ಮಣಿವಣ್ಣನ್ ವರ್ಗಾವಣೆಗೆ ತೀವ್ರ ಖಂಡನೆ
Team Udayavani, May 14, 2020, 4:57 AM IST
ಮೈಸೂರು: ಕಾರ್ಮಿಕ ಇಲಾಖೆ ಕಾರ್ಯದರ್ಶಿ ಮಣಿವಣ್ಣನ್ ವರ್ಗಾವಣೆ ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಮೌನ ಪ್ರತಿಭಟನೆ ನಡೆಯಿತು.
ಡೀಸಿ ಕಚೇರಿ ಬಳಿ ಸಾಮಾಜಿಕ ಅಂತರ ಕಾಯ್ದುಕೊಂಡು ಸಮಾವೇಶಗೊಂಡ ಪ್ರತಿಭಟನಾಕಾರರು, ಸರ್ಕಾರದ ವಿರುದ ಕಿಡಿಕಾರಿದರು. ಮೈಸೂರು ಜಿಲ್ಲಾ ಸಮಿತಿಯ ಜಯರಾಂ ಮಾತನಾಡಿ, ಕಾರ್ಮಿಕ ಇಲಾಖೆ ಕಾರ್ಯದರ್ಶಿ ಮಣಿವಣ್ಣನ್ ಲಾಕ್ ಡೌನ್ ಸಂತ್ರಸ್ತರ ಪರಿಹಾರ ಕಾರ್ಯದಲ್ಲಿ ದಕ್ಷ ಆಡಳಿತ ನೀಡಿ, ಎಲ್ಲರನ್ನೂ ಜೊತೆಗೆ ಕರೆದುಕೊಂಡು ಹೋಗುವಲ್ಲಿ ಯಶಸ್ವಿಯಾಗಿದ್ದರು.
ಸರ್ಕಾರ ಇಂತಹ ಸಂದರ್ಭದಲ್ಲಿ ದಕ್ಷ ಅಧಿಕಾರಿಯನ್ನು ವರ್ಗಾವಣೆ ಮಾಡಿದ್ದು ಸರಿಯಲ್ಲ. ಹೀಗಾಗಿ ಕೂಡಲೇ ವರ್ಗಾವಣೆಯನ್ನು ಹಿಂಪಡೆದು ಮಣಿವಣ್ಣನ್ ಅವರನ್ನು ಕಾರ್ಮಿಕ ಇಲಾಖೆಯಲ್ಲೇ ಮುಂದುವರಿಸಬೇಕು ಎಂದು ಒತ್ತಾಯಿಸಿದರು. ಬಳಿಕ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಪ್ರತಿ ಭಟನೆಯಲ್ಲಿ ಸಮಿತಿಯ ಸದಸ್ಯರು ಭಾಗವಹಿಸಿದ್ದರು.