ್ತು ಎಂಬ ಬಗ್ಗೆ ನನಗೆ ತಿಳಿದಿಲ್ಲ. 
-ಎಸ್‌.ಟಿ. ಸೋಮಶೇಖರ್‌, ಸಚಿವ

ಟಾಪ್ ನ್ಯೂಸ್

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಚತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Mysore; ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಛತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.