Jeera Water ; ಜೀರಿಗೆ ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಹಲವಾರು ಉಪಯೋಗವಿದೆ…


Team Udayavani, May 16, 2023, 5:25 PM IST

Jeera-water

ಈಗಿನ ಕಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಎಲ್ಲರ ಮುಖ್ಯ ಗುರಿಗಳಲ್ಲಿ ಒಂದು. ಅದಕ್ಕಾಗಿ ಹಲವರು ನಾನಾ ರೀತಿಯಾಗಿ ಪ್ರಯತ್ನಪಡುತ್ತಿರುತ್ತಾರೆ. ಅಂಥಹವರಿಗೊಂದು ಮುಖ್ಯ ಕಾಳು ಎಂದರೆ ಜೀರಿಗೆ.

ಜೀರಿಗೆ ನಮ್ಮ ಅಡುಗೆ ಮನೆಯಲ್ಲಿ ಸಿಗುವ ಸಾಮಾನ್ಯ ಕಾಳು ಎನಿಸಿದರೂ ಅದರ ಪ್ರಯೋಜನಗಳು ಹಲವಾರು ಎಂದೇ ಹೇಳಬಹುದು. ನಮ್ಮ ಪ್ರತಿನಿತ್ಯದ ಆಹಾರದಲ್ಲಿ ಬಳಕೆಯಾಗುವ ಜೀರಿಗೆ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಉಪಯೋಗವಾಗುವ ಕಾಳುಗಳಲ್ಲಿ ಒಂದು. ಬೆಳಿಗ್ಗೆ ಎದ್ದು ಖಾಲಿ ಹೊಟ್ಟೆಗೆ ಜೀರಿಗೆ ನೀರನ್ನು ಕುಡಿಯುವುದರಿಂದ ಹಲವು ಪ್ರಯೋಜನಗಳಿವೆ ಎಂದರೆ ತಪ್ಪಲ್ಲ.

ಖಾಲಿ ಹೊಟ್ಟೆಯಲ್ಲಿ ಏನೇ ಕುಡಿದರೂ ಅದು ನಮ್ಮ ಆರೋಗ್ಯಕ್ಕೆ ಹೆಚ್ಚಿನ ಲಾಭ ನೀಡುತ್ತದೆ.ಅದರಲ್ಲಿ ಜೀರಿಗೆ ನೀರು ಅಥವಾ ಜೀರಿಗೆ ಕಷಾಯ ಕೂಡಾ ಒಂದು. ಇದನ್ನು ಯಾವ ರೀತಿ ತಯಾರಿಸುವುದು ಎಂದು ಪ್ರಾರಂಭದಲ್ಲಿ ತಿಳಿದುಕೊಳ್ಳೋಣ.

ಒಂದು ಕಪ್ ನೀರಿನಲ್ಲಿ 1 ಟೀ ಚಮಚ ಜೀರಿಗೆ ಹಾಕಿ ರಾತ್ರಿಯಿಡೀ ನೆನೆಸಿ. ಬೆಳಿಗ್ಗೆ 5 ನಿಮಿಷಗಳ ಕಾಲ ಇದನ್ನು ಕುದಿಸಿ, ಸೋಸಿ ನಂತರ ಕುಡಿಯಿರಿ. ಅಥವಾ ಜೀರಿಗೆ ನೆನೆಸಿಟ್ಟ ನೀರನ್ನು ಹಾಗೇಯೆ ಕುದಿಸದೆಯೂ ಕುಡಿಯಬಹುದು.

ಜೀರಿಗೆ ನೀರಿಗೆ ಬೇಕಾದರೆ ಜೇನುತುಪ್ಪ ಸೇರಿಸಬಹುದು. ಉತ್ತಮ ಫಲಿತಾಂಶಕ್ಕಾಗಿ ಜೀರಿಗೆ ನೀರನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವುದು ಉತ್ತಮ.

