2022ರ ಅಂತ್ಯಕ್ಕೆ ದೇಶಾದ್ಯಂತ 1.5 ಲಕ್ಷ ಆಯುಷ್ಮಾನ್‌ ಆರೋಗ್ಯ ಕೇಂದ್ರ


Team Udayavani, Feb 25, 2020, 3:08 AM IST

2022kke

ಬೆಂಗಳೂರು: 2022ರ ಅಂತ್ಯಕ್ಕೆ ರಾಜ್ಯದ 9 ಸಾವಿರ ಆರೋಗ್ಯ ಕೇಂದ್ರಗಳನ್ನು ಸೇರಿದಂತೆ ದೇಶದ 1.5 ಲಕ್ಷ ಆರೋಗ್ಯ ಕೇಂದ್ರಗಳನ್ನು “ಆಯುಷ್ಮಾನ್‌ ಭಾರತ ಆರೋಗ್ಯ ಮತ್ತು ಕ್ಷೇಮ ಕೇಂದ್ರ’ಗಳಾಗಿ ಮೇಲ್ದರ್ಜೆಗೇರಿಸುವ ಮೂಲಕ ಗುಣಮಟ್ಟದ ಸೇವೆಗಳನ್ನು ಒದಗಿಸಲಾಗುವುದು ಎಂದು ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯ ಜಂಟಿ ಕಾರ್ಯದರ್ಶಿ ವಿಕಾಸ್‌ ಶೀಲ್‌ ತಿಳಿಸಿದರು.

ಸೋಮವಾರ ನಗರದ ಐಎಎಸ್‌ ಆಫೀಸರ್ ಅಸೋಸಿ ಯೇಷನ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ 2018ರಿಂದ ದೇಶದೆಲ್ಲೆಡೆ ಉಪ-ಕೇಂದ್ರಗಳು (5 ಸಾವಿರ ಜನಸಂಖ್ಯೆಯುಳ್ಳ ಗ್ರಾಮೀಣ ಪ್ರದೇಶ ಆರೋಗ್ಯ ಕೇಂದ್ರ), ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು “ಆಯುಷ್ಮಾನ್‌ ಭಾರತ ಆರೋಗ್ಯ ಮತ್ತು ಕ್ಷೇಮ ಕೇಂದ್ರ’ಗಳನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ.

ಸದ್ಯ ದೇಶಾದ್ಯಂತ 30,690 ಸಾವಿರ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಅವುಗಳ ಸಂಖ್ಯೆಯನ್ನು 2021ರಲ್ಲಿ 70 ಸಾವಿರ, 2022 ಮಾರ್ಚ್‌ಗೆ 1.1 ಲಕ್ಷ , 2022 ಡಿಸೆಂಬರ್‌ ಅಂತ್ಯಕ್ಕೆ 1.5 ಲಕ್ಷಕ್ಕೇರಿಸಲಾಗುವುದು. ಅಂತೆಯೇ ಕರ್ನಾಟಕದಲ್ಲಿ ಈಗಾಲೇ 1,930 ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ಅವುಗಳ ಸಂಖ್ಯೆಯನ್ನು 9 ಸಾವಿರಕ್ಕೇರಿಸಲಾಗುವುದು ಎಂದರು.

ಸೇವೆಗಳ ಹೆಚ್ಚಳ: ಆಯುಷ್ಮಾನ್‌ ಭಾರತ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ವಿಸ್ತರಣೆ ಜತೆಗೆ ಈ ಕೇಂದ್ರಗಳಲ್ಲಿ ಸಿಗುತ್ತಿರುವ 7ಆರೋಗ್ಯ ಸೇವೆಗಳನ್ನು 12ಕ್ಕೆ ಹೆಚ್ಚಳ ಮಾಡಲಾಗುವುದು. ಪ್ರಸ್ತುತ ಪ್ರಸೂತಿ ಹಾಗೂ ಹೆರಿಗೆ, ನವಜಾತ ಶಿಶುಗಳ ಆರೈಕೆ, ಮಕ್ಕಳ ಆರೋಗ್ಯ ಸೇವೆಗಳು, ಸಾಂಕ್ರಾಮಿಕ ರೋಗಗಳಿಗೆ ಚಿಕಿತ್ಸೆ, ಹೊರ ರೋಗಿಗಳ ಸೇವೆ, ಕುಟುಂಬ ಯೋಜನೆ ಸೇವೆಗಳು, ಕ್ಯಾನ್ಸರ್‌, ರಕ್ತದೊತ್ತಡ, ಮಧುಮೇಹದಂಥ ರೋಗಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.

