ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆ
Team Udayavani, Jun 26, 2020, 5:49 AM IST
ಮೈಸೂರು: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಹಾನಗರ ಪಾಲಿಕೆ ಖಾಯಂ ಹಾಗೂ ಗುತ್ತಿಗೆ ಪೌರಕಾರ್ಮಿಕರ ಸಂಘದ ಸಹಯೋಗದಲ್ಲಿ ಮೈಸೂರು ಮಹಾನಗರ ಪಾಲಿಕೆ ಒಳಚರಂಡಿ ಕಾರ್ಮಿಕರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸೇರಿದ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದದರು.
ಮಾಜಿ ಮಹಾಪೌರ ನಾರಾಯಣ್, ಸರ್ಕಾರ ನಮಗೆ ಆಗುತ್ತಿರುವ ವಂಚನೆಗಳ ಬಗ್ಗೆ ಗಮನ ಹರಿಸಿ ಕ್ರಮ ತೆಗೆದುಕೊಳ್ಳದಿದ್ದರೆ 15 ದಿನಗಳ ಬಳಿಕ ಕೆಲಸ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ನಗರಪಾಲಿಕೆಯಲ್ಲಿ 65 ವಾರ್ಡ್ಗಳಿವೆ. ನಗರ ವ್ಯಾಪ್ತಿಗೆ ಬರುವ ಕೊಳವೆ ಮಾರ್ಗಕ್ಕೆ ಸುಮಾರು 231 ಜನ ಒಳಚರಂಡಿ ಕಾರ್ಮಿಕರು ಹಗಲು ರಾತ್ರಿ ಕೆಲಸ ಮಾಡುತ್ತಿದ್ದೇವೆ.
ಮೈಸೂರು ಮಹಾನಗರ ಪಾಲಿಕೆಗೆ ಸ್ವತ್ಛ ಭಾರತ ಅಭಿಯಾನದಲ್ಲಿ ಪ್ರಶಸ್ತಿ ಬಂದಾಗಲೂ ಒಳಚರಂಡಿ ಕಾರ್ಮಿಕರನ್ನು ಕಡೆಗಣಿಸಲಾಗಿದೆ. ಒಳಚರಂಡಿ ಕಾರ್ಮಿಕರಿಗೆ ಉಪಾಹಾರ ಭತ್ಯೆ ನೀಡದೆ ವಂಚಿಸಿದ್ದಾರೆ ಎಂದು ಆರೋಪಿಸಿದರು. ಒಳಚರಂಡಿ ವಿಭಾಗದಲ್ಲಿ 231 ಹುದ್ದೆಗಳು ಖಾಲಿ ಇವೆ. ಎಲ್ಲಾ ಒಳಚರಂಡಿ ಕಾರ್ಮಿಕರನ್ನು ಖಾಯಂ ಮಾಡಿ ಗುತ್ತಿಗೆ ಪೌರಕರ್ಮಿಕರಿಗೆ ನೀಡುತ್ತಿರುವ ಎಲ್ಲಾ ಸೌಲಭ್ಯಗಳನ್ನೂ ನೀಡಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ಶಾಸಕ ನಾಗೇಂದ್ರ ಸ್ಥಳಕ್ಕೆ ಆಗಮಿಸಿ, ಪ್ರತಿಭಟನಾಕಾರರ ಸಮಸ್ಯೆ ಆಲಿಸಿ, ಮನವಿ ಪತ್ರ ಸ್ವೀಕರಿಸಿದರು. ಪ್ರತಿಭಟನೆಯಲ್ಲಿ ಮಹಾನಗರ ಪಾಲಿಕೆ ಒಳಚರಂಡಿ ಕಾರ್ಮಿಕರ ಸಂಘದ ಸದಸ್ಯರಾದ ಮಾರ, ಆರುಗಂ, ಮಹದೇವ, ಶಿವಣ್ಣ, ಶ್ರೀನಿವಾಸ, ಕುಮಾರಸ್ವಾಮಿ, ಗಣೇಶ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