ಲೆಕ್ಕ ಕೊಡದಿದ್ದರೆ ಬಿಡುವವರು ಯಾರು: ಸಿದ್ದರಾಮಯ್ಯ


Team Udayavani, Jul 9, 2020, 5:21 AM IST

lekka-sidhu

ಮೈಸೂರು: ರಾಜ್ಯ ಸರ್ಕಾರ ಕೋವಿಡ್‌ 19 ಸಮಯದಲ್ಲಿ ವೆಚ್ಚ ಮಾಡಿರುವ ಹಣದ ಲೆಕ್ಕ ಕೊಡಬೇಕು. ಕೊಡದಿದ್ದರೆ ಬಿಡುವವರು ಯಾರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವಿರುದ್ದ ಗುಡುಗಿದರು.  ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಸರ್ಕಾರ ಪಾರದರ್ಶಕ ವಾಗಿ ಕೆಲಸ ಮಾಡುತ್ತಿಲ್ಲ. ಕೋವಿಡ್‌ 19 ಸೋಂಕು ಹರಡುವುದನ್ನು ತಪ್ಪಿಸಲು ವೆಚ್ಚ ಮಾಡಿರುವ ಹಣದ ಲೆಕ್ಕ ಕೊಡಬೇಕು. ಅವರು ತಪ್ಪು  ಮಾಡದಿದ್ದರೆ ಅವರಿಗೆ ಭಯ ಏಕೆ? ಅಧಿಕಾರಿಗಳ ಬಳಿ ಸೂಕ್ತ ದಾಖಲೆಗಳನ್ನು ಕಳುಹಿಸಿ ಕೊಡಲಿ. ಇಲ್ಲವಾದರೆ ಅವರು ಭ್ರಷ್ಟಾಚಾರ ಒಪ್ಪಿಕೊಂಡಂತೆ ಎಂದು ಹೇಳಿದರು.

ಹೆಚ್ಚು ಟೆಸ್ಟ್‌ ಮಾಡುತ್ತಿಲ್ಲ: ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೆಚ್ಚು ಜನರಿಗೆ ಪರೀಕ್ಷೆ ಮಾಡಿದರೆ ಹೆಚ್ಚು ಪಾಸಿಟಿವ್‌ ಪ್ರಕರಣಗಳು ಕಾಣಿಸಿಕೊಳ್ಳುತ್ತವೆ. ಆದರೆ, ಅಲ್ಲಿ ಹೆಚ್ಚು ಪರೀಕ್ಷೆಗಳನ್ನು ಮಾಡುತ್ತಿಲ್ಲ. ಸರ್ಕಾರ  ಕೋವಿಡ್‌ 19 ನಿಯಂತ್ರಣದಲ್ಲಿ ಸೋತಿದೆ. ರಾಜ್ಯ ಸರ್ಕಾರ ಜನರಿಗೆ ಬೆಂಗಳೂರು ಬಿಟ್ಟು ಹೋಗಬೇಡಿ ಎಂದು ಮನವಿ ಮಾಡಿಕೊಳ್ಳುತ್ತಿದೆ. ಆದರೆ ಅಂತಹ ವಾತಾವರಣ ನಿರ್ಮಾಣವಾಗಿಲ್ಲ. ಅವರಿಗೆ ಕೆಲಸ ಅಥವಾ ಹಣ ಕೊಡಬೇಕು,  ಮೂಲಸೌಕರ್ಯ ಸೇರಿದಂತೆ ಸೋಂಕಿನಿಂದ ಸುರಕ್ಷತೆ ಒದಗಿಸಬೇಕು. ಏನನ್ನೂ ಮಾಡದಿದ್ದರೆ ಜನರು ಬೆಂಗಳೂರು ಬಿಟ್ಟು ಹೋಗುತ್ತಾರೆ ಎಂದು ಹೇಳಿದರು.

ನಾನು ವಿಶ್ರಾಂತಿಗಷ್ಟೇ ಬಂದಿದ್ದೆ: ನಾನು ಮೈಸೂರಿನಲ್ಲಿದ್ದ ಮಾತ್ರಕ್ಕೆ ಕ್ವಾರೆಂಟೈನಲ್ಲಿದ್ದೇನೆ ಎಂದು ಕೆಲವರು ತಪ್ಪಾಗಿ ಅರ್ಥೈಸಿದ್ದಾರೆ. ಆದ್ದರಿಂದ ಬೆಂಗಳೂರಿಗೆ ಹೊರಡುತ್ತಿದ್ದೇನೆ. ನಾನು ಕೆಲವು ದಿನಗಳ ಕಾಲ ವಿಶ್ರಾಂತಿಗಾಗಿ ಬಂದಿದ್ದೆ  ಅಷ್ಟೆ. ಅದನ್ನು ಬಿಟ್ಟರೆ ಬೇರೆ ಯಾವ ಕಾರಣಗಳೂ ಇಲ್ಲ. ನಾನು ಕ್ವಾರೆಂಟೈನಲ್ಲಿ ಇದ್ದೆ ಎಂದುಕೊಳ್ಳಬೇಕಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಲಾಕ್‌ಡೌನ್‌ ಪ್ರಯೋಜನವೇನು?: ಕೇಂದ್ರ ಸರ್ಕಾರ ತಪ್ಪು ಸಮಯದಲ್ಲಿ ಲಾಕ್‌ ಡೌನ್‌ ಮಾಡಿದೆ. ಈಗ ಲಾಕ್‌ಡೌನ್‌ ಅವಶ್ಯಕತೆ ಇತ್ತು. ಈಗ ಆರ್ಥಿಕತೆಯ ನೆಪವೊಡ್ಡಿ ಲಾಕ್‌ ಡೌನ್‌ ಮಾಡುತ್ತಿಲ್ಲ. ಆರ್ಥಿಕತೆಗಿಂತ ಜೀವ ಮುಖ್ಯ.  ಮಾ.24ರಂದು ಭಾರತದಲ್ಲಿ 536 ಮಂದಿ ಸೋಂಕಿತರಿದ್ದರು. 10 ಜನರು ಮೃತರಾಗಿದ್ದರು. ಈಗ ಸೋಂಕಿತರ ಸಂಖ್ಯೆ 7 ಲಕ್ಷಕ್ಕೂ ಹೆಚ್ಚಿದೆ. ಮೃತರ ಸಂಖ್ಯೆಯೂ ಹೆಚ್ಚುತ್ತಿದೆ. ಲಾಕ್‌ಡೌನ್‌ ಮಾಡಿದ ಬಳಿಕ ನಮಗೆ ಆದ ಪ್ರಯೋಜನವಾದರೂ  ಏನು ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.