ಪರಿಹಾರ ಧನ ಬಳಸಿಕೊಳ್ಳಿ: ಪೂರ್ಣಿಮಾ
Team Udayavani, Jun 21, 2020, 5:22 AM IST
ಮೈಸೂರು: ಅಗಸರು ಹಾಗೂ ಕ್ಷೌರಿಕ ವೃತ್ತಿ ಅವಲಂಭಿಸಿ ಜೀವನ ನಿರ್ವಹಣೆ ಮಾಡುತ್ತಿರುವ ಅಸಂಘಟಿತ ಕಾರ್ಮಿಕರು ಸರ್ಕಾರವು ನೀಡುತ್ತಿರುವ ನೆರವು ಪಡೆಯಲು ನಿಗದಿತ ಸಮಯಕ್ಕೆ ಸೇವಾ ಸಿಂಧೂ ಪೋರ್ಟಲ್ನಲ್ಲಿ ಅರ್ಜಿಯನ್ನು ಸಲ್ಲಿಸಿ, ಸದುಪಯೋಗ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಆರ್.ಪೂರ್ಣಿಮಾ ತಿಳಿಸಿದರು.
ಅಸಂಘಟಿತ ಕಾರ್ಮಿಕರಿಗೆ ಪರಿಹಾರ ನೀಡುವ ಸಂಬಂಧ ಶನಿವಾರ ಡೀಸಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಸಮಿತಿಯ ಸದಸ್ಯರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಸರ್ಕಾರದ ನಿಯಮಾನುಸಾರ ಪರವಾನಗಿ ಪಡೆದ ಕ್ಷೌರಿಕ ಹಾಗೂ ಅಗಸ ಸಂಸ್ಥೆಯಲ್ಲಿ ನಾಲ್ವರಿಗಿಂತ ಹೆಚ್ಚು ಕಾರ್ಮಿಕರು ಮತ್ತು ಪರವಾನಗಿ ಪಡಿಯದೇ ಕರ್ತವ್ಯ ನಿರ್ವಹಿಸುತ್ತಿರುವ ಸಂಸ್ಥೆಯಲ್ಲಿ ಇಬ್ಬರಿಗಿಂತ ಹೆಚ್ಚು ಕಾರ್ಮಿಕರು ಅರ್ಜಿ ಸಲ್ಲಿಸಿದ್ದಲ್ಲಿ,
ಕಾರ್ಮಿಕ ಇಲಾಖೆ ಹಾಗೂ ಸ್ಥಳೀಯ ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಕ್ರಮ ವಹಿಸಲಾಗುತ್ತದೆ ಎಂದರು. ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಎನ್.ಆರ್ .ನಾಗೇಶ್ ಮಾತನಾಡಿ, ನಮ್ಮ ಸಮಾಜದಲ್ಲಿ ಹೆಚ್ಚು ಜನರು ಬಡವರೆ ಆಗಿದ್ದು, ತಮ್ಮ ವೃತ್ತಿಯನ್ನೇ ಅವಲಂಬಿಸಿಕೊಂಡು ಜೀವನ ನಡೆಸುತ್ತಿದ್ದಾರೆ. ಆದ್ದರಿಂದ ಸರ್ಕಾರ ಘೋಷಿಸಿರುವ ಪರಿಹಾರವು ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕೆಂದು ಮನವಿ ಮಾಡಿದರು.
ಕಾರ್ಮಿಕಾಧಿಕಾರಿ ಎಂ.ಎಸ್.ಮಂಜುಳಾದೇವಿ, ಹಿರಿಯ ಕಾರ್ಮಿಕ ನಿರೀಕ್ಷಕ ಜಿ.ಬಿ.ವೀಣಾ, ಎಸ್. ಶಶಿಧರ, ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ ಶಶಿಕುಮಾರ್, ಸವಿತಾ ಸಮಾಜದ ನಗರ ಕಾರ್ಯದರ್ಶಿ ಹರೀಶ್, ಅಶೋಕ್, ಮಾಚಿದೇವರ ಸಹಕಾರ ಸಂಘದ ಅಧ್ಯಕ್ಷ ಮೋಹನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