ಜೀರಿಗೆ ನೀರು ಅಥವಾ ಜೀರಿಗೆ ಕಷಾಯ ಕುಡಿದರೆ ದೇಹವು ತಂಪಾಗಿರುತ್ತದೆ ಮತ್ತು ಇದು ದೇಹದಲ್ಲಿ ಉಷ್ಣತೆಯನ್ನು ಕಾಪಾಡಲು ನೆರವಾಗುತ್ತದೆ. ಆಯುರ್ವೇದದಲ್ಲಿ ಕೂಡ ಜಲಜೀರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಇದರಲ್ಲಿ ಇರುವಂತಹ ದೇಹವನ್ನು ತಂಪಾಗಿಸುವ ಗುಣವೇ ಇದಕ್ಕೆ ಕಾರಣ. ಇದು ಹಲವಾರು ಆರೋಗ್ಯ ಸಮಸ್ಯೆಗಳಿಗೆ ನೈಸರ್ಗಿಕ ಪರಿಹಾರ ಕೂಡಾ ಹೌದು.

ಜೀರಿಗೆಯ ಇತರ ಉಪಯೋಗಗಳು ಏನೆಂದರೆ..

ಜೀರ್ಣಕ್ರಿಯೆ ಸುಧಾರಣೆ :

ಜೀರಿಗೆ ನೀರು ಹೊಟ್ಟೆಯ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಆಹಾರಗಳಲ್ಲಿ ಒಂದು. ಇದು  ಹಲವಾರು ಜೀರ್ಣಕ್ರಿಯೆ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಹೊಟ್ಟೆಯುಬ್ಬರ, ಮಲಬದ್ಧತೆ ಅಥವಾ ವಾಕರಿಕೆಯಂಥ ಸಮಸ್ಯೆಗಳಿಗೆ ಪರಿಣಾಮಕಾರಿ ಮನೆ ಮದ್ದು ಈ ಜೀರಿಗೆ ಕಷಾಯ.

ತೂಕ ಇಳಿಸಲು:

ಖಾಲಿ ಹೊಟ್ಟೆಗೆ ಜೀರಿಗೆ ನೀರು ಕುಡಿದರೆ ತೂಕ ಇಳಿಸಲು ತುಂಬಾ ಸಹಕಾರಿ. ಯಾಕೆಂದರೆ ಇದರಲ್ಲಿ ಆಹಾರದ ನಾರಿನಾಂಶವು ಹೆಚ್ಚಾಗಿದೆ ಮತ್ತು ಜೀರ್ಣಕ್ರಿಯೆ ವ್ಯವಸ್ಥೆಯು ಸರಾಗವಾಗಿ ಆಗಲು ನೆರವಾಗುತ್ತದೆ. ಜೀರಿಗೆಯಲ್ಲಿ ಕ್ಯಾಲರಿ ಕಡಿಮೆ ಇರುವುದರಿಂದ ತೂಕ ಇಳಿಕೆಗೆ ಸಹಾಯ ಮಾಡುತ್ತದೆ. ತೂಕ ಇಳಿಸಲು ಜೀರಿಗೆ ನೀರು ಸೇವಿಸಲು ಸರಿಯಾದ ಸಮಯ, ಬೆಳಗ್ಗೆ ಖಾಲಿ ಹೊಟ್ಟೆಗೆ ಎನ್ನಲಾಗುತ್ತದೆ.

ತಾಯಿಗೆ ಎದೆಹಾಲು ವೃದ್ಧಿಸಲು ಸಹಕಾರಿ:

ಜೀರಿಗೆಯಲ್ಲಿ ಕಬ್ಬಿಣಾಂಶ ಹೆಚ್ಚಾಗಿರುವುದರಿಂದ ಗರ್ಭಿಣಿ ಮತ್ತು ಬಾಣಂತಿಯರಿಗೆ ಜೀರಿಗೆ ನೀರು ಆರೋಗ್ಯಕರ ಪಾನೀಯ. ಈ ನೀರು ಕುಡಿಯುವುದರಿಂದ ತಾಯಿಯ ಎದೆಹಾಲು ವೃದ್ಧಿಯಗಲು ಸಹಾಯ ಮಾಡುತ್ತದೆ. ಮಗುವಿಗೆ ಅಗತ್ಯವಿರುವ ಎಲ್ಲಾ ಪೋಷಕಾಂಶ ದೊರೆಯಲು ಜೀರಿಗೆ ನೀರು ಸಹಾಯ ಮಾಡುತ್ತದೆ.

