ಕೇವಿಯಟ್‌ ಸಲ್ಲಿಸಿ, ಅಕ್ರಮ ಒಪ್ಪಿಕೊಂಡಿದೆ


Team Udayavani, May 21, 2020, 5:23 AM IST

Mys Sr Mahesh

ಮೈಸೂರು: ನೇಮಕಾತಿಗಳಲ್ಲಿ ನಡೆದಿರುವ ಅಕ್ರಮ ಹೊರ ಬರುವ ಮುನ್ನವೇ, ಮೈಮುಲ್‌ ಹೈಕೋರ್ಟ್‌ನಲ್ಲಿ ಕೇವಿಯಟ್‌ ಸಲ್ಲಿಸಿದೆ. ಅಕ್ರಮ ನಡೆದಿಲ್ಲ ಎನ್ನುವುದಾದರೆ, ಮೈಮುಲ್‌ ಕೇವಿಯೇಟ್‌ ಏಕೆ ಸಲ್ಲಿಸಬೇಕು ಎಂದು ಶಾಸಕ ಸಾ.ರಾ.ಮಹೇಶ್‌ ಪ್ರಶ್ನಿಸಿದರು. ಮೈಮುಲ್‌ ಅಕ್ರಮ ನೇಮಕಾತಿ ವಿಚಾರದಲ್ಲಿ ಸರ್ಕಾರದಿಂದ ನ್ಯಾಯ ಸಿಗುವು ದಿಲ್ಲ. ಹಾಗಾಗಿ, ನ್ಯಾಯಾಲಯದ ಮೂಲಕವೇ ಕಾನೂನು ಹೋರಾಟ ಮಾಡುತ್ತೇನೆ. ಅನ್ಯಾಯಕ್ಕೊಳಗಾಗಿರುವ ಅರ್ಹ  ಅಭ್ಯರ್ಥಿಗಳಿಗೆ ನ್ಯಾಯ ಕೊಡಿಸುತ್ತೇನೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರತಿಭಟನೆಯ ಎಚ್ಚರಿಕೆ: ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಒಂದು ಕಡೆ ತನಿಖೆ ಆಗುತ್ತಿದೆ ಎನ್ನುತ್ತಾರೆ. ಇನ್ನೊಂದು ಕಡೆ ನೇಮಕಾತಿ ನಡೆಯುತ್ತಿದೆ ಅನ್ನುತ್ತಾರೆ. ತನಿಖೆಗೆ ಕಳುಹಿಸಿದ್ದಾರೆ. ನೇಮಕಾತಿ ಸಮಿತಿನಲ್ಲಿ ಜಾಯಿಂಟ್‌  ರಿಜಿಸ್ಟ್ರಾರ್‌ ಇದ್ದಾರೆ. ಅಲ್ಲಿ ತನಿಖೆ ಮಾಡುವುದಕ್ಕೆ ಜಿಲ್ಲಾ ರಿಜಿಸ್ಟಾರ್‌ ಅನ್ನೂ ಕಳುಹಿ ಸುತ್ತಾರೆ. ಡೀಸಿ ತೀರ್ಮಾನವನ್ನು ತಹಶೀಲ್ದಾರ್‌ ಹೋಗಿ ತನಿಖೆ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದರು. ದಯಮಾಡಿ ಸಚಿವರು ಒತ್ತಡಕ್ಕೆ ಮಣಿಯಬಾರದು. ಒಂದು ವೇಳೆ ಮೈಮುಲ್‌ ಅವರು ಇದೇ ರೀತಿ ಆರೋಪ ಮುಂದುವರಿಸಿಕೊಂಡು ಬಂದರೆ ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಸಿದರು.

ಮೈಮುಲ್‌ನಲ್ಲಿ 165 ಹುದ್ದೆಗಳ ನೇಮಕಾತಿಗೆ ಕರೆ ಮಾಡಲಾಗಿತ್ತು. ಆದರೆ, ಹೆಚ್ಚುವರಿಯಾಗಿ 25 ಹುದ್ದೆಗಳನ್ನು ಕರೆ ಮಾಡದೇ ಭರ್ತಿ ಮಾಡಿಕೊಳ್ಳಲು ಮುಂದಾಗಿ ದ್ದಾರೆ. ಅಲ್ಲದೇ, “ಸಾ.ರಾ.ಮಹೇಶ್‌ ಹುದ್ದೆ ಕೊಡಿಸುವಂತೆ ಕೇಳಿದ್ದರು,  ಹುದ್ದೆಗಳು ಮುಗಿದು ಹೋಗಿವೆ ಎಂದು ಹೇಳಿದ್ದೆವೆ ಎನ್ನುತ್ತಿದ್ದಾರೆ. ಇದರಿಂದ ಹುದ್ದೆಗಳನ್ನು ಮಾಡಿಕೊಂಡಿದ್ದೇವೆ ಎಂದು ಅವರೇ ಒಪ್ಪಿಕೊಂಡಂತಾಯಿತಲ್ಲ ಎಂದರು.

