Jeera Water ; ಜೀರಿಗೆ ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಹಲವಾರು ಉಪಯೋಗವಿದೆ…


Team Udayavani, May 16, 2023, 5:25 PM IST

Jeera-water

ಈಗಿನ ಕಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಎಲ್ಲರ ಮುಖ್ಯ ಗುರಿಗಳಲ್ಲಿ ಒಂದು. ಅದಕ್ಕಾಗಿ ಹಲವರು ನಾನಾ ರೀತಿಯಾಗಿ ಪ್ರಯತ್ನಪಡುತ್ತಿರುತ್ತಾರೆ. ಅಂಥಹವರಿಗೊಂದು ಮುಖ್ಯ ಕಾಳು ಎಂದರೆ ಜೀರಿಗೆ.

ಜೀರಿಗೆ ನಮ್ಮ ಅಡುಗೆ ಮನೆಯಲ್ಲಿ ಸಿಗುವ ಸಾಮಾನ್ಯ ಕಾಳು ಎನಿಸಿದರೂ ಅದರ ಪ್ರಯೋಜನಗಳು ಹಲವಾರು ಎಂದೇ ಹೇಳಬಹುದು. ನಮ್ಮ ಪ್ರತಿನಿತ್ಯದ ಆಹಾರದಲ್ಲಿ ಬಳಕೆಯಾಗುವ ಜೀರಿಗೆ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಉಪಯೋಗವಾಗುವ ಕಾಳುಗಳಲ್ಲಿ ಒಂದು. ಬೆಳಿಗ್ಗೆ ಎದ್ದು ಖಾಲಿ ಹೊಟ್ಟೆಗೆ ಜೀರಿಗೆ ನೀರನ್ನು ಕುಡಿಯುವುದರಿಂದ ಹಲವು ಪ್ರಯೋಜನಗಳಿವೆ ಎಂದರೆ ತಪ್ಪಲ್ಲ.

ಖಾಲಿ ಹೊಟ್ಟೆಯಲ್ಲಿ ಏನೇ ಕುಡಿದರೂ ಅದು ನಮ್ಮ ಆರೋಗ್ಯಕ್ಕೆ ಹೆಚ್ಚಿನ ಲಾಭ ನೀಡುತ್ತದೆ.ಅದರಲ್ಲಿ ಜೀರಿಗೆ ನೀರು ಅಥವಾ ಜೀರಿಗೆ ಕಷಾಯ ಕೂಡಾ ಒಂದು. ಇದನ್ನು ಯಾವ ರೀತಿ ತಯಾರಿಸುವುದು ಎಂದು ಪ್ರಾರಂಭದಲ್ಲಿ ತಿಳಿದುಕೊಳ್ಳೋಣ.

ಒಂದು ಕಪ್ ನೀರಿನಲ್ಲಿ 1 ಟೀ ಚಮಚ ಜೀರಿಗೆ ಹಾಕಿ ರಾತ್ರಿಯಿಡೀ ನೆನೆಸಿ. ಬೆಳಿಗ್ಗೆ 5 ನಿಮಿಷಗಳ ಕಾಲ ಇದನ್ನು ಕುದಿಸಿ, ಸೋಸಿ ನಂತರ ಕುಡಿಯಿರಿ. ಅಥವಾ ಜೀರಿಗೆ ನೆನೆಸಿಟ್ಟ ನೀರನ್ನು ಹಾಗೇಯೆ ಕುದಿಸದೆಯೂ ಕುಡಿಯಬಹುದು.

ಜೀರಿಗೆ ನೀರಿಗೆ ಬೇಕಾದರೆ ಜೇನುತುಪ್ಪ ಸೇರಿಸಬಹುದು. ಉತ್ತಮ ಫಲಿತಾಂಶಕ್ಕಾಗಿ ಜೀರಿಗೆ ನೀರನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವುದು ಉತ್ತಮ.

