ಅರಣ್ಯದಂಚಿನ ಗ್ರಾಮಗಳ ಜಾನುವಾರುಗಳಿಗೆ ಲಸಿಕೆ
Team Udayavani, Oct 16, 2021, 12:38 PM IST
ಹುಣಸೂರು: ನಾಗರಹೊಳೆ ಉದ್ಯಾನ ದಂಚಿನ ಗ್ರಾಮಗಳಲ್ಲಿ ಪಶು ವೈದ್ಯಕೀಯ ಇಲಾಖೆ, ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗ ಹಾಗೂ ಮೈಮುಲ್ ನೆರವಿನಿಂದ ಜಾನುವಾರುಗಳಿಗೆ ಕಾಲು-ಬಾಯಿ ಜ್ವರದ ಲಸಿಕೆ ನೀಡುವ ಕಾರ್ಯಕ್ಕೆ ಉಡುವೆಪುರದಲ್ಲಿ ಚಾಲನೆ ನೀಡಲಾಯಿತು. ಈ ಗ್ರಾಮದಲ್ಲಿ ಅತಿ ಹೆಚ್ಚು ಪ್ರಕರಣಗಳು ಕಂಡು ಬಂದಿವೆ.
ಹನಗೋಡು ಪಶು ಆಸ್ಪತ್ರೆ ವೈದ್ಯ ಡಾ| ದರ್ಶನ್ ನೇತೃತ್ವದಲ್ಲಿ ಸಿಬ್ಬಂದಿ ರಾಸುಗಳಿಗೆ ಲಸಿಕೆ ನೀಡುವ ಮೂಲಕ ರೈತರಿಗೆ ಆರೋಗ್ಯ ಮಾಹಿತಿ ನೀಡಿದರು. ಸರ್ಕಾರ ದಿಂದ ಲಸಿಕೆ ಬಾರದ ಹಿನ್ನೆಲೆಯಲ್ಲಿ ನಾಗರಹೊಳೆ ಹುಲಿ ಯೋಜನೆ ಹಾಗೂ ಮೈಮುಲ್ನ ಹಾಲು ಉತ್ಪಾದಕರ ಸಹಕಾರ ಸಂಘಗಳ ಮೂಲಕ ಲಸಿಕೆ ಒದಗಿಸಲಾಗಿದೆ.
ಆದ್ಯತೆ ಮೇರೆಗೆ ನಾಗರಹೊಳೆ ಉದ್ಯಾನ ದಂಚಿನ ಉಡುವೆಪುರ, ನೇರಳಕುಪ್ಪೆ, ಬಿಲ್ಲೇನಹೊಸಹಳ್ಳಿ, ಕಾಳಬೂಚನಹಳ್ಳಿ, ಕಚುವಿನಹಳ್ಳಿ, ಕಡೇಮನುಗನಹಳ್ಳಿ, ಸಿಂಡೇನಹಳ್ಳಿ ಮತ್ತಿತರ ಗ್ರಾಮಗಳಲ್ಲಿ ಲಸಿಕೆ ಪಶುವೈದ್ಯರು ನೀಡಿದರು. ಈ ಭಾಗದಲ್ಲಿ ನಿತ್ಯವೂ ಲಸಿಕೆ ಹಾಕಲಾಗುವುದೆಂದು ವೈದ್ಯರು ತಿಳಿಸಿದ್ದಾರೆ. ಲಸಿಕೆ ನೀಡುವ ವೇಳೆ ಅರಣ್ಯ ಸಿಬ್ಬಂದಿ ಹಾಗೂ ಡೇರಿ ಕಾರ್ಯದರ್ಶಿಗಳು ಉಪಸ್ಥಿತರಿ ದ್ದರು. ಉದಯವಾಣಿಯಲ್ಲಿ ಅ.10ರಂದು ತಾಲೂಕಿನಲ್ಲಿ ಕಾಲುಬಾಯಿ ಜ್ವರ ಉಲ್ಬಣ ಗೊಂಡಿರುವ ಕುರಿತು ಸಮಗ್ರ ವರದಿ ಪ್ರಕಟಿಸಿ ಬೆಳಕು ಚೆಲ್ಲಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?