ಇವುಗಳ ಜತೆಗೆ ಹೆಚ್ಚುವರಿ ಸೇವೆಗಳಾಗಿ ಬಾಯಿ ಆರೋಗ್ಯ ಆರೈಕೆ, ನೇತ್ರ ಹಾಗೂ ಕಿವಿ ಸಮಸ್ಯೆಗಳು, ತುರ್ತು ಸೇವೆಗಳಾದ ಅಪಘಾತ ಹಾಗೂ ಸುಟ್ಟಗಾಯಗಳಿಗೆ ಚಿಕಿತ್ಸೆ, ಮಾನಸಿಕ ಆರೋಗ್ಯ ಪ್ರಾಥಮಿಕ ಚಿಕಿತ್ಸೆ, ರೋಗ ಉಪಶಮನ ಹಾಗೂ ವಯೋವೃದ್ಧರ ಚಿಕಿತ್ಸಾ ಕೇಂದ್ರದ ಸೇವೆಗಳನ್ನು ಆರಂಭಿಸಲಾಗುತ್ತಿದೆ. ಅಸಾಂಕ್ರಾಮಿಕ ರೋಗ ಪರೀಕ್ಷೆಯಲ್ಲಿ ಹೆಚ್ಚುವರಿಯಾಗಿ ಕ್ಷಯ (ಟಿಬಿ) ಹಾಗೂ ಕುಷ್ಠ ರೋಗವನ್ನು ಸೇರಿಸಲಾಗುತ್ತಿದೆ ಎಂದು ತಿಳಿಸಿದರು.

10 ಕೋಟಿಗೂ ಅಧಿಕ ಮಂದಿ ಭೇಟಿ: 2018ರಿಂದ ದೇಶಾದ್ಯಂತ 10.07 ಕೋಟಿ ಮಂದಿ ಆಯುಷ್ಮಾನ್‌ ಭಾರತ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಭೇಟಿ ನೀಡಿದ್ದಾರೆ. ವಿವಿಧ ರೋಗಗಳ ಪರೀಕ್ಷೆ ಜತೆಗೆ 8 ಲಕ್ಷ ಯೋಗ ಹಾಗೂ ಕ್ಷೇಮ ಶಿಬಿರಗಳನ್ನು ಆಯೋಜಿಸಲಾಗಿದೆ. ಕೇಂದ್ರಗಳಲ್ಲಿ ಹೊರ ರೋಗಿಗಳ ಸಂಖ್ಯೆ 15-30ರವರೆಗೆ ಹೆಚ್ಚಿದೆ. ಇದರಿಂದಾಗಿ ನೇರ ಮತ್ತು ಪರೋಕ್ಷ ಖರ್ಚು ಕಡಿಮೆಯಾಗಿದೆ ಎಂದು ಹೇಳಿದರು.

ಟೆಲಿ ಕನ್ಸಲ್ಟೆಷನ್‌ ಸರ್ವೀಸ್‌: ಗ್ರಾಮೀಣ ರೋಗಿಗಳಿಗೆ ಪರಿಣಿತರ ಸೇವೆಯನ್ನು ಸುಲಭವಾಗಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಆಯುಷ್ಮಾನ್‌ ಭಾರತ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಟೆಲಿ ಕನ್ಸಲ್ಟೆಷನ್‌ (ದೂರವಾಣಿ ಆಪ್ತ ಸಮಾಲೋಷನೆ) ಸೌಲಭ್ಯವನ್ನು ಒದಗಿಸಲು ಕೇಂದ್ರ ಆರೋಗ್ಯ ಇಲಾಖೆ ಮುಂದಾಗಿದೆ. ಒಮ್ಮೆ ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ ರೋಗಿಗಳು ಮುಂದಿನ ದಿನಗಳಲ್ಲಿ ಈ ಕೇಂದ್ರಗಳಿಗೆ ಭೇಟಿ ನೀಡಿದರೆ ದೂರವಾಣಿಯ ಮೂಲಕ ಹಿಂದೆ ಚಿಕಿತ್ಸೆ ನೀಡಿದ ವೈದ್ಯರ ಅಥವಾ ಪರಿಣಿತ ವೈದ್ಯರ ಆಪ್ತಸಮಾಲೋಚನೆ ಸೌಲಭ್ಯ ಲಭ್ಯವಾಗಲಿದೆ.