ಒಎಂಆರ್‌ ಶೀಟ್‌ ವಿತರಿಸಿಲ್ಲ: ಯಾವುದೇ ಪರೀಕ್ಷೆಗಳು ಮಾಡುವಾಗ ಒಎಂಆರ್‌ ಶೀಟ್‌ ಕೊಡ್ತಾರೆ. ಪರೀಕ್ಷೆ ಮುಗಿದ 15-20ದಿನದಲ್ಲಿ ಕೀ ಆನ್ಸರ್‌ ಬಿಡುಗಡೆ ಮಾಡುತ್ತಾರೆ. ಯಾವುದು ಸರಿ ಯಾವುದು ತಪ್ಪು ನಮ್ಮ ಅಂಕ ಎಷ್ಟು  ಅನ್ನುವಂಥದ್ದು ನಾವು ಒಎಂಆರ್‌ ಶೀಟ್‌ ಮೂಲಕ ಫ‌ಲಿತಾಂಶಕ್ಕೂ ಮುನ್ನವೇ ಪರಿಶೀಲಿಸಿಕೊಳ್ಳಬಹುದು. ಆದರೆ, ಇಲ್ಲಿ ಒಎಂಆರ್‌ ಶೀಟ್‌ ವಿತರಿಸಿಲ್ಲ. ಮೈಮುಲ್‌ ವೆಬ್‌ಸೈಟ್‌ನಲ್ಲಿ ಫ‌ಲಿತಾಂಶ ಸಂಬಂಧ ಯಾವುದೇ ಮಾಹಿತಿ  ಸಿಗುತ್ತಿಲ್ಲ. ಜನ್ಮ ದಿನಾಂಕ ನಮೂದಿಸಿದರೆ ಮಾತ್ರ ಫ‌ಲಿತಾಂಶ ನೋಡುವಂತೆ ಮಾಡಿದ್ದಾರೆ ಎಂದು ಕಳವಳ  ವ್ಯಕ್ತಪಡಿಸಿದರು.

ಬೆದರಿಕೆ ಕರೆಗಳು ಬರುತ್ತಿವೆ: ಮೈಮುಲ್‌ ಉದ್ಯೋಗಾಕಾಂಕ್ಷಿ ಚೈತ್ರ ಮಾತನಾಡಿ, ಮೈಮುಲ್‌ ಅಕ್ರಮ ನೇಮಕಾತಿ ನಿಲ್ಲಬೇಕು. ಇಲ್ಲವಾದರೆ “ನನ್ನ ಬಳಿ ಹಣ ಕೇಳಿದವರ ಹೆಸರು ಮತ್ತು ಅವರು ನಡೆಸಿದ ಸಂಭಾಷ ಣೆಯ ಆಡಿಯೋ  ಬಹಿರಂಗ ಪಡಿಸುತ್ತೇನೆ. ಇದರಿಂದ ಅಕ್ರಮದಲ್ಲಿ ಭಾಗಿಯಾದ ಎಲ್ಲರ ಹೆಸರು ಹೊರಬರಲಿದೆ. ಆಡಿಯೋ ಬಿಡುಗಡೆಗೊಳಿಸಿದ ಮೇಲೆ ನನಗೆ ಬೆದರಿಕೆ ಕರೆಗಳು ಬರುತ್ತಿವೆ. ಸುದ್ದಿಗೋಷ್ಠಿ ಯಲ್ಲಿ ಶಾಸಕ ಅಶ್ವಿ‌ನ್‌ಕುಮಾರ್‌, ಜಾ.ದಳ  ಮುಖಂಡರಾದ ಕೆ.ವಿ.ಮಲ್ಲೇಶ್‌, ಚೆಲುವೇಗೌಡ, ಪ್ರಕಾಶ್‌, ರಾಮು, ಅಭಿಷೇಕ್‌, ಸಿ.ಜೆ.ದ್ವಾರಕೀಶ್‌, ಮಾಜಿ
ಮೇಯರ್‌ ಆರ್‌.ಲಿಂಗಪ್ಪ ಇದ್ದರು.

ಮುಂದಿನ ದಿನಗಳಲ್ಲಿ ಮೈಮುಲ್‌ನಲ್ಲಿ ನಡೆಯುವ ನೇಮಕಾತಿಗೆ ಪ್ರಶ್ನೋತ್ತರಗಳ ಬದಲಾಗಿ ಒಎಂಆರ್‌ ಶೀಟ್‌ ಮೂಲಕ ಪರೀಕ್ಷೆ ನಡೆಸಬೇಕು. ಹಣ ಇರುವವರಿಗೇ ಕೆಲಸ ಸಿಗುತ್ತದೆ ಎನ್ನುವ ಮನೋಭಾವ ಹೋಗಬೇಕು. ಈ ಹಿಂದೆಯೂ ಡಿಸಿಸಿ ಹಾಗೂ ಮೈಸೂರು-ಚಾಮರಾಜನಗರದ ಸಹಕಾರಿ ಬ್ಯಾಂಕ್‌ನಲ್ಲಿ ಅಕ್ರಮ ನೇಮಕಾತಿ ನಡೆದಿದ್ದು, ತನಿಖೆಯಿಂದ ದೃಢಪಟ್ಟಿತು. ಆದರೆ, ಮೈಮುಲ್‌ನಲ್ಲಿ ನೇಮಕಾತಿಗೂ ಮುನ್ನವೇ ಗೊತ್ತಾಗಿದೆ.
-ಸಾ.ರಾ.ಮಹೇಶ್‌, ಶಾಸಕ

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.