ದ್ವಿದಳ ಧಾನ್ಯ ಉತ್ಪಾದನೆಯಲ್ಲಿ ಉತ್ತಮ ಅಭಿವೃದ್ಧಿ ಕಾಣಲು ಕೃಷಿ ಇಲಾಖೆಯಿಂದ ಹೊಸ ತಂತ್ರಜ್ಞಾನ

New technology in agricultural field

Team Udayavani, Sep 17, 2020, 3:31 PM IST

ದ್ವಿದಳ ಧಾನ್ಯ ಉತ್ಪಾದನೆಯಲ್ಲಿ ಉತ್ತಮ ಅಭಿವೃದ್ಧಿ ಕಾಣಲು ಕೃಷಿ ಇಲಾಖೆಯಿಂದ ಹೊಸ ತಂತ್ರಜ್ಞಾನ

ಬಾಗಲಕೋಟೆ: ದ್ವಿದಳ ಧಾನ್ಯಗಳ ಉತ್ಪಾದನೆಯಲ್ಲಿ ನಮ್ಮ ರೈತರು ಹೊಸ ಕೃಷಿ ವಿಜ್ಞಾನ ಹಾಗೂ ತಂತ್ರಜ್ಞಾನ ಅಳವಡಿಸಿಕೊಳ್ಳಲು ಹೊಸ ತಂತ್ರಜ್ಞಾನವೊಂದು ಬಂದಿದೆ.

ಇಡೀ ದೇಶದ ದ್ವಿದಳ ಧಾನ್ಯಗಳ ಉತ್ಪಾದನೆಯಲ್ಲಿ ಕರ್ನಾಟಕವೂ ಮುಂಚೂಣಿ ಪಟ್ಟಿಯಲ್ಲಿರುವುದರಿಂದ ನಮ್ಮ ರಾಜ್ಯವೂ ದೇಶವನ್ನು ದ್ವಿದಳ ಧಾನ್ಯಗಳ ಉತ್ಪಾದನೆಯಲ್ಲಿ ಸ್ವಪರ್ಯಾಪ್ತತೆ ದೊರಕಿಸಿಕೊಡಲು ಮುಖ್ಯ ಪಾತ್ರ ವಹಿಸಬಹುದು. ಈ ವಾಸ್ತವ ಮನಗಂಡು ಬಾಗಲಕೋಟೆ ಕೃಷಿ ಇಲಾಖೆಯು ಜಿಲ್ಲೆಯ ರೈತರ ತೊಗರಿ ಬೆಳೆಯ ಉತ್ಪತ್ತಿಯಲ್ಲಿ ಗಣನೀಯ ಅಭಿವೃದ್ಧಿ ಕಾಣಬಹುದಾದ ತಂತ್ರಜ್ಞಾನ ರೈತರಿಗೆ ಪರಿಚಯಿಸಲು ಮುಂದಾಗಿದೆ.

ಜಿಲ್ಲೆಯ ಕೃಷಿ ಇಲಾಖೆ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಡಿಎಂಎಸಿ (ಹನಿಯಿಂದ ಮಾರುಕಟ್ಟೆಗೆ ಕೃಷಿ ಮಾರ್ಗ) ಎಂಬ ಯೋಜನೆಯಡಿ ತೊಗರಿ ಬೆಳೆ ಕುಡಿ ಚಿವುಟುವ ಯಂತ್ರ ಪರಿಚಯಿಸಲಾಗಿದ್ದು, ಸುಮಾರು 30ಕ್ಕಿಂತ ಹೆಚ್ಚು ರೈತರು ಈಗಾಗಲೇ ಇದರ ಉಪಯೋಗ ಪಡೆದಿದ್ದಾರೆ.

ಇದನ್ನೂ ಓದಿ:ಟೀ ಸ್ಟಾಲ್‌ಗೆ ಸುಧಾಮೂರ್ತಿ ಅಮ್ಮ ಎಂದು ಹೆಸರು : ಮಾಲೀಕನಿಗೆ ಕರೆ ಮಾಡಿದ ಸುಧಾಮೂರ್ತಿ

ಕುಡಿ ಚಿವುಟುವುದು ಅಥವಾ ನಿಪ್ಪಿಂಗ್‌ ಎಂದು ಕರೆಯಲ್ಪಡುವ ಈ ಕ್ರಿಯೆ ದ್ವಿದಳ ಧಾನ್ಯಗಳು, ಹಾಗೂ ಇತರ ಮುಂಗಾರು ಬೆಳೆಗಳನ್ನು ಬಿತ್ತನೆ ಮಾಡಿದ 40 ರಿಂದ 50 ದಿನಗಳಲ್ಲಿ ಬೆಳೆಯ ಮೇಲ್ಭಾಗದ ಕುಡಿಯನ್ನು 5-8 ಸೆಂ.ಮೀದಷ್ಟು ಚಿವುಟುವುದಾಗಿದೆ. ಕುಡಿ ಚಿವುಟುವುದರಿಂದ ಈ ಬೆಳೆಗಳು ಎತ್ತರಕ್ಕೆ ಬೆಳೆಯುವುದು ಕುಂಠಿತವಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಕವಲೊಡೆಯಲು ಸಹಕಾರಿಯಾಗುತ್ತದೆ. ಇದರಿಂದ ಕಾಯಿಗಳ ಸಂಖ್ಯೆ ಹೆಚ್ಚಾಗಿ, ಇಳುವರಿ ಹೆಚ್ಚಾಗುತ್ತದೆ. ಮಾತ್ರವಲ್ಲದೇ ಬೆಳೆ ಎತ್ತರಕ್ಕೆ ಬೆಳೆಯುವು ಹತೋಟಿಗೆ ಬರುವುದರಿಂದ ಔಷಧಿ ಸಿಂಪಡಿಸಲು ಅನುಕೂಲವಾಗುತ್ತದೆ.