ಮುಖದ ಸುಕ್ಕು ನಿವಾರಣೆ:

ಜೀರಿಗೆ ನೀರಿನಲ್ಲಿ ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಮ್ಯಾಂಗನೀಸ್ ಖನಿಜಗಳು ಸಮೃದ್ಧವಾಗಿವೆ. ಇದು ಚರ್ಮದ ಕಾಂತಿ ಹೆಚ್ಚಳವಾಗಲು ಸಹಾಯ ಮಾಡುತ್ತದೆ. ಇದರಲ್ಲಿ ವಿಟಮಿನ್‌ ಇ ಅಂಶ ಇರುವುದರಿಂದ ಚರ್ಮಕ್ಕೆ ಹೊಳಪು ನೀಡಲು ಸಹಾಯ ಮಾಡುತ್ತದೆ. ನಿತ್ಯ ತಪ್ಪದೆ ಕುದಿಸಿದ ಜೀರಿಗೆ ನೀರನ್ನು ಕುಡಿಯುತ್ತ ಬಂದರೆ ಮುಖದಲ್ಲಿನ ಸುಕ್ಕುಗಳು ನಿವಾರಣೆಯಾಗುತ್ತದೆ.

ರೋಗ ನಿರೋಧಕ ಶಕ್ತಿ ವೃದ್ಧಿ:

ಜೀರಿಗೆ ಜೀರ್ಣಕ್ರಿಯೆ ವ್ಯವಸ್ಥೆಯನ್ನು ಆರೋಗ್ಯವಾಗಿಡುವುದರೊಂದಿಗೆ ಪ್ರತಿರೋಧಕ ಶಕ್ತಿ ವೃದ್ಧಿಸುತ್ತದೆ. ಜೀರಿಗೆಯಲ್ಲಿ ಹೆಚ್ಚಿನ ಮಟ್ಟದ ವಿಟಮಿನ್ ಎ ಮತ್ತು ಸಿ ಇದೆ. ಇವುಗಳು ರೋಗನಿರೋಧಕಗಳಾಗಿ ಕೆಲಸ ಮಾಡಿ ಸೋಂಕಿನ ವಿರುದ್ಧ ಹೋರಾಡಲು ಸಹಕಾರಿಯಾಗಿದೆ.

ಚಯಾಪಚಯ ಹೆಚ್ಚಿಸುತ್ತದೆ:

ಜೀರಿಗೆ ನೀರು ಚಯಾಪಚಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಹೀಗಾಗಿ, ಜೀರಾ ನೀರು ತೂಕ ನಷ್ಟಕ್ಕೆ ಪ್ರಯೋಜನಕಾರಿ ಎಂದು ಸಾಬೀತಾಗಿದೆ. ಏಕೆಂದರೆ ಇದು ಕ್ಯಾಲೋರಿ ಕಡಿಮೆ ಮಾಡುವ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ. ಒಂದು ಟೀ ಚಮಚ ಜೀರಿಗೆ 7-8 ಕ್ಯಾಲೋರಿಗಳನ್ನು ಹೊಂದಿರುತ್ತದೆ.

*ಕಾವ್ಯಶ್ರೀ

ಟಾಪ್ ನ್ಯೂಸ್

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ರೋಮಾಂಚನಗೊಳಿಸುವ ಡಿಸ್ನಿ ಲೋಕ…. ; ಇಲ್ಲಿ ಎಲ್ಲವೂ ಕಣ್ಣೆದುರಿಗೆ

Disneyland: ರೋಮಾಂಚನಗೊಳಿಸುವ ಡಿಸ್ನಿ ಲೋಕ….ಇಲ್ಲಿ ಎಲ್ಲವೂ ಕಣ್ಣೆದುರಿಗೆ…

kambala-main

Kambala; ಹೀಗೆಯೇ ಮುಂದುವರಿದರೆ ಇರಬಹುದೇ ‘ಕಂಬುಲ ನನ ದುಂಬುಲಾ’?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.