ಸ್ಥಳಾಂತರಕ್ಕೆ ತೆಂಕಿಲ ದರ್ಖಾಸಿನ 13 ಕುಟುಂಬ ನಕಾರ

5 ಲಕ್ಷದಲ್ಲಿ 1 ಲಕ್ಷ ರೂ. ಪಾವತಿ: ಉಳಿದ ಮೊತ್ತ ರದ್ದು?

Team Udayavani, Jul 10, 2020, 5:50 AM IST

ಸ್ಥಳಾಂತರಕ್ಕೆ ತೆಂಕಿಲ ದರ್ಖಾಸಿನ 13 ಕುಟುಂಬ ನಕಾರ

ವಿಶೇಷ ವರದಿ- ಪುತ್ತೂರು: ಕಳೆದ ವರ್ಷ ನಗರದ ಹೊರ ವಲಯದ ತೆಂಕಿಲ ದರ್ಖಾಸು ಗುಡ್ಡದಲ್ಲಿ ಬಿರುಕು ಕಾಣಿಸಿಕೊಂಡ ಪರಿಣಾಮ 13 ಕುಟುಂಬಗಳಿಗೆ ಸರಕಾರ ನೀಡಿದ ಬದಲಿ ಜಾಗಕ್ಕೆ ತೆರಳಲು ನಿವಾಸಿಗಳು ನಿರಾಕರಿಸಿರುವ ಹಿನ್ನೆಲೆಯಲ್ಲಿ ಮನೆ ನಿರ್ಮಾಣಕ್ಕೆ ಬಿಡುಗಡೆಗೊಂಡಿರುವ ಮೊತ್ತ ರದ್ದಾಗಲಿದೆಯೋ ಎಂಬ ಪ್ರಶ್ನೆ ಮೂಡಿದೆ!

ದರ್ಖಾಸಿನ ಜಾಗ ಸುರಕ್ಷಿತವಾಗಿದ್ದು, ತಾವು ಅಲ್ಲಿಂದ ತೆರಳುವುದಿಲ್ಲ ಎಂದು ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ 13 ಕುಟುಂಬಗಳು ಸ್ಪಷ್ಟಪಡಿಸಿರುವ ಕಾರಣ ನಗರಾಡಳಿತ ನೀಡಿದ ಬದಲಿ ಜಾಗದಲ್ಲಿ ಮನೆ ನಿರ್ಮಾಣ ಕಾರ್ಯ ಸ್ಥಗಿತವಾಗಿದೆ.

ಗುಡ್ಡ ಬಿರುಕು: ಸ್ಥಳಾಂತರ
2019ರ ಆ. 11ರಂದು ಗುಡ್ಡದಲ್ಲಿ ಸುಮಾರು 200 ಮೀಟರ್‌ ಉದ್ದದವರೆಗೆ ಬಿರುಕು ಕಂಡು ಬಂದಿತ್ತು. ಭೂ ವಿಜ್ಞಾನ ಇಲಾಖೆ ಪರಿಶೀಲಿಸಿ ಅಪಾಯದ ಸಾಧ್ಯತೆ ಬಗ್ಗೆ ಎಚ್ಚರಿಕೆ ನೀಡಿತು. ಬಳಿಕ ಅಧಿಕಾರಿಗಳು 13 ಕುಟುಂಬಗಳನ್ನು ಸ್ಥಳಾಂತರಿಸಲು ಸೂಚಿಸಿದ್ದರೂ ಪ್ರಾರಂಭದಲ್ಲಿ ನಿವಾಸಿಗಳು ನಿರಾಕರಿಸಿದ್ದರು. ಕೊನೆಗೂ ಅಧಿಕಾರಿಗಳ, ಜನಪ್ರತಿನಿಧಿಗಳ ಒತ್ತಾಸೆಗೆ ಸ್ಥಳಾಂತರಕ್ಕೆ ಒಪ್ಪಿ ಕೆಲವು ಕುಟುಂಬ ಗಳು ಸಂಬಂಧಿಕರ ಮನೆಗೆ, ಇನ್ನೂ ಕೆಲವು ಕುಟುಂಬಗಳು ನಗರದ ಸಮುದಾಯ ಭವನದಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗಿತ್ತು.

ಮಿಶ್ರ ವರದಿ
ಪರಿಸ್ಥಿತಿ ಸಹಜ ಸ್ಥಿತಿಗೆ ಬಂದ ಬಳಿಕ ಮೂರು ತಂಡಗಳು ಬಿರುಕು ಬಿಟ್ಟ ಸ್ಥಳ ವಾಸಕ್ಕೆ ಸೂಕ್ತವೇ ಎಂಬ ಕುರಿತು ಪರಿಶೀಲನೆ ನಡೆಸಿತು. ಈ ಸಂದರ್ಭ ಭೂ ಕುಸಿತ ಸಾಧ್ಯತೆಯ ಬಗ್ಗೆ ಮಿಶ್ರ ವರದಿಗಳು ಬಂದಿತು.

ಭೂ ಕುಸಿತ ಅಲ್ಲ ಎಂದು ಒಂದು ತಂಡ, ಹೌದು ಎಂದು ಇನ್ನೊಂದು ತಂಡ ವರದಿ ನೀಡಿದ ಕಾರಣ ಪರಿಶೀಲನ ವರದಿ ಬಗ್ಗೆಯೇ ಸಂತ್ರಸ್ತ ಕುಟುಂಬಗಳಿಗೆ ಅನುಮಾನ ಮೂಡಿತು. ಹೀಗಾಗಿ ಗುಡ್ಡದಲ್ಲಿ ಸಂಭವಿಸಿದ್ದು, ತಾತ್ಕಾಲಿಕ ಬಿರುಕು ಹೊರತು ಭೂಕುಸಿತ ಅಲ್ಲ ಎಂದು ಸ್ಥಳೀಯರು ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ತಿಳಿಸಿ ತಾವು ಇಲ್ಲೆ ವಾಸಿಸುವುದಾಗಿ ಸ್ಪಷ್ಟಪಡಿಸಿದ್ದರು.

ಬದಲಿ ಜಾಗಕ್ಕೆ ತೆರಳಲು ನಕಾರ!
ಸಂತ್ರಸ್ತ ಕುಟುಂಬಗಳಿಗೆ ಸರಕಾರ ಪ್ರಾಕೃತಿಕ ವಿಕೋಪ ಪರಿಹಾರದಡಿ ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ಘೋಷಿಸಿತು. ನಗರ ಪ್ರದೇಶ ವ್ಯಾಪ್ತಿಯ ಬನ್ನೂರು ಬಳಿ ಜಾಗ ಗುರುತಿಸಿ ಭೂ ಸಮತ್ತಟ್ಟು ಮಾಡಲಾಗಿದೆ. ಆದರೆ ಸಂತ್ರಸ್ತ ಕುಟುಂಬಗಳು ಅಲ್ಲಿಗೆ ತೆರಳಲು ನಿರಾಕರಿಸಿವೆ. ಯಾವುದೇ ಕಾರಣಕ್ಕೂ ತಾವಿರುವ ಜಾಗದಿಂದ ತೆರಳುವುದಿಲ್ಲ. ನಮಗೆ ತೊಂದರೆ ಆದರೆ ನಾವೇ ಜವಾಬ್ದಾರರು. ಈ ಬಗ್ಗೆ ಬಾಂಡ್‌ನ‌ಲ್ಲಿ ಬೇಕಾದರೂ ಬರೆದು ಕೊಡುತ್ತೇವೆ ಎಂದಿರುವ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳು ಮಾಹಿತಿ ನೀಡಿದ್ದಾರೆ.

ನಗರಾಡಳಿತಕ್ಕೆ ಸ್ಪಷ್ಟ ಸೂಚನೆ ಬಂದಿಲ್ಲ
ಪ್ರಥಮ ಹಂತದಲ್ಲಿ ಫೌಂಡೇಶನ್‌ ನಿರ್ಮಾಣಕ್ಕೆಂದು 1 ಲಕ್ಷ ರೂ. ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ. ಕಾಮಗಾರಿ ಆರಂಭವಾಗದ ಕಾರಣ ಎರಡನೇ ಹಂತದ ಹಣ ಪಾವತಿಸಲು ಸಾಧ್ಯವಿಲ್ಲ. ಮನೆ ನಿರ್ಮಾಣದ ವಿವಿಧ ಹಂತಕ್ಕೆ ತಕ್ಕಂತೆ ಹಣ ಬಿಡುಗಡೆ ಮಾಡುವ ಅಧಿಕಾರ ನಗರಸಭೆಗೆ ನೀಡಲಾಗಿದೆ. ಉಳಿದ 4 ಲಕ್ಷ ರೂ. ಸರಕಾರಕ್ಕೆ ವಾಪಸಾಗುವ ಅಥವಾ ಬದಲಿ ಜಾಗ, ಮನೆ ತಿರಸ್ಕೃತ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಸರಕಾರದಿಂದ ನಗರಾಡಳಿತಕ್ಕೆ ಸ್ಪಷ್ಟವಾದ ಸೂಚನೆ ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕ್ರಿಯೆ ಸ್ಥಗಿತ
ಎಲ್ಲ 13 ಕುಟುಂಬಗಳಿಗೆ ಬನ್ನೂರು ಬಳಿ ನಿವೇಶನ ನೀಡುವ ಸ್ಥಳ ಗುರುತಿಸಿ ಭೂ ಸಮತ್ತಟ್ಟು ಮಾಡ ಲಾಗಿತ್ತು. ಪ್ರಥಮ ಹಂತದಲ್ಲಿ 1 ಲಕ್ಷ ರೂ. ನೀಡಲಾಗಿದೆ. ಆದರೆ ಅವರು ತೆಂಕಿಲ ದರ್ಖಾಸಿನಲ್ಲೇ ಉಳಿದುಕೊಳ್ಳುವುದಾಗಿ ತಿಳಿಸಿದ್ದಾರೆ. ಹೀಗಾಗಿ ಮುಂದಿನ ಹಂತದ ಪ್ರಕ್ರಿಯೆ ಸ್ಥಗಿತವಾಗಿದೆ.
-ರೂಪಾ ಶೆಟ್ಟಿ , ಪೌರಯುಕ್ತೆ, ನಗರಸಭೆ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.