ಜೀರಿಗೆ ನೀರು ಅಥವಾ ಜೀರಿಗೆ ಕಷಾಯ ಕುಡಿದರೆ ದೇಹವು ತಂಪಾಗಿರುತ್ತದೆ ಮತ್ತು ಇದು ದೇಹದಲ್ಲಿ ಉಷ್ಣತೆಯನ್ನು ಕಾಪಾಡಲು ನೆರವಾಗುತ್ತದೆ. ಆಯುರ್ವೇದದಲ್ಲಿ ಕೂಡ ಜಲಜೀರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಇದರಲ್ಲಿ ಇರುವಂತಹ ದೇಹವನ್ನು ತಂಪಾಗಿಸುವ ಗುಣವೇ ಇದಕ್ಕೆ ಕಾರಣ. ಇದು ಹಲವಾರು ಆರೋಗ್ಯ ಸಮಸ್ಯೆಗಳಿಗೆ ನೈಸರ್ಗಿಕ ಪರಿಹಾರ ಕೂಡಾ ಹೌದು.

ಜೀರಿಗೆಯ ಇತರ ಉಪಯೋಗಗಳು ಏನೆಂದರೆ..

ಜೀರ್ಣಕ್ರಿಯೆ ಸುಧಾರಣೆ :

ಜೀರಿಗೆ ನೀರು ಹೊಟ್ಟೆಯ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಆಹಾರಗಳಲ್ಲಿ ಒಂದು. ಇದು  ಹಲವಾರು ಜೀರ್ಣಕ್ರಿಯೆ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಹೊಟ್ಟೆಯುಬ್ಬರ, ಮಲಬದ್ಧತೆ ಅಥವಾ ವಾಕರಿಕೆಯಂಥ ಸಮಸ್ಯೆಗಳಿಗೆ ಪರಿಣಾಮಕಾರಿ ಮನೆ ಮದ್ದು ಈ ಜೀರಿಗೆ ಕಷಾಯ.

ತೂಕ ಇಳಿಸಲು:

ಖಾಲಿ ಹೊಟ್ಟೆಗೆ ಜೀರಿಗೆ ನೀರು ಕುಡಿದರೆ ತೂಕ ಇಳಿಸಲು ತುಂಬಾ ಸಹಕಾರಿ. ಯಾಕೆಂದರೆ ಇದರಲ್ಲಿ ಆಹಾರದ ನಾರಿನಾಂಶವು ಹೆಚ್ಚಾಗಿದೆ ಮತ್ತು ಜೀರ್ಣಕ್ರಿಯೆ ವ್ಯವಸ್ಥೆಯು ಸರಾಗವಾಗಿ ಆಗಲು ನೆರವಾಗುತ್ತದೆ. ಜೀರಿಗೆಯಲ್ಲಿ ಕ್ಯಾಲರಿ ಕಡಿಮೆ ಇರುವುದರಿಂದ ತೂಕ ಇಳಿಕೆಗೆ ಸಹಾಯ ಮಾಡುತ್ತದೆ. ತೂಕ ಇಳಿಸಲು ಜೀರಿಗೆ ನೀರು ಸೇವಿಸಲು ಸರಿಯಾದ ಸಮಯ, ಬೆಳಗ್ಗೆ ಖಾಲಿ ಹೊಟ್ಟೆಗೆ ಎನ್ನಲಾಗುತ್ತದೆ.

ತಾಯಿಗೆ ಎದೆಹಾಲು ವೃದ್ಧಿಸಲು ಸಹಕಾರಿ:

ಜೀರಿಗೆಯಲ್ಲಿ ಕಬ್ಬಿಣಾಂಶ ಹೆಚ್ಚಾಗಿರುವುದರಿಂದ ಗರ್ಭಿಣಿ ಮತ್ತು ಬಾಣಂತಿಯರಿಗೆ ಜೀರಿಗೆ ನೀರು ಆರೋಗ್ಯಕರ ಪಾನೀಯ. ಈ ನೀರು ಕುಡಿಯುವುದರಿಂದ ತಾಯಿಯ ಎದೆಹಾಲು ವೃದ್ಧಿಯಗಲು ಸಹಾಯ ಮಾಡುತ್ತದೆ. ಮಗುವಿಗೆ ಅಗತ್ಯವಿರುವ ಎಲ್ಲಾ ಪೋಷಕಾಂಶ ದೊರೆಯಲು ಜೀರಿಗೆ ನೀರು ಸಹಾಯ ಮಾಡುತ್ತದೆ.

ಮುಖದ ಸುಕ್ಕು ನಿವಾರಣೆ:

ಜೀರಿಗೆ ನೀರಿನಲ್ಲಿ ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಮ್ಯಾಂಗನೀಸ್ ಖನಿಜಗಳು ಸಮೃದ್ಧವಾಗಿವೆ. ಇದು ಚರ್ಮದ ಕಾಂತಿ ಹೆಚ್ಚಳವಾಗಲು ಸಹಾಯ ಮಾಡುತ್ತದೆ. ಇದರಲ್ಲಿ ವಿಟಮಿನ್‌ ಇ ಅಂಶ ಇರುವುದರಿಂದ ಚರ್ಮಕ್ಕೆ ಹೊಳಪು ನೀಡಲು ಸಹಾಯ ಮಾಡುತ್ತದೆ. ನಿತ್ಯ ತಪ್ಪದೆ ಕುದಿಸಿದ ಜೀರಿಗೆ ನೀರನ್ನು ಕುಡಿಯುತ್ತ ಬಂದರೆ ಮುಖದಲ್ಲಿನ ಸುಕ್ಕುಗಳು ನಿವಾರಣೆಯಾಗುತ್ತದೆ.

ರೋಗ ನಿರೋಧಕ ಶಕ್ತಿ ವೃದ್ಧಿ:

ಜೀರಿಗೆ ಜೀರ್ಣಕ್ರಿಯೆ ವ್ಯವಸ್ಥೆಯನ್ನು ಆರೋಗ್ಯವಾಗಿಡುವುದರೊಂದಿಗೆ ಪ್ರತಿರೋಧಕ ಶಕ್ತಿ ವೃದ್ಧಿಸುತ್ತದೆ. ಜೀರಿಗೆಯಲ್ಲಿ ಹೆಚ್ಚಿನ ಮಟ್ಟದ ವಿಟಮಿನ್ ಎ ಮತ್ತು ಸಿ ಇದೆ. ಇವುಗಳು ರೋಗನಿರೋಧಕಗಳಾಗಿ ಕೆಲಸ ಮಾಡಿ ಸೋಂಕಿನ ವಿರುದ್ಧ ಹೋರಾಡಲು ಸಹಕಾರಿಯಾಗಿದೆ.

ಚಯಾಪಚಯ ಹೆಚ್ಚಿಸುತ್ತದೆ:

ಜೀರಿಗೆ ನೀರು ಚಯಾಪಚಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಹೀಗಾಗಿ, ಜೀರಾ ನೀರು ತೂಕ ನಷ್ಟಕ್ಕೆ ಪ್ರಯೋಜನಕಾರಿ ಎಂದು ಸಾಬೀತಾಗಿದೆ. ಏಕೆಂದರೆ ಇದು ಕ್ಯಾಲೋರಿ ಕಡಿಮೆ ಮಾಡುವ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ. ಒಂದು ಟೀ ಚಮಚ ಜೀರಿಗೆ 7-8 ಕ್ಯಾಲೋರಿಗಳನ್ನು ಹೊಂದಿರುತ್ತದೆ.

*ಕಾವ್ಯಶ್ರೀ

ಟಾಪ್ ನ್ಯೂಸ್

1-dsad

Odisha ಭೀಕರ ರೈಲು ಅವಘಡ; ಕನಿಷ್ಠ 50 ಮೃತ್ಯು, 350ಕ್ಕೂ ಹೆಚ್ಚು ಮಂದಿಗೆ ಗಾಯ

HDK

ಸಿದ್ದರಾಮಯ್ಯ ಯುವಕರ ಹಣೆಗೆ ತುಪ್ಪ ಸವರಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

1-dsasa

WFI ಬ್ರಿಜ್ ಭೂಷಣ್ ಬಂಧಿಸಲು ಗಡುವು ವಿಧಿಸಿದ ಖಾಪ್ ಮಹಾಪಂಚಾಯತ್

imran-khan

Pakistan ಇಮ್ರಾನ್ ಖಾನ್‌ಗೆ ಭಯೋತ್ಪಾದನಾ ನಿಗ್ರಹ ನ್ಯಾಯಾಲಯದಿಂದ ಜಾಮೀನು

1-SADSAASD

Nithin Gopi: 39 ರ ಹರೆಯದಲ್ಲೇ ನಟ ನಿತಿನ್​ ಗೋಪಿ ವಿಧಿವಶ

1-sdasdasd

Congress Guarantee ನನ್ನ ಹೆಂಡತಿಗೂ ಸಿಗುತ್ತೆ ರೀ; ಸಿದ್ದರಾಮಯ್ಯ ಹಾಸ್ಯ ಚಟಾಕಿ

1-sadasd

Congress Guarantee ”ಅಕ್ಕಿ ನಿಮ್ದು, ಚೀಲ ನಮ್ದು”: ಬಿಜೆಪಿ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

big takeaways of ipl 2023

ತವರಿನ ಲಾಭವಿಲ್ಲ, ಟಾಸ್ ಗೆದ್ದು ಫೀಲ್ಡಿಂಗ್ ಮಾಡಬೇಕಿಲ್ಲ…: ಇದು 2023ರ IPL ವಿಶೇಷತೆ

web-lips

Beauty Tips: ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು….

Non-vegetarian Recipes; ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್‌ ಘೀ ರೋಸ್ಟ್‌…

Non-vegetarian Recipes; ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್‌ ಘೀ ರೋಸ್ಟ್‌…

sun-screen-lotion

Health Tips: ಬೇಸಿಗೆಯಲ್ಲಿ ತ್ವಚೆಯನ್ನು ರಕ್ಷಿಸಿಕೊಳ್ಳಲು ಈ ಲೋಷನ್ ಬಳಸಿ..

ಯಾವ ರಾಜನಿಂದಲೂ ವಶಪಡಿಸಿಕೊಳ್ಳಲು ಸಾಧ್ಯವಾಗದ ಜಂಜೀರಾ ಕೋಟೆ ಬಗ್ಗೆ ಗೊತ್ತಾ?

Fort;ಯಾವ ರಾಜನಿಂದಲೂ ವಶಪಡಿಸಿಕೊಳ್ಳಲು ಸಾಧ್ಯವಾಗದ ಜಂಜೀರಾ ಕೋಟೆ ಬಗ್ಗೆ ಗೊತ್ತಾ?

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

12-sadsad

Davanagere ವೃದ್ಧರೊಬ್ಬನ್ನು ಅಪಹರಿಸಿ ಭಾರಿ ಹಣಕ್ಕೆ ಬೇಡಿಕೆ; ಐವರ ಬಂಧನ

1-sddasd

SNM ಪಾಲಿಟೆಕ್ನಿಕ್ NSS ನವರಿಂದ ಬಡವರ ಮನೆಗಳಿಗೆ ಕಾಯಕಲ್ಪ

1-wewqewq

Amazon ಫ್ಯಾಷನ್‌ನಿಂದ ವಾರ್ಡ್‌ರೋಬ್‌ ರಿಫ್ರೆಶ್‌ ಸೇಲ್‌ ಆರಂಭ

1-dsad

Odisha ಭೀಕರ ರೈಲು ಅವಘಡ; ಕನಿಷ್ಠ 50 ಮೃತ್ಯು, 350ಕ್ಕೂ ಹೆಚ್ಚು ಮಂದಿಗೆ ಗಾಯ

1-qwwqeqwe

Mahalingpur ಗಾಳಿ ಮಳೆಗೆ ವ್ಯಾಪಕ ನಷ್ಟ; ಹಲವು ಮನೆಗಳಿಗೆ ಹಾನಿ, ಪರದಾಟ