ಕಲಬೆರಕೆ ಪತ್ತೆಗೆ ಮ್ಯಾಜಿಕ್‌ ಬಾಕ್ಸ್‌: ಸ್ಥಳೀಯ ಮಟ್ಟದಲ್ಲಿಯೇ ಆಹಾರ ಪೌಷ್ಟಿಕತೆ, ಕಲಬೆರಕೆಯನ್ನು ಅಳತೆ ಮಾಡಲು ಆಯುಷ್ಮಾನ್‌ ಭಾರತ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಆಹಾರ ಪರೀಕ್ಷೆಗೆ ಅಗತ್ಯ ವ್ಯವಸ್ಥೆ ಮಾಡಲಾಗುತ್ತಿದೆ. ಮುಂದಿನ ವರ್ಷದಿಂದ ಈ ಸೇವೆ ಆರಂಭವಾಗಲಿದ್ದು, ಅಗತ್ಯ ಯಂತ್ರೋಪಕರಣ ಗಳನ್ನು ನೀಡಲಾಗುತ್ತದೆ. ಇದರಿಂದ ಅಗತ್ಯ ಪೌಷ್ಟಿಕ ಆಹಾರ ಬಳಸಿ ಸದೃಢವಾಗಲು ಸಹಕಾರಿ ಎನ್ನುತ್ತಾರೆ ಕೇಂದ್ರ ಆರೋಗ್ಯ ಇಲಾಖೆ ಅಧಿಕಾರಿಗಳು.

ವೇತನ ನೀಡಲು ಸಾಧ್ಯವಿಲ್ಲ: ಆಶಾ ಕಾರ್ಯಕರ್ತೆಯರಿಗೆ ಸೂಕ್ತ ವೇತನ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯ ಜಂಟಿ ಕಾರ್ಯದರ್ಶಿ ವಿಕಾಸ್‌ ಶೀಲ್‌, ಆಶಾ ಕಾರ್ಯಕರ್ತರು ಸ್ವಯಂ ಸೇವಕರು. ಅವರನ್ನು ಪ್ರೋತ್ಸಾಹ ಧನ ಯೋಜನೆಯಡಿ ನೇಮಕ ಮಾಡಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದಿಂದ ಯಾವುದೇ ನಿರ್ದಿಷ್ಟ ವೇತನ ನೀಡಲು ಸಾಧ್ಯವಿಲ್ಲ. ಅಗತ್ಯವಿದ್ದರೆ ರಾಜ್ಯ ಸರ್ಕಾರ ವೇತನ ನೀಡಬಹುದು. ಇದಕ್ಕೆ ಕೇಂದ್ರ ಆರೋಗ್ಯ ಇಲಾಖೆಯಿಂದ ಯಾವುದೇ ಅಭ್ಯಂತರವಿಲ್ಲ ಎಂದರು.

(2018 ಏಪ್ರಿಲ್‌ರಿಂದ 2020 ಫೆಬ್ರವರಿ )
1,930 ರಾಜ್ಯದ ಆಯುಷ್ಮಾನ್‌ ಭಾರತ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು
59,56,152 ಮಂದಿ ಭೇಟಿ ನೀಡಿದ ಹೊರ ರೋಗಿಗಳು (ಒಪಿಡಿ)
57,02,236 ಒಟ್ಟು ಔಷದಿ ವಿತರಣೆ
15,84,771 ಜನಕ್ಕೆ ಪ್ರಯೋಗ ಸೌಲಭ್ಯ
40,119 ಒಟ್ಟು ನಡೆದ ಯೋಗ ಶಿಬಿರಗಳು
6,71,021 ಮಂದಿಗೆ ರಕ್ತದೊತ್ತಡ ತಪಾಸಣೆ
6,20,267 ಜನರಿಗೆ ಮಧುಮೇಹ ತಪಾಸಣೆ
2,47,305 ಮಂದಿಗೆ ಬಾಯಿ ಕ್ಯಾನ್ಸರ್‌ ತಪಾಸಣೆ
36,557 ಜನರಿಗೆ ಸ್ತನ ಕ್ಯಾನ್ಸರ್‌ ತಪಾಸಣೆ
12,233 ಮಂದಿಗೆ ಗರ್ಭ ಕೋರಳಿನ ಕ್ಯಾನ್ಸರ್‌ ತಪಾಸಣೆ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.