Hunsur: ಬಿರುಗಾಳಿ, ಮಳೆಗೆ ಧರೆಗುರುಳಿದ ಮರ, ವಿದ್ಯುತ್ ಕಂಬ
Team Udayavani, Apr 22, 2023, 8:56 PM IST
ಹುಣಸೂರು: ತಾಲೂಕಿನ ಹನಗೋಡು ಹೋಬಳಿಯ ಚಿಲ್ಕುಂದದಲ್ಲಿ ಶುಕ್ರವಾರ ಸಂಜೆ ಬಿರುಗಾಳಿ ಮಳೆಗೆ ಮರ, ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ನಡೆದಿದೆ.
ತಾಲೂಕಿನ ಚಿಲ್ಕುಂದ – ಹಬ್ಬನಕುಪ್ಪೆ ರಸ್ತೆಯಲ್ಲಿ ಬೃಹತ್ ಮರವೊಂದು ಉರುಳಿ ಬಿದ್ದಿದೆ. ಇದೇ ರಸ್ತೆಯಲ್ಲಿ ವಿದ್ಯುತ್ ತಂತಿಯ ಮೇಲೆ ಮರಗಳ ಕೊಂಬೆಗಳು ಬಿದ್ದಿದ್ದರಿಂದ ಎರಡು ವಿದ್ಯುತ್ ಕಂಬಗಳು ನೆಲಕಚ್ಚಿದೆ. ಮಳೆಯಿಂದಾಗಿ ರಸ್ತೆಯಲ್ಲಿ ಓಡಾಟ ವಿರಳವಾಗಿದ್ದರಿಂದಾಗಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ, ಆದರೆ ಬೆಳಗ್ಗೆವರೆಗೆ ಈ ಭಾಗದಲ್ಲಿ ವಿದ್ಯುತ್ ಸರಬರಾಜಿಗೆ ಅಡಚಣೆಯಾಗಿದ್ದರೆ, ರಸ್ತೆಗೆ ಮರ ಬಿದ್ದಿದ್ದರಿಂದಾಗಿ ರಸ್ತೆ ಸಂಚಾರ ಬಂದ್ ಆಗಿತ್ತು.
ಶನಿವಾರ ಸಂಜೆ ವೇಳೆಗೆ ಬದಲಿ ವಿದ್ಯುತ್ ಕಂಬ ಅಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದು ಎಇಇ ಸಿದ್ದಪ್ಪ ತಿಳಿಸಿದ್ದಾರೆ.
ಇದನ್ನೂ ಓದಿ: ಲಂಚಕ್ಕೆ ಬೇಡಿಕೆ: ದಾವಣಗೆರೆ ಗ್ರಾಮಾಂತರ ಠಾಣೆ PSI, ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