ಇದರೊಂದಿಗೆ, ದ್ವಿದಳ ಧಾನ್ಯಗಳು ತಮ್ಮ ಬೇರು ಗಂಟುಗಳಲ್ಲಿ ರೈಜೋಬಿಯಂ ಬ್ಯಾಕ್ಟೀರಿಯಾ ಮೂಲಕ ಸಂಗ್ರಹಿಸಿಡುವ ಸಸಾರಜನಕವನ್ನು ಕುಡಿ ಚಿವುಟಿದ ನಂತರವಿರುವ ಎಲೆಗಳಿಗಷ್ಟೇ ಪೂರೈಕೆ ಮಾಡುವುದರಿಂದ ಹೂ, ಮೊಗ್ಗು, ಕಾಯಿ ಬಿಡುವುದನ್ನು ಇದು ಉತ್ತೇಜಿಸುತ್ತದೆ. ಇದರಿಂದ, ರೈತರ ಇಳುವರಿ ಗಣನೀಯವಾಗಿ ಹೆಚ್ಚಾಗುತ್ತದೆ. ಕುಡಿ ಚಿವುಟುವುದರೊಂದಿಗೆ ಬೆಳೆಗೆ ಅತ್ಯವಶ್ಯಕವಿರುವ ಸೂಕ್ಷ್ಮ ಪೋಷಕಾಂಶ ಸಿಂಪಡಿಸುವುದರಿಂದ, ಪ್ರತಿ ಹೆಕ್ಟೇರ್‌ಗೆ ಶೇ.40 ರಿಂದ 50 ಹೆಚ್ಚಿನ ಉತ್ಪಾದನೆ ಕಾಣಬಹುದು ಎಂದು ಡಿಎಂಎಸಿ ಯೋಜನೆ ಮುಖ್ಯಸ್ಥ ಸುರೇಶ್‌ ತಿಳಿಸಿದ್ದಾರೆ.

ಇದನ್ನೂ ಓದಿ:ಅಧಿವೇಶನಕ್ಕೆ ಮೊದಲೇ ಸಂಪುಟ ವಿಸ್ತರಣೆ ಬಯಕೆ: ಸಿಎಂ ಯಡಿಯೂರಪ್ಪ

ಡಿಎಂಎಸಿ ಯೋಜನೆ ಸಹಯೋಗದೊಂದಿಗೆ ಹಾಗೂ ಪ್ರಗತಿಪರ ರೈತರ ಮುಂದಾಳತ್ವದೊಂದಿಗೆ ಅಮರಾವತಿಯಲ್ಲಿ ಪ್ರಾರಂಭವಾಗಿರುವ ಅಮೃತ ರೈತ ಉತ್ಪಾದಕ ಕಂಪನಿ ಮೂಲಕ ರೈತರಿಗೆ ಅನುಕೂಲವಾಗಲು ಕುಡಿ ಚಿವುಟುವ ಯಂತ್ರ ಅತ್ಯಲ್ಪ ಬಾಡಿಗೆಗೆ ದೊರಕಿಸಿಕೊಡಲಾಗುತ್ತಿದೆ. ರೈತರು ಇದರ ಸದುಪಯೋಗಪಡೆದುಕೊಳ್ಳಬೇಕೆಂ ದು ಡಿಎಂಎಸಿ ಯೋಜನೆ ವ್ಯವಸ್ಥಾಪಕ ಶಿವಪ್ರಕಾಶ್‌ ತಿಳಿಸಿದ್ದಾರೆ.

ಕುಡಿ ಚಿವುಟುವುದರ ಪ್ರಾಮುಖ್ಯತೆ ಹಾಗೂ ಕುಡಿ ಚಿವುಟುವ ಯಂತ್ರದ ಬಳಕೆ ಬಗ್ಗೆಯೂ ರೈತರಲ್ಲಿ ಅರಿವು ಮೂಡಿಸಲು ಡಿಎಂಎಸಿ ತಂಡವು ದೂರವಾಣಿ ಮೂಲಕ ಧ್ವನಿ ಸಂದೇಶ, ಪ್ರಾತ್ಯಕ್ಷಿಕೆ ಮುಂತಾದ ಜಾಗ್ರತಾ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ ಎಂದು ಕೃಷಿ ಜಂಟಿ ನಿರ್ದೇಶಕಿ ಚೇತನಾ